Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...