Homeಮುಖಪುಟಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

- Advertisement -
- Advertisement -

ಸೆನ್ಯಾರ್ ಚಂಡಮಾರುತದ ಪರಿಣಾಮ ಇಂಡೋನೇಷ್ಯಾದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ- ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 248ಕ್ಕೆ ಏರಿಕೆಯಾಗಿದೆ. ರಕ್ಷಣಾ ತಂಡಗಳು ದುರಂತ ಸ್ಥಳಗಳನ್ನು ತಲುಪಲು ಹರಸಾಹಸಪಡುತ್ತಿವೆ. ಇನ್ನೂ ಮಳೆ ಮುಂದುವರಿದರೆ ಮತ್ತು ಅವಶೇಷಗಳಡಿ ಸಿಲುಕಿರುವ ಶವಗಳು ಪತ್ತೆಯಾದರೆ ಮೃತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ಬಿಎನ್‌ಪಿಬಿ) ಶನಿವಾರ, ಈ ವಾರದ ಭೀಕರ ಪ್ರವಾಹ ಮತ್ತು ಭೂಕುಸಿತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 248 ತಲುಪಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ತಿಳಿಸಿದೆ. ಪಶ್ಚಿಮ ಸುಮಾತ್ರದ ಆಗಮ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಕರ್ತರು ಹೆಚ್ಚಿನ ಶವಗಳನ್ನು ಪತ್ತೆ ಹಚ್ಚಿದ ನಂತರ ಈ ಮಾಹಿತಿ ಲಭ್ಯವಾಗಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಬಿಎನ್‌ಪಿಬಿ ತಿಳಿಸಿದೆ.

“ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಏಕೆಂದರೆ, ಇನ್ನೂ ಅನೇಕ ಶವಗಳು ಪತ್ತೆಯಾಗಿಲ್ಲ ಮತ್ತು ಅನೇಕ ಪ್ರದೇಶಗಳಿಗೆ ರಕ್ಷಣಾ ತಂಡಗಳು ತಲುಪಲು ಸಾಧ್ಯವಾಗಿಲ್ಲ ಎಂದು ಬಿಎನ್‌ಬಿಪಿ ಮುಖ್ಯಸ್ಥ ಸುಹಾರ್ಯಾಂತೊ ಹೇಳಿದ್ದಾರೆ.

ಸುಮಾತ್ರಾ ಪ್ರಾಂತ್ಯದ ಒಟ್ಟು ಸಾವಿನ ಸಂಖ್ಯೆಯ ಮೊದಲ ಅಂದಾಜು 23 ಆಗಿತ್ತು. ಆದರೆ, ಶುಕ್ರವಾರ ರಾತ್ರಿ ಪಶ್ಚಿಮ ಸುಮಾತ್ರಾ ಪ್ರಾದೇಶಿಕ ವಿಪತ್ತು ನಿರ್ವಹಣೆ ಸಂಸ್ಥೆ (ರೀಜನಲ್ ಡಿಸಾಸ್ಟರ್ ಮಿಟಿಗೇಷನ್ ಏಜೆನ್ಸಿ) ವಕ್ತಾರ ಇಲ್ಹಾಮ್ ವಹಾಬ್ ಹೇಳಿದರಂತೆ, ಈಗ 61 ಜನರು ಸತ್ತಿದ್ದಾರೆ ಮತ್ತು 90 ಜನರು ಇನ್ನೂ ಕಾಣೆಯಾಗಿದ್ದಾರೆ.

ಒಟ್ಟು 75,219 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪಶ್ಚಿಮ ಸುಮಾತ್ರದಾದ್ಯಂತ ಒಟ್ಟು 106,806 ಜನರ ಮೇಲೆ ಪ್ರಕೃತಿ ವಿಕೋಪದ ಪರಿಣಾಮ ಬೀರಿದೆ ಎಂದು ಇಲ್ಹಾಮ್ ತಿಳಿಸಿದ್ದಾರೆ.

ಅಧಿಕಾರಿಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಉತ್ತರ ಸುಮಾತ್ರದಲ್ಲಿ 116 ಜನರು ಸಾವನ್ನಪ್ಪಿದ್ದಾರೆ. ಅಚೆ ಪ್ರಾಂತ್ಯದಲ್ಲಿ ಸಾವಿನ ಸಂಖ್ಯೆ ಕನಿಷ್ಠ 35 ಆಗಿದೆ.

ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್ ದೇಶಗಳ ಹಲವು ಭಾಗಗಳು ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಲಾವೃತಗೊಂಡಿವೆ. ಮಲಯ ಪರ್ಯಾಯ ದ್ವೀಪಕಲ್ಪ ಮತ್ತು ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ನಡುವಿನ ಮಲಕ್ಕಾ ಸಮುದ್ರದಲ್ಲಿಅಪರೂಪವಾಗಿ ರೂಪುಗೊಂಡ ಒಂದು ಉಷ್ಣವಲಯದ ಚಂಡಮಾರುತದಿಂದಾಗಿ, ಮೂರು ದೇಶಗಳಲ್ಲಿ ಒಟ್ಟಾರೆಯಾಗಿ ಸುಮಾರು 400 ಜನರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿಯ ವೇಳೆಗೆ ಥೈಲ್ಯಾಂಡ್‌ನ ಎಂಟು ದಕ್ಷಿಣ ಪ್ರಾಂತ್ಯಗಳಲ್ಲಿ ಕನಿಷ್ಠ 145 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಇದೇ ವೇಳೆ 3.5 ದಶಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಯ ಮಲೇಷ್ಯಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ನಿಂತರೂ, ಇಂಡೋನೇಷ್ಯಾದಲ್ಲಿ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಸಾವಿರಾರು ಕುಟುಂಬಗಳು ಸ್ಥಳಾಂತರಗೊಂಡಿದ್ದಾರೆ.

ಇಂಡೋನೇಷ್ಯಾದ ಉತ್ತರ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿದಿವೆ. ಪ್ರವಾಹದ ರಭಸಕ್ಕೆ ಪರ್ವತದ ತಪ್ಪಲಿನ ಗ್ರಾಮಗಳು ಕೊಚ್ಚಿ ಹೋಗಿವೆ. ಸಾವಿರಾರು ಮನೆಗಳು ಮತ್ತು ಕಟ್ಟಡಗಳು ಸಂಪೂರ್ಣ ಜಲಾವೃತಗೊಂಡಿವೆ.

ಹೆಚ್ಚು ಹಾನಿಗೊಳಗಾದ ಪ್ರದೇಶಗಳು ಹಾಳಾದ ರಸ್ತೆಗಳು ಮತ್ತು ಕಡಿತಗೊಂಡ ಸಂಪರ್ಕ ವ್ಯವಸ್ಥೆಗಳಿಂದಾಗಿ ರಕ್ಷಣಾ ತಂಡಗಳಿಂದ ಬಹುತೇಕ ಸಂಪೂರ್ಣವಾಗಿ ಬೇರ್ಪಟ್ಟಿವೆ. ಪರಿಹಾರ ಕಾರ್ಯಗಳು ಕುಸಿದುಬಿದ್ದ ಸೇತುವೆಗಳು, ಜಲಾವೃತಗೊಂಡ ರಸ್ತೆಗಳು ಮತ್ತು ಭಾರೀ ಯಂತ್ರೋಪಕರಣಗಳ ಕೊರತೆಯಿಂದಾಗಿ ವಿಳಂಬಗೊಂಡಿವೆ.

ಉತ್ತರ ಸುಮಾತ್ರಾ ಪ್ರಾಂತ್ಯದ ಸೆಂಟ್ರಲ್ ತಪನುಲಿಯ ತೀವ್ರ ಹಾನಿಗೊಳಗಾದ ಜಿಲ್ಲೆ ಮತ್ತು ಆ ಪ್ರದೇಶದ ಇತರ ಪ್ರದೇಶಗಳಿಗೆ ನೆರವು ಮತ್ತು ಸರಬರಾಜುಗಳನ್ನು ತಲುಪಿಸಲು ಪರಿಹಾರ ವಿಮಾನಗಳು ಕೆಲಸ ಮಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....