Homeಮುಖಪುಟದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ...

ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

- Advertisement -
- Advertisement -

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ. ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಮುನ್ಸಿಪಲ್ ಡ್ರೈವರ್ ಸಾದಿಕ್ ಖುರೇಷಿ ಮತ್ತು ಅವರ ಸಹಾಯಕರ ಮೇಲೆ ಕಸದ ಟ್ರಕ್ನಿಂದ ಕರು ಬಿದ್ದಿದೆ ಎಂದು ಆರೋಪಿಸಲಾಗಿತ್ತು. ಇದರಿಂದಲೇ ಅದು ಸಾವನ್ನಪ್ಪಿದೆ ಎಂದು ಹೇಳಿಕೊಂಡು ಬಜರಂಗ ದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪು ಸಾದಿಕ್‌ ಮೇಲೆ ಹಲ್ಲೆ ನಡೆಸುತ್ತಿರುವ ಮತ್ತು ಪೊಲೀಸರು ಸುಮ್ಮನೆ ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಆನ್ಲೈನ್ನಲ್ಲಿ ಹರಿದಾಡುತ್ತಿದೆ.

ಬಜರಂಗ ದಳದ ಪ್ರತಿಭಟನೆಯ ನಂತರ, ಕಾರ್ಪೊರೇಷನ್ ಅಧಿಕಾರಿಗಳು ಸಾದಿಕ್ ಮತ್ತು ಅವರ ಸಹಾಯಕರನ್ನು ಅಮಾನತುಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಯಾವುದೇ ಔಪಚಾರಿಕ ತನಿಖೆ ಇಲ್ಲದೆ ಇಬ್ಬರನ್ನೂ ಜೈಲಿಗೆ ಕಳುಹಿಸಲಾಯಿತು.

ಮುಸ್ಲಿಂ ಸಮುದಾಯದ ಮುಖಂಡರು ಘಟನೆಯನ್ನು ಪಕ್ಷಪಾತ ಮತ್ತು ಅಧಿಕಾರದ ದುರುಪಯೋಗ ಎಂದು ಬಲವಾಗಿ ಆಕ್ಷೇಪಿಸಿದ್ದಾರೆ. ಸ್ಥಳೀಯ ಮುಖಂಡ ಇಮ್ರಾನ್ ಖೋಖರ್, “ಬಜರಂಗ ದಳದವರು ಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಸಾದಿಕ್ ಖುರೇಷಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ, ಯಾರನ್ನೂ ಬಂಧಿಸಿಲ್ಲ. ಬದಲಾಗಿ, ಚಾಲಕನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಅವಕಾಶವನ್ನೂ ನೀಡದೆ ಜೈಲಿಗೆ ಕಳುಹಿಸಲಾಗಿದೆ. ಆತ ನಿರಪರಾಧಿಎಂದು ಹೇಳಿದ್ದಾರೆ.

ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೋಖರ್ ಹೇಳಿದ್ದಾರೆ.

ಪ್ರಕರಣವು ಅನೇಕ ಹಿಂದೂಗಳನ್ನೂ ಒಳಗೊಂಡಂತೆ, ಮುನ್ಸಿಪಲ್ ನೈರ್ಮಲ್ಯ ಕೆಲಸಗಾರರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ, ನೌಕರರು ಸ್ವಚ್ಛತಾ ಕಾರ್ಯವನ್ನು ನಿಲ್ಲಿಸಿ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ಒಬ್ಬ ನೈರ್ಮಲ್ಯ ಕಾರ್ಮಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ವಿಚಾರಣೆಗೂ ಮೊದಲು ಆಡಳಿತ ನಮ್ಮ ಸಹೋದ್ಯೋಗಿಗೆ ಹೇಗೆ ಶಿಕ್ಷೆ ನೀಡಬಹುದು? ದನದ ಕರು ಖುರೇಷಿಯವರ ಟ್ರಕ್ನಿಂದ ಬೀಳಲಿಲ್ಲ. ಅದು ಮತ್ತೊಂದು ವಾಹನದಿಂದ ಬಂದಿದೆ. ಅವನ ಮೇಲೆ ತಪ್ಪಾಗಿ ಆರೋಪ ಹೊರಿಸಲಾಗಿದೆ,” ಎಂದು ಹೇಳಿದ್ದಾರೆ.

ಪ್ರತಿಭಟನೆಯಿಂದ ನಗರದ ದೊಡ್ಡ ಭಾಗದಲ್ಲಿ ಸ್ವಚ್ಛತಾ ಸೇವೆಗಳಿಗೆ ಅಡ್ಡಿಯುಂಟಾಗಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ಮೇಲೆ ಒತ್ತಡ ಹೆಚ್ಚುತ್ತಿದೆ.

ರತ್ಲಂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, “ಇದು ಹಬ್ಬದ ಸಮಯ ಮತ್ತು ಉದ್ವಿಗ್ನತೆ ಹೆಚ್ಚಲು ನಾವು ಬಯಸುವುದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುಎಂದು ಹೇಳುವ ಮೂಲಕ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಯಾವುದೇ ತನಿಖೆ ಇಲ್ಲದೆ ಸಾದಿಕ್ ಖುರೇಷಿಯವರನ್ನು ಬಂಧಿಸುವ ನಿರ್ಧಾರವು ಟೀಕೆಗೆ ಗುರಿಯಾಗಿದೆ. ನಾಗರಿಕ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರು ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಬದಲು, ಬಜರಂಗ ದಳದ ಪ್ರಭಾವದಡಿಯಲ್ಲಿ ಪೊಲೀಸರು ಮತ್ತು ಕಾರ್ಪೊರೇಷನ್ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ. ಸಮುದಾಯದ ಸದಸ್ಯರು ಮತ್ತು ಮುನ್ಸಿಪಲ್ ಕೆಲಸಗಾರರು ಇಬ್ಬರೂ ಡ್ರೈವರ್ ಅನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶ್ರೀಲಂಕಾದಲ್ಲಿ ಮಹಿಳಾ ರೈತ ಹೋರಾಟಗಾರ್ತಿ ‘ ನೈಲೆನಿ ಜಾಗತಿಕ ವೇದಿಕೆ’ಯಿಂದ 3ನೇ ಸಮಾವೇಶ: 102 ದೇಶಗಳಿಂದ 700 ಕಾರ್ಯಕರ್ತರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...