Homeಮುಖಪುಟದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ...

ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

- Advertisement -
- Advertisement -

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ. ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಮುನ್ಸಿಪಲ್ ಡ್ರೈವರ್ ಸಾದಿಕ್ ಖುರೇಷಿ ಮತ್ತು ಅವರ ಸಹಾಯಕರ ಮೇಲೆ ಕಸದ ಟ್ರಕ್ನಿಂದ ಕರು ಬಿದ್ದಿದೆ ಎಂದು ಆರೋಪಿಸಲಾಗಿತ್ತು. ಇದರಿಂದಲೇ ಅದು ಸಾವನ್ನಪ್ಪಿದೆ ಎಂದು ಹೇಳಿಕೊಂಡು ಬಜರಂಗ ದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪು ಸಾದಿಕ್‌ ಮೇಲೆ ಹಲ್ಲೆ ನಡೆಸುತ್ತಿರುವ ಮತ್ತು ಪೊಲೀಸರು ಸುಮ್ಮನೆ ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಆನ್ಲೈನ್ನಲ್ಲಿ ಹರಿದಾಡುತ್ತಿದೆ.

ಬಜರಂಗ ದಳದ ಪ್ರತಿಭಟನೆಯ ನಂತರ, ಕಾರ್ಪೊರೇಷನ್ ಅಧಿಕಾರಿಗಳು ಸಾದಿಕ್ ಮತ್ತು ಅವರ ಸಹಾಯಕರನ್ನು ಅಮಾನತುಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಯಾವುದೇ ಔಪಚಾರಿಕ ತನಿಖೆ ಇಲ್ಲದೆ ಇಬ್ಬರನ್ನೂ ಜೈಲಿಗೆ ಕಳುಹಿಸಲಾಯಿತು.

ಮುಸ್ಲಿಂ ಸಮುದಾಯದ ಮುಖಂಡರು ಘಟನೆಯನ್ನು ಪಕ್ಷಪಾತ ಮತ್ತು ಅಧಿಕಾರದ ದುರುಪಯೋಗ ಎಂದು ಬಲವಾಗಿ ಆಕ್ಷೇಪಿಸಿದ್ದಾರೆ. ಸ್ಥಳೀಯ ಮುಖಂಡ ಇಮ್ರಾನ್ ಖೋಖರ್, “ಬಜರಂಗ ದಳದವರು ಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಸಾದಿಕ್ ಖುರೇಷಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ, ಯಾರನ್ನೂ ಬಂಧಿಸಿಲ್ಲ. ಬದಲಾಗಿ, ಚಾಲಕನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಅವಕಾಶವನ್ನೂ ನೀಡದೆ ಜೈಲಿಗೆ ಕಳುಹಿಸಲಾಗಿದೆ. ಆತ ನಿರಪರಾಧಿಎಂದು ಹೇಳಿದ್ದಾರೆ.

ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೋಖರ್ ಹೇಳಿದ್ದಾರೆ.

ಪ್ರಕರಣವು ಅನೇಕ ಹಿಂದೂಗಳನ್ನೂ ಒಳಗೊಂಡಂತೆ, ಮುನ್ಸಿಪಲ್ ನೈರ್ಮಲ್ಯ ಕೆಲಸಗಾರರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ, ನೌಕರರು ಸ್ವಚ್ಛತಾ ಕಾರ್ಯವನ್ನು ನಿಲ್ಲಿಸಿ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ಒಬ್ಬ ನೈರ್ಮಲ್ಯ ಕಾರ್ಮಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ವಿಚಾರಣೆಗೂ ಮೊದಲು ಆಡಳಿತ ನಮ್ಮ ಸಹೋದ್ಯೋಗಿಗೆ ಹೇಗೆ ಶಿಕ್ಷೆ ನೀಡಬಹುದು? ದನದ ಕರು ಖುರೇಷಿಯವರ ಟ್ರಕ್ನಿಂದ ಬೀಳಲಿಲ್ಲ. ಅದು ಮತ್ತೊಂದು ವಾಹನದಿಂದ ಬಂದಿದೆ. ಅವನ ಮೇಲೆ ತಪ್ಪಾಗಿ ಆರೋಪ ಹೊರಿಸಲಾಗಿದೆ,” ಎಂದು ಹೇಳಿದ್ದಾರೆ.

ಪ್ರತಿಭಟನೆಯಿಂದ ನಗರದ ದೊಡ್ಡ ಭಾಗದಲ್ಲಿ ಸ್ವಚ್ಛತಾ ಸೇವೆಗಳಿಗೆ ಅಡ್ಡಿಯುಂಟಾಗಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ಮೇಲೆ ಒತ್ತಡ ಹೆಚ್ಚುತ್ತಿದೆ.

ರತ್ಲಂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, “ಇದು ಹಬ್ಬದ ಸಮಯ ಮತ್ತು ಉದ್ವಿಗ್ನತೆ ಹೆಚ್ಚಲು ನಾವು ಬಯಸುವುದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುಎಂದು ಹೇಳುವ ಮೂಲಕ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಯಾವುದೇ ತನಿಖೆ ಇಲ್ಲದೆ ಸಾದಿಕ್ ಖುರೇಷಿಯವರನ್ನು ಬಂಧಿಸುವ ನಿರ್ಧಾರವು ಟೀಕೆಗೆ ಗುರಿಯಾಗಿದೆ. ನಾಗರಿಕ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರು ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಬದಲು, ಬಜರಂಗ ದಳದ ಪ್ರಭಾವದಡಿಯಲ್ಲಿ ಪೊಲೀಸರು ಮತ್ತು ಕಾರ್ಪೊರೇಷನ್ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ. ಸಮುದಾಯದ ಸದಸ್ಯರು ಮತ್ತು ಮುನ್ಸಿಪಲ್ ಕೆಲಸಗಾರರು ಇಬ್ಬರೂ ಡ್ರೈವರ್ ಅನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶ್ರೀಲಂಕಾದಲ್ಲಿ ಮಹಿಳಾ ರೈತ ಹೋರಾಟಗಾರ್ತಿ ‘ ನೈಲೆನಿ ಜಾಗತಿಕ ವೇದಿಕೆ’ಯಿಂದ 3ನೇ ಸಮಾವೇಶ: 102 ದೇಶಗಳಿಂದ 700 ಕಾರ್ಯಕರ್ತರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...