Homeಮುಖಪುಟದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ...

ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

- Advertisement -
- Advertisement -

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ. ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಮುನ್ಸಿಪಲ್ ಡ್ರೈವರ್ ಸಾದಿಕ್ ಖುರೇಷಿ ಮತ್ತು ಅವರ ಸಹಾಯಕರ ಮೇಲೆ ಕಸದ ಟ್ರಕ್ನಿಂದ ಕರು ಬಿದ್ದಿದೆ ಎಂದು ಆರೋಪಿಸಲಾಗಿತ್ತು. ಇದರಿಂದಲೇ ಅದು ಸಾವನ್ನಪ್ಪಿದೆ ಎಂದು ಹೇಳಿಕೊಂಡು ಬಜರಂಗ ದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪು ಸಾದಿಕ್‌ ಮೇಲೆ ಹಲ್ಲೆ ನಡೆಸುತ್ತಿರುವ ಮತ್ತು ಪೊಲೀಸರು ಸುಮ್ಮನೆ ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಆನ್ಲೈನ್ನಲ್ಲಿ ಹರಿದಾಡುತ್ತಿದೆ.

ಬಜರಂಗ ದಳದ ಪ್ರತಿಭಟನೆಯ ನಂತರ, ಕಾರ್ಪೊರೇಷನ್ ಅಧಿಕಾರಿಗಳು ಸಾದಿಕ್ ಮತ್ತು ಅವರ ಸಹಾಯಕರನ್ನು ಅಮಾನತುಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಯಾವುದೇ ಔಪಚಾರಿಕ ತನಿಖೆ ಇಲ್ಲದೆ ಇಬ್ಬರನ್ನೂ ಜೈಲಿಗೆ ಕಳುಹಿಸಲಾಯಿತು.

ಮುಸ್ಲಿಂ ಸಮುದಾಯದ ಮುಖಂಡರು ಘಟನೆಯನ್ನು ಪಕ್ಷಪಾತ ಮತ್ತು ಅಧಿಕಾರದ ದುರುಪಯೋಗ ಎಂದು ಬಲವಾಗಿ ಆಕ್ಷೇಪಿಸಿದ್ದಾರೆ. ಸ್ಥಳೀಯ ಮುಖಂಡ ಇಮ್ರಾನ್ ಖೋಖರ್, “ಬಜರಂಗ ದಳದವರು ಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಸಾದಿಕ್ ಖುರೇಷಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ, ಯಾರನ್ನೂ ಬಂಧಿಸಿಲ್ಲ. ಬದಲಾಗಿ, ಚಾಲಕನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಅವಕಾಶವನ್ನೂ ನೀಡದೆ ಜೈಲಿಗೆ ಕಳುಹಿಸಲಾಗಿದೆ. ಆತ ನಿರಪರಾಧಿಎಂದು ಹೇಳಿದ್ದಾರೆ.

ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೋಖರ್ ಹೇಳಿದ್ದಾರೆ.

ಪ್ರಕರಣವು ಅನೇಕ ಹಿಂದೂಗಳನ್ನೂ ಒಳಗೊಂಡಂತೆ, ಮುನ್ಸಿಪಲ್ ನೈರ್ಮಲ್ಯ ಕೆಲಸಗಾರರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ, ನೌಕರರು ಸ್ವಚ್ಛತಾ ಕಾರ್ಯವನ್ನು ನಿಲ್ಲಿಸಿ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ಒಬ್ಬ ನೈರ್ಮಲ್ಯ ಕಾರ್ಮಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ವಿಚಾರಣೆಗೂ ಮೊದಲು ಆಡಳಿತ ನಮ್ಮ ಸಹೋದ್ಯೋಗಿಗೆ ಹೇಗೆ ಶಿಕ್ಷೆ ನೀಡಬಹುದು? ದನದ ಕರು ಖುರೇಷಿಯವರ ಟ್ರಕ್ನಿಂದ ಬೀಳಲಿಲ್ಲ. ಅದು ಮತ್ತೊಂದು ವಾಹನದಿಂದ ಬಂದಿದೆ. ಅವನ ಮೇಲೆ ತಪ್ಪಾಗಿ ಆರೋಪ ಹೊರಿಸಲಾಗಿದೆ,” ಎಂದು ಹೇಳಿದ್ದಾರೆ.

ಪ್ರತಿಭಟನೆಯಿಂದ ನಗರದ ದೊಡ್ಡ ಭಾಗದಲ್ಲಿ ಸ್ವಚ್ಛತಾ ಸೇವೆಗಳಿಗೆ ಅಡ್ಡಿಯುಂಟಾಗಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ಮೇಲೆ ಒತ್ತಡ ಹೆಚ್ಚುತ್ತಿದೆ.

ರತ್ಲಂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, “ಇದು ಹಬ್ಬದ ಸಮಯ ಮತ್ತು ಉದ್ವಿಗ್ನತೆ ಹೆಚ್ಚಲು ನಾವು ಬಯಸುವುದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುಎಂದು ಹೇಳುವ ಮೂಲಕ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಯಾವುದೇ ತನಿಖೆ ಇಲ್ಲದೆ ಸಾದಿಕ್ ಖುರೇಷಿಯವರನ್ನು ಬಂಧಿಸುವ ನಿರ್ಧಾರವು ಟೀಕೆಗೆ ಗುರಿಯಾಗಿದೆ. ನಾಗರಿಕ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರು ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಬದಲು, ಬಜರಂಗ ದಳದ ಪ್ರಭಾವದಡಿಯಲ್ಲಿ ಪೊಲೀಸರು ಮತ್ತು ಕಾರ್ಪೊರೇಷನ್ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ. ಸಮುದಾಯದ ಸದಸ್ಯರು ಮತ್ತು ಮುನ್ಸಿಪಲ್ ಕೆಲಸಗಾರರು ಇಬ್ಬರೂ ಡ್ರೈವರ್ ಅನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶ್ರೀಲಂಕಾದಲ್ಲಿ ಮಹಿಳಾ ರೈತ ಹೋರಾಟಗಾರ್ತಿ ‘ ನೈಲೆನಿ ಜಾಗತಿಕ ವೇದಿಕೆ’ಯಿಂದ 3ನೇ ಸಮಾವೇಶ: 102 ದೇಶಗಳಿಂದ 700 ಕಾರ್ಯಕರ್ತರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...