Homeಮುಖಪುಟಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

- Advertisement -
- Advertisement -

ಸೆನ್ಯಾರ್ ಚಂಡಮಾರುತದ ಪರಿಣಾಮ ಇಂಡೋನೇಷ್ಯಾದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ- ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 248ಕ್ಕೆ ಏರಿಕೆಯಾಗಿದೆ. ರಕ್ಷಣಾ ತಂಡಗಳು ದುರಂತ ಸ್ಥಳಗಳನ್ನು ತಲುಪಲು ಹರಸಾಹಸಪಡುತ್ತಿವೆ. ಇನ್ನೂ ಮಳೆ ಮುಂದುವರಿದರೆ ಮತ್ತು ಅವಶೇಷಗಳಡಿ ಸಿಲುಕಿರುವ ಶವಗಳು ಪತ್ತೆಯಾದರೆ ಮೃತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ಬಿಎನ್‌ಪಿಬಿ) ಶನಿವಾರ, ಈ ವಾರದ ಭೀಕರ ಪ್ರವಾಹ ಮತ್ತು ಭೂಕುಸಿತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 248 ತಲುಪಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ತಿಳಿಸಿದೆ. ಪಶ್ಚಿಮ ಸುಮಾತ್ರದ ಆಗಮ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಕರ್ತರು ಹೆಚ್ಚಿನ ಶವಗಳನ್ನು ಪತ್ತೆ ಹಚ್ಚಿದ ನಂತರ ಈ ಮಾಹಿತಿ ಲಭ್ಯವಾಗಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಬಿಎನ್‌ಪಿಬಿ ತಿಳಿಸಿದೆ.

“ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಏಕೆಂದರೆ, ಇನ್ನೂ ಅನೇಕ ಶವಗಳು ಪತ್ತೆಯಾಗಿಲ್ಲ ಮತ್ತು ಅನೇಕ ಪ್ರದೇಶಗಳಿಗೆ ರಕ್ಷಣಾ ತಂಡಗಳು ತಲುಪಲು ಸಾಧ್ಯವಾಗಿಲ್ಲ ಎಂದು ಬಿಎನ್‌ಬಿಪಿ ಮುಖ್ಯಸ್ಥ ಸುಹಾರ್ಯಾಂತೊ ಹೇಳಿದ್ದಾರೆ.

ಸುಮಾತ್ರಾ ಪ್ರಾಂತ್ಯದ ಒಟ್ಟು ಸಾವಿನ ಸಂಖ್ಯೆಯ ಮೊದಲ ಅಂದಾಜು 23 ಆಗಿತ್ತು. ಆದರೆ, ಶುಕ್ರವಾರ ರಾತ್ರಿ ಪಶ್ಚಿಮ ಸುಮಾತ್ರಾ ಪ್ರಾದೇಶಿಕ ವಿಪತ್ತು ನಿರ್ವಹಣೆ ಸಂಸ್ಥೆ (ರೀಜನಲ್ ಡಿಸಾಸ್ಟರ್ ಮಿಟಿಗೇಷನ್ ಏಜೆನ್ಸಿ) ವಕ್ತಾರ ಇಲ್ಹಾಮ್ ವಹಾಬ್ ಹೇಳಿದರಂತೆ, ಈಗ 61 ಜನರು ಸತ್ತಿದ್ದಾರೆ ಮತ್ತು 90 ಜನರು ಇನ್ನೂ ಕಾಣೆಯಾಗಿದ್ದಾರೆ.

ಒಟ್ಟು 75,219 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪಶ್ಚಿಮ ಸುಮಾತ್ರದಾದ್ಯಂತ ಒಟ್ಟು 106,806 ಜನರ ಮೇಲೆ ಪ್ರಕೃತಿ ವಿಕೋಪದ ಪರಿಣಾಮ ಬೀರಿದೆ ಎಂದು ಇಲ್ಹಾಮ್ ತಿಳಿಸಿದ್ದಾರೆ.

ಅಧಿಕಾರಿಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಉತ್ತರ ಸುಮಾತ್ರದಲ್ಲಿ 116 ಜನರು ಸಾವನ್ನಪ್ಪಿದ್ದಾರೆ. ಅಚೆ ಪ್ರಾಂತ್ಯದಲ್ಲಿ ಸಾವಿನ ಸಂಖ್ಯೆ ಕನಿಷ್ಠ 35 ಆಗಿದೆ.

ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್ ದೇಶಗಳ ಹಲವು ಭಾಗಗಳು ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಲಾವೃತಗೊಂಡಿವೆ. ಮಲಯ ಪರ್ಯಾಯ ದ್ವೀಪಕಲ್ಪ ಮತ್ತು ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ನಡುವಿನ ಮಲಕ್ಕಾ ಸಮುದ್ರದಲ್ಲಿಅಪರೂಪವಾಗಿ ರೂಪುಗೊಂಡ ಒಂದು ಉಷ್ಣವಲಯದ ಚಂಡಮಾರುತದಿಂದಾಗಿ, ಮೂರು ದೇಶಗಳಲ್ಲಿ ಒಟ್ಟಾರೆಯಾಗಿ ಸುಮಾರು 400 ಜನರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿಯ ವೇಳೆಗೆ ಥೈಲ್ಯಾಂಡ್‌ನ ಎಂಟು ದಕ್ಷಿಣ ಪ್ರಾಂತ್ಯಗಳಲ್ಲಿ ಕನಿಷ್ಠ 145 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಇದೇ ವೇಳೆ 3.5 ದಶಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಯ ಮಲೇಷ್ಯಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ನಿಂತರೂ, ಇಂಡೋನೇಷ್ಯಾದಲ್ಲಿ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಸಾವಿರಾರು ಕುಟುಂಬಗಳು ಸ್ಥಳಾಂತರಗೊಂಡಿದ್ದಾರೆ.

ಇಂಡೋನೇಷ್ಯಾದ ಉತ್ತರ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿದಿವೆ. ಪ್ರವಾಹದ ರಭಸಕ್ಕೆ ಪರ್ವತದ ತಪ್ಪಲಿನ ಗ್ರಾಮಗಳು ಕೊಚ್ಚಿ ಹೋಗಿವೆ. ಸಾವಿರಾರು ಮನೆಗಳು ಮತ್ತು ಕಟ್ಟಡಗಳು ಸಂಪೂರ್ಣ ಜಲಾವೃತಗೊಂಡಿವೆ.

ಹೆಚ್ಚು ಹಾನಿಗೊಳಗಾದ ಪ್ರದೇಶಗಳು ಹಾಳಾದ ರಸ್ತೆಗಳು ಮತ್ತು ಕಡಿತಗೊಂಡ ಸಂಪರ್ಕ ವ್ಯವಸ್ಥೆಗಳಿಂದಾಗಿ ರಕ್ಷಣಾ ತಂಡಗಳಿಂದ ಬಹುತೇಕ ಸಂಪೂರ್ಣವಾಗಿ ಬೇರ್ಪಟ್ಟಿವೆ. ಪರಿಹಾರ ಕಾರ್ಯಗಳು ಕುಸಿದುಬಿದ್ದ ಸೇತುವೆಗಳು, ಜಲಾವೃತಗೊಂಡ ರಸ್ತೆಗಳು ಮತ್ತು ಭಾರೀ ಯಂತ್ರೋಪಕರಣಗಳ ಕೊರತೆಯಿಂದಾಗಿ ವಿಳಂಬಗೊಂಡಿವೆ.

ಉತ್ತರ ಸುಮಾತ್ರಾ ಪ್ರಾಂತ್ಯದ ಸೆಂಟ್ರಲ್ ತಪನುಲಿಯ ತೀವ್ರ ಹಾನಿಗೊಳಗಾದ ಜಿಲ್ಲೆ ಮತ್ತು ಆ ಪ್ರದೇಶದ ಇತರ ಪ್ರದೇಶಗಳಿಗೆ ನೆರವು ಮತ್ತು ಸರಬರಾಜುಗಳನ್ನು ತಲುಪಿಸಲು ಪರಿಹಾರ ವಿಮಾನಗಳು ಕೆಲಸ ಮಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...