Homeಮುಖಪುಟಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

- Advertisement -
- Advertisement -

ಸೆನ್ಯಾರ್ ಚಂಡಮಾರುತದ ಪರಿಣಾಮ ಇಂಡೋನೇಷ್ಯಾದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ- ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 248ಕ್ಕೆ ಏರಿಕೆಯಾಗಿದೆ. ರಕ್ಷಣಾ ತಂಡಗಳು ದುರಂತ ಸ್ಥಳಗಳನ್ನು ತಲುಪಲು ಹರಸಾಹಸಪಡುತ್ತಿವೆ. ಇನ್ನೂ ಮಳೆ ಮುಂದುವರಿದರೆ ಮತ್ತು ಅವಶೇಷಗಳಡಿ ಸಿಲುಕಿರುವ ಶವಗಳು ಪತ್ತೆಯಾದರೆ ಮೃತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ಬಿಎನ್‌ಪಿಬಿ) ಶನಿವಾರ, ಈ ವಾರದ ಭೀಕರ ಪ್ರವಾಹ ಮತ್ತು ಭೂಕುಸಿತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 248 ತಲುಪಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ತಿಳಿಸಿದೆ. ಪಶ್ಚಿಮ ಸುಮಾತ್ರದ ಆಗಮ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಕರ್ತರು ಹೆಚ್ಚಿನ ಶವಗಳನ್ನು ಪತ್ತೆ ಹಚ್ಚಿದ ನಂತರ ಈ ಮಾಹಿತಿ ಲಭ್ಯವಾಗಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಬಿಎನ್‌ಪಿಬಿ ತಿಳಿಸಿದೆ.

“ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಏಕೆಂದರೆ, ಇನ್ನೂ ಅನೇಕ ಶವಗಳು ಪತ್ತೆಯಾಗಿಲ್ಲ ಮತ್ತು ಅನೇಕ ಪ್ರದೇಶಗಳಿಗೆ ರಕ್ಷಣಾ ತಂಡಗಳು ತಲುಪಲು ಸಾಧ್ಯವಾಗಿಲ್ಲ ಎಂದು ಬಿಎನ್‌ಬಿಪಿ ಮುಖ್ಯಸ್ಥ ಸುಹಾರ್ಯಾಂತೊ ಹೇಳಿದ್ದಾರೆ.

ಸುಮಾತ್ರಾ ಪ್ರಾಂತ್ಯದ ಒಟ್ಟು ಸಾವಿನ ಸಂಖ್ಯೆಯ ಮೊದಲ ಅಂದಾಜು 23 ಆಗಿತ್ತು. ಆದರೆ, ಶುಕ್ರವಾರ ರಾತ್ರಿ ಪಶ್ಚಿಮ ಸುಮಾತ್ರಾ ಪ್ರಾದೇಶಿಕ ವಿಪತ್ತು ನಿರ್ವಹಣೆ ಸಂಸ್ಥೆ (ರೀಜನಲ್ ಡಿಸಾಸ್ಟರ್ ಮಿಟಿಗೇಷನ್ ಏಜೆನ್ಸಿ) ವಕ್ತಾರ ಇಲ್ಹಾಮ್ ವಹಾಬ್ ಹೇಳಿದರಂತೆ, ಈಗ 61 ಜನರು ಸತ್ತಿದ್ದಾರೆ ಮತ್ತು 90 ಜನರು ಇನ್ನೂ ಕಾಣೆಯಾಗಿದ್ದಾರೆ.

ಒಟ್ಟು 75,219 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪಶ್ಚಿಮ ಸುಮಾತ್ರದಾದ್ಯಂತ ಒಟ್ಟು 106,806 ಜನರ ಮೇಲೆ ಪ್ರಕೃತಿ ವಿಕೋಪದ ಪರಿಣಾಮ ಬೀರಿದೆ ಎಂದು ಇಲ್ಹಾಮ್ ತಿಳಿಸಿದ್ದಾರೆ.

ಅಧಿಕಾರಿಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಉತ್ತರ ಸುಮಾತ್ರದಲ್ಲಿ 116 ಜನರು ಸಾವನ್ನಪ್ಪಿದ್ದಾರೆ. ಅಚೆ ಪ್ರಾಂತ್ಯದಲ್ಲಿ ಸಾವಿನ ಸಂಖ್ಯೆ ಕನಿಷ್ಠ 35 ಆಗಿದೆ.

ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್ ದೇಶಗಳ ಹಲವು ಭಾಗಗಳು ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಲಾವೃತಗೊಂಡಿವೆ. ಮಲಯ ಪರ್ಯಾಯ ದ್ವೀಪಕಲ್ಪ ಮತ್ತು ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ನಡುವಿನ ಮಲಕ್ಕಾ ಸಮುದ್ರದಲ್ಲಿಅಪರೂಪವಾಗಿ ರೂಪುಗೊಂಡ ಒಂದು ಉಷ್ಣವಲಯದ ಚಂಡಮಾರುತದಿಂದಾಗಿ, ಮೂರು ದೇಶಗಳಲ್ಲಿ ಒಟ್ಟಾರೆಯಾಗಿ ಸುಮಾರು 400 ಜನರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿಯ ವೇಳೆಗೆ ಥೈಲ್ಯಾಂಡ್‌ನ ಎಂಟು ದಕ್ಷಿಣ ಪ್ರಾಂತ್ಯಗಳಲ್ಲಿ ಕನಿಷ್ಠ 145 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಇದೇ ವೇಳೆ 3.5 ದಶಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಯ ಮಲೇಷ್ಯಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ನಿಂತರೂ, ಇಂಡೋನೇಷ್ಯಾದಲ್ಲಿ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಸಾವಿರಾರು ಕುಟುಂಬಗಳು ಸ್ಥಳಾಂತರಗೊಂಡಿದ್ದಾರೆ.

ಇಂಡೋನೇಷ್ಯಾದ ಉತ್ತರ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿದಿವೆ. ಪ್ರವಾಹದ ರಭಸಕ್ಕೆ ಪರ್ವತದ ತಪ್ಪಲಿನ ಗ್ರಾಮಗಳು ಕೊಚ್ಚಿ ಹೋಗಿವೆ. ಸಾವಿರಾರು ಮನೆಗಳು ಮತ್ತು ಕಟ್ಟಡಗಳು ಸಂಪೂರ್ಣ ಜಲಾವೃತಗೊಂಡಿವೆ.

ಹೆಚ್ಚು ಹಾನಿಗೊಳಗಾದ ಪ್ರದೇಶಗಳು ಹಾಳಾದ ರಸ್ತೆಗಳು ಮತ್ತು ಕಡಿತಗೊಂಡ ಸಂಪರ್ಕ ವ್ಯವಸ್ಥೆಗಳಿಂದಾಗಿ ರಕ್ಷಣಾ ತಂಡಗಳಿಂದ ಬಹುತೇಕ ಸಂಪೂರ್ಣವಾಗಿ ಬೇರ್ಪಟ್ಟಿವೆ. ಪರಿಹಾರ ಕಾರ್ಯಗಳು ಕುಸಿದುಬಿದ್ದ ಸೇತುವೆಗಳು, ಜಲಾವೃತಗೊಂಡ ರಸ್ತೆಗಳು ಮತ್ತು ಭಾರೀ ಯಂತ್ರೋಪಕರಣಗಳ ಕೊರತೆಯಿಂದಾಗಿ ವಿಳಂಬಗೊಂಡಿವೆ.

ಉತ್ತರ ಸುಮಾತ್ರಾ ಪ್ರಾಂತ್ಯದ ಸೆಂಟ್ರಲ್ ತಪನುಲಿಯ ತೀವ್ರ ಹಾನಿಗೊಳಗಾದ ಜಿಲ್ಲೆ ಮತ್ತು ಆ ಪ್ರದೇಶದ ಇತರ ಪ್ರದೇಶಗಳಿಗೆ ನೆರವು ಮತ್ತು ಸರಬರಾಜುಗಳನ್ನು ತಲುಪಿಸಲು ಪರಿಹಾರ ವಿಮಾನಗಳು ಕೆಲಸ ಮಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...