Homeಮುಖಪುಟಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

- Advertisement -
- Advertisement -

ಸೆನ್ಯಾರ್ ಚಂಡಮಾರುತದ ಪರಿಣಾಮ ಇಂಡೋನೇಷ್ಯಾದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ- ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 248ಕ್ಕೆ ಏರಿಕೆಯಾಗಿದೆ. ರಕ್ಷಣಾ ತಂಡಗಳು ದುರಂತ ಸ್ಥಳಗಳನ್ನು ತಲುಪಲು ಹರಸಾಹಸಪಡುತ್ತಿವೆ. ಇನ್ನೂ ಮಳೆ ಮುಂದುವರಿದರೆ ಮತ್ತು ಅವಶೇಷಗಳಡಿ ಸಿಲುಕಿರುವ ಶವಗಳು ಪತ್ತೆಯಾದರೆ ಮೃತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ಬಿಎನ್‌ಪಿಬಿ) ಶನಿವಾರ, ಈ ವಾರದ ಭೀಕರ ಪ್ರವಾಹ ಮತ್ತು ಭೂಕುಸಿತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 248 ತಲುಪಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ತಿಳಿಸಿದೆ. ಪಶ್ಚಿಮ ಸುಮಾತ್ರದ ಆಗಮ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಕರ್ತರು ಹೆಚ್ಚಿನ ಶವಗಳನ್ನು ಪತ್ತೆ ಹಚ್ಚಿದ ನಂತರ ಈ ಮಾಹಿತಿ ಲಭ್ಯವಾಗಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಬಿಎನ್‌ಪಿಬಿ ತಿಳಿಸಿದೆ.

“ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಏಕೆಂದರೆ, ಇನ್ನೂ ಅನೇಕ ಶವಗಳು ಪತ್ತೆಯಾಗಿಲ್ಲ ಮತ್ತು ಅನೇಕ ಪ್ರದೇಶಗಳಿಗೆ ರಕ್ಷಣಾ ತಂಡಗಳು ತಲುಪಲು ಸಾಧ್ಯವಾಗಿಲ್ಲ ಎಂದು ಬಿಎನ್‌ಬಿಪಿ ಮುಖ್ಯಸ್ಥ ಸುಹಾರ್ಯಾಂತೊ ಹೇಳಿದ್ದಾರೆ.

ಸುಮಾತ್ರಾ ಪ್ರಾಂತ್ಯದ ಒಟ್ಟು ಸಾವಿನ ಸಂಖ್ಯೆಯ ಮೊದಲ ಅಂದಾಜು 23 ಆಗಿತ್ತು. ಆದರೆ, ಶುಕ್ರವಾರ ರಾತ್ರಿ ಪಶ್ಚಿಮ ಸುಮಾತ್ರಾ ಪ್ರಾದೇಶಿಕ ವಿಪತ್ತು ನಿರ್ವಹಣೆ ಸಂಸ್ಥೆ (ರೀಜನಲ್ ಡಿಸಾಸ್ಟರ್ ಮಿಟಿಗೇಷನ್ ಏಜೆನ್ಸಿ) ವಕ್ತಾರ ಇಲ್ಹಾಮ್ ವಹಾಬ್ ಹೇಳಿದರಂತೆ, ಈಗ 61 ಜನರು ಸತ್ತಿದ್ದಾರೆ ಮತ್ತು 90 ಜನರು ಇನ್ನೂ ಕಾಣೆಯಾಗಿದ್ದಾರೆ.

ಒಟ್ಟು 75,219 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪಶ್ಚಿಮ ಸುಮಾತ್ರದಾದ್ಯಂತ ಒಟ್ಟು 106,806 ಜನರ ಮೇಲೆ ಪ್ರಕೃತಿ ವಿಕೋಪದ ಪರಿಣಾಮ ಬೀರಿದೆ ಎಂದು ಇಲ್ಹಾಮ್ ತಿಳಿಸಿದ್ದಾರೆ.

ಅಧಿಕಾರಿಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಉತ್ತರ ಸುಮಾತ್ರದಲ್ಲಿ 116 ಜನರು ಸಾವನ್ನಪ್ಪಿದ್ದಾರೆ. ಅಚೆ ಪ್ರಾಂತ್ಯದಲ್ಲಿ ಸಾವಿನ ಸಂಖ್ಯೆ ಕನಿಷ್ಠ 35 ಆಗಿದೆ.

ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್ ದೇಶಗಳ ಹಲವು ಭಾಗಗಳು ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಲಾವೃತಗೊಂಡಿವೆ. ಮಲಯ ಪರ್ಯಾಯ ದ್ವೀಪಕಲ್ಪ ಮತ್ತು ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ನಡುವಿನ ಮಲಕ್ಕಾ ಸಮುದ್ರದಲ್ಲಿಅಪರೂಪವಾಗಿ ರೂಪುಗೊಂಡ ಒಂದು ಉಷ್ಣವಲಯದ ಚಂಡಮಾರುತದಿಂದಾಗಿ, ಮೂರು ದೇಶಗಳಲ್ಲಿ ಒಟ್ಟಾರೆಯಾಗಿ ಸುಮಾರು 400 ಜನರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿಯ ವೇಳೆಗೆ ಥೈಲ್ಯಾಂಡ್‌ನ ಎಂಟು ದಕ್ಷಿಣ ಪ್ರಾಂತ್ಯಗಳಲ್ಲಿ ಕನಿಷ್ಠ 145 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಇದೇ ವೇಳೆ 3.5 ದಶಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಯ ಮಲೇಷ್ಯಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ನಿಂತರೂ, ಇಂಡೋನೇಷ್ಯಾದಲ್ಲಿ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಸಾವಿರಾರು ಕುಟುಂಬಗಳು ಸ್ಥಳಾಂತರಗೊಂಡಿದ್ದಾರೆ.

ಇಂಡೋನೇಷ್ಯಾದ ಉತ್ತರ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿದಿವೆ. ಪ್ರವಾಹದ ರಭಸಕ್ಕೆ ಪರ್ವತದ ತಪ್ಪಲಿನ ಗ್ರಾಮಗಳು ಕೊಚ್ಚಿ ಹೋಗಿವೆ. ಸಾವಿರಾರು ಮನೆಗಳು ಮತ್ತು ಕಟ್ಟಡಗಳು ಸಂಪೂರ್ಣ ಜಲಾವೃತಗೊಂಡಿವೆ.

ಹೆಚ್ಚು ಹಾನಿಗೊಳಗಾದ ಪ್ರದೇಶಗಳು ಹಾಳಾದ ರಸ್ತೆಗಳು ಮತ್ತು ಕಡಿತಗೊಂಡ ಸಂಪರ್ಕ ವ್ಯವಸ್ಥೆಗಳಿಂದಾಗಿ ರಕ್ಷಣಾ ತಂಡಗಳಿಂದ ಬಹುತೇಕ ಸಂಪೂರ್ಣವಾಗಿ ಬೇರ್ಪಟ್ಟಿವೆ. ಪರಿಹಾರ ಕಾರ್ಯಗಳು ಕುಸಿದುಬಿದ್ದ ಸೇತುವೆಗಳು, ಜಲಾವೃತಗೊಂಡ ರಸ್ತೆಗಳು ಮತ್ತು ಭಾರೀ ಯಂತ್ರೋಪಕರಣಗಳ ಕೊರತೆಯಿಂದಾಗಿ ವಿಳಂಬಗೊಂಡಿವೆ.

ಉತ್ತರ ಸುಮಾತ್ರಾ ಪ್ರಾಂತ್ಯದ ಸೆಂಟ್ರಲ್ ತಪನುಲಿಯ ತೀವ್ರ ಹಾನಿಗೊಳಗಾದ ಜಿಲ್ಲೆ ಮತ್ತು ಆ ಪ್ರದೇಶದ ಇತರ ಪ್ರದೇಶಗಳಿಗೆ ನೆರವು ಮತ್ತು ಸರಬರಾಜುಗಳನ್ನು ತಲುಪಿಸಲು ಪರಿಹಾರ ವಿಮಾನಗಳು ಕೆಲಸ ಮಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...