Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....