Homeಮುಖಪುಟದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ...

ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

- Advertisement -
- Advertisement -

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ. ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಮುನ್ಸಿಪಲ್ ಡ್ರೈವರ್ ಸಾದಿಕ್ ಖುರೇಷಿ ಮತ್ತು ಅವರ ಸಹಾಯಕರ ಮೇಲೆ ಕಸದ ಟ್ರಕ್ನಿಂದ ಕರು ಬಿದ್ದಿದೆ ಎಂದು ಆರೋಪಿಸಲಾಗಿತ್ತು. ಇದರಿಂದಲೇ ಅದು ಸಾವನ್ನಪ್ಪಿದೆ ಎಂದು ಹೇಳಿಕೊಂಡು ಬಜರಂಗ ದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪು ಸಾದಿಕ್‌ ಮೇಲೆ ಹಲ್ಲೆ ನಡೆಸುತ್ತಿರುವ ಮತ್ತು ಪೊಲೀಸರು ಸುಮ್ಮನೆ ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಆನ್ಲೈನ್ನಲ್ಲಿ ಹರಿದಾಡುತ್ತಿದೆ.

ಬಜರಂಗ ದಳದ ಪ್ರತಿಭಟನೆಯ ನಂತರ, ಕಾರ್ಪೊರೇಷನ್ ಅಧಿಕಾರಿಗಳು ಸಾದಿಕ್ ಮತ್ತು ಅವರ ಸಹಾಯಕರನ್ನು ಅಮಾನತುಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಯಾವುದೇ ಔಪಚಾರಿಕ ತನಿಖೆ ಇಲ್ಲದೆ ಇಬ್ಬರನ್ನೂ ಜೈಲಿಗೆ ಕಳುಹಿಸಲಾಯಿತು.

ಮುಸ್ಲಿಂ ಸಮುದಾಯದ ಮುಖಂಡರು ಘಟನೆಯನ್ನು ಪಕ್ಷಪಾತ ಮತ್ತು ಅಧಿಕಾರದ ದುರುಪಯೋಗ ಎಂದು ಬಲವಾಗಿ ಆಕ್ಷೇಪಿಸಿದ್ದಾರೆ. ಸ್ಥಳೀಯ ಮುಖಂಡ ಇಮ್ರಾನ್ ಖೋಖರ್, “ಬಜರಂಗ ದಳದವರು ಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಸಾದಿಕ್ ಖುರೇಷಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ, ಯಾರನ್ನೂ ಬಂಧಿಸಿಲ್ಲ. ಬದಲಾಗಿ, ಚಾಲಕನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಅವಕಾಶವನ್ನೂ ನೀಡದೆ ಜೈಲಿಗೆ ಕಳುಹಿಸಲಾಗಿದೆ. ಆತ ನಿರಪರಾಧಿಎಂದು ಹೇಳಿದ್ದಾರೆ.

ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೋಖರ್ ಹೇಳಿದ್ದಾರೆ.

ಪ್ರಕರಣವು ಅನೇಕ ಹಿಂದೂಗಳನ್ನೂ ಒಳಗೊಂಡಂತೆ, ಮುನ್ಸಿಪಲ್ ನೈರ್ಮಲ್ಯ ಕೆಲಸಗಾರರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ, ನೌಕರರು ಸ್ವಚ್ಛತಾ ಕಾರ್ಯವನ್ನು ನಿಲ್ಲಿಸಿ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ಒಬ್ಬ ನೈರ್ಮಲ್ಯ ಕಾರ್ಮಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ವಿಚಾರಣೆಗೂ ಮೊದಲು ಆಡಳಿತ ನಮ್ಮ ಸಹೋದ್ಯೋಗಿಗೆ ಹೇಗೆ ಶಿಕ್ಷೆ ನೀಡಬಹುದು? ದನದ ಕರು ಖುರೇಷಿಯವರ ಟ್ರಕ್ನಿಂದ ಬೀಳಲಿಲ್ಲ. ಅದು ಮತ್ತೊಂದು ವಾಹನದಿಂದ ಬಂದಿದೆ. ಅವನ ಮೇಲೆ ತಪ್ಪಾಗಿ ಆರೋಪ ಹೊರಿಸಲಾಗಿದೆ,” ಎಂದು ಹೇಳಿದ್ದಾರೆ.

ಪ್ರತಿಭಟನೆಯಿಂದ ನಗರದ ದೊಡ್ಡ ಭಾಗದಲ್ಲಿ ಸ್ವಚ್ಛತಾ ಸೇವೆಗಳಿಗೆ ಅಡ್ಡಿಯುಂಟಾಗಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ಮೇಲೆ ಒತ್ತಡ ಹೆಚ್ಚುತ್ತಿದೆ.

ರತ್ಲಂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, “ಇದು ಹಬ್ಬದ ಸಮಯ ಮತ್ತು ಉದ್ವಿಗ್ನತೆ ಹೆಚ್ಚಲು ನಾವು ಬಯಸುವುದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುಎಂದು ಹೇಳುವ ಮೂಲಕ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಯಾವುದೇ ತನಿಖೆ ಇಲ್ಲದೆ ಸಾದಿಕ್ ಖುರೇಷಿಯವರನ್ನು ಬಂಧಿಸುವ ನಿರ್ಧಾರವು ಟೀಕೆಗೆ ಗುರಿಯಾಗಿದೆ. ನಾಗರಿಕ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರು ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಬದಲು, ಬಜರಂಗ ದಳದ ಪ್ರಭಾವದಡಿಯಲ್ಲಿ ಪೊಲೀಸರು ಮತ್ತು ಕಾರ್ಪೊರೇಷನ್ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ. ಸಮುದಾಯದ ಸದಸ್ಯರು ಮತ್ತು ಮುನ್ಸಿಪಲ್ ಕೆಲಸಗಾರರು ಇಬ್ಬರೂ ಡ್ರೈವರ್ ಅನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶ್ರೀಲಂಕಾದಲ್ಲಿ ಮಹಿಳಾ ರೈತ ಹೋರಾಟಗಾರ್ತಿ ‘ ನೈಲೆನಿ ಜಾಗತಿಕ ವೇದಿಕೆ’ಯಿಂದ 3ನೇ ಸಮಾವೇಶ: 102 ದೇಶಗಳಿಂದ 700 ಕಾರ್ಯಕರ್ತರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...