Homeಮುಖಪುಟಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

- Advertisement -
- Advertisement -

ಸೆನ್ಯಾರ್ ಚಂಡಮಾರುತದ ಪರಿಣಾಮ ಇಂಡೋನೇಷ್ಯಾದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ- ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 248ಕ್ಕೆ ಏರಿಕೆಯಾಗಿದೆ. ರಕ್ಷಣಾ ತಂಡಗಳು ದುರಂತ ಸ್ಥಳಗಳನ್ನು ತಲುಪಲು ಹರಸಾಹಸಪಡುತ್ತಿವೆ. ಇನ್ನೂ ಮಳೆ ಮುಂದುವರಿದರೆ ಮತ್ತು ಅವಶೇಷಗಳಡಿ ಸಿಲುಕಿರುವ ಶವಗಳು ಪತ್ತೆಯಾದರೆ ಮೃತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ಬಿಎನ್‌ಪಿಬಿ) ಶನಿವಾರ, ಈ ವಾರದ ಭೀಕರ ಪ್ರವಾಹ ಮತ್ತು ಭೂಕುಸಿತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 248 ತಲುಪಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ತಿಳಿಸಿದೆ. ಪಶ್ಚಿಮ ಸುಮಾತ್ರದ ಆಗಮ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಕರ್ತರು ಹೆಚ್ಚಿನ ಶವಗಳನ್ನು ಪತ್ತೆ ಹಚ್ಚಿದ ನಂತರ ಈ ಮಾಹಿತಿ ಲಭ್ಯವಾಗಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಬಿಎನ್‌ಪಿಬಿ ತಿಳಿಸಿದೆ.

“ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಏಕೆಂದರೆ, ಇನ್ನೂ ಅನೇಕ ಶವಗಳು ಪತ್ತೆಯಾಗಿಲ್ಲ ಮತ್ತು ಅನೇಕ ಪ್ರದೇಶಗಳಿಗೆ ರಕ್ಷಣಾ ತಂಡಗಳು ತಲುಪಲು ಸಾಧ್ಯವಾಗಿಲ್ಲ ಎಂದು ಬಿಎನ್‌ಬಿಪಿ ಮುಖ್ಯಸ್ಥ ಸುಹಾರ್ಯಾಂತೊ ಹೇಳಿದ್ದಾರೆ.

ಸುಮಾತ್ರಾ ಪ್ರಾಂತ್ಯದ ಒಟ್ಟು ಸಾವಿನ ಸಂಖ್ಯೆಯ ಮೊದಲ ಅಂದಾಜು 23 ಆಗಿತ್ತು. ಆದರೆ, ಶುಕ್ರವಾರ ರಾತ್ರಿ ಪಶ್ಚಿಮ ಸುಮಾತ್ರಾ ಪ್ರಾದೇಶಿಕ ವಿಪತ್ತು ನಿರ್ವಹಣೆ ಸಂಸ್ಥೆ (ರೀಜನಲ್ ಡಿಸಾಸ್ಟರ್ ಮಿಟಿಗೇಷನ್ ಏಜೆನ್ಸಿ) ವಕ್ತಾರ ಇಲ್ಹಾಮ್ ವಹಾಬ್ ಹೇಳಿದರಂತೆ, ಈಗ 61 ಜನರು ಸತ್ತಿದ್ದಾರೆ ಮತ್ತು 90 ಜನರು ಇನ್ನೂ ಕಾಣೆಯಾಗಿದ್ದಾರೆ.

ಒಟ್ಟು 75,219 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪಶ್ಚಿಮ ಸುಮಾತ್ರದಾದ್ಯಂತ ಒಟ್ಟು 106,806 ಜನರ ಮೇಲೆ ಪ್ರಕೃತಿ ವಿಕೋಪದ ಪರಿಣಾಮ ಬೀರಿದೆ ಎಂದು ಇಲ್ಹಾಮ್ ತಿಳಿಸಿದ್ದಾರೆ.

ಅಧಿಕಾರಿಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಉತ್ತರ ಸುಮಾತ್ರದಲ್ಲಿ 116 ಜನರು ಸಾವನ್ನಪ್ಪಿದ್ದಾರೆ. ಅಚೆ ಪ್ರಾಂತ್ಯದಲ್ಲಿ ಸಾವಿನ ಸಂಖ್ಯೆ ಕನಿಷ್ಠ 35 ಆಗಿದೆ.

ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್ ದೇಶಗಳ ಹಲವು ಭಾಗಗಳು ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಲಾವೃತಗೊಂಡಿವೆ. ಮಲಯ ಪರ್ಯಾಯ ದ್ವೀಪಕಲ್ಪ ಮತ್ತು ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ನಡುವಿನ ಮಲಕ್ಕಾ ಸಮುದ್ರದಲ್ಲಿಅಪರೂಪವಾಗಿ ರೂಪುಗೊಂಡ ಒಂದು ಉಷ್ಣವಲಯದ ಚಂಡಮಾರುತದಿಂದಾಗಿ, ಮೂರು ದೇಶಗಳಲ್ಲಿ ಒಟ್ಟಾರೆಯಾಗಿ ಸುಮಾರು 400 ಜನರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿಯ ವೇಳೆಗೆ ಥೈಲ್ಯಾಂಡ್‌ನ ಎಂಟು ದಕ್ಷಿಣ ಪ್ರಾಂತ್ಯಗಳಲ್ಲಿ ಕನಿಷ್ಠ 145 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಇದೇ ವೇಳೆ 3.5 ದಶಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಯ ಮಲೇಷ್ಯಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ನಿಂತರೂ, ಇಂಡೋನೇಷ್ಯಾದಲ್ಲಿ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಸಾವಿರಾರು ಕುಟುಂಬಗಳು ಸ್ಥಳಾಂತರಗೊಂಡಿದ್ದಾರೆ.

ಇಂಡೋನೇಷ್ಯಾದ ಉತ್ತರ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿದಿವೆ. ಪ್ರವಾಹದ ರಭಸಕ್ಕೆ ಪರ್ವತದ ತಪ್ಪಲಿನ ಗ್ರಾಮಗಳು ಕೊಚ್ಚಿ ಹೋಗಿವೆ. ಸಾವಿರಾರು ಮನೆಗಳು ಮತ್ತು ಕಟ್ಟಡಗಳು ಸಂಪೂರ್ಣ ಜಲಾವೃತಗೊಂಡಿವೆ.

ಹೆಚ್ಚು ಹಾನಿಗೊಳಗಾದ ಪ್ರದೇಶಗಳು ಹಾಳಾದ ರಸ್ತೆಗಳು ಮತ್ತು ಕಡಿತಗೊಂಡ ಸಂಪರ್ಕ ವ್ಯವಸ್ಥೆಗಳಿಂದಾಗಿ ರಕ್ಷಣಾ ತಂಡಗಳಿಂದ ಬಹುತೇಕ ಸಂಪೂರ್ಣವಾಗಿ ಬೇರ್ಪಟ್ಟಿವೆ. ಪರಿಹಾರ ಕಾರ್ಯಗಳು ಕುಸಿದುಬಿದ್ದ ಸೇತುವೆಗಳು, ಜಲಾವೃತಗೊಂಡ ರಸ್ತೆಗಳು ಮತ್ತು ಭಾರೀ ಯಂತ್ರೋಪಕರಣಗಳ ಕೊರತೆಯಿಂದಾಗಿ ವಿಳಂಬಗೊಂಡಿವೆ.

ಉತ್ತರ ಸುಮಾತ್ರಾ ಪ್ರಾಂತ್ಯದ ಸೆಂಟ್ರಲ್ ತಪನುಲಿಯ ತೀವ್ರ ಹಾನಿಗೊಳಗಾದ ಜಿಲ್ಲೆ ಮತ್ತು ಆ ಪ್ರದೇಶದ ಇತರ ಪ್ರದೇಶಗಳಿಗೆ ನೆರವು ಮತ್ತು ಸರಬರಾಜುಗಳನ್ನು ತಲುಪಿಸಲು ಪರಿಹಾರ ವಿಮಾನಗಳು ಕೆಲಸ ಮಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...