Homeಮುಖಪುಟದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ...

ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

- Advertisement -
- Advertisement -

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ. ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಮುನ್ಸಿಪಲ್ ಡ್ರೈವರ್ ಸಾದಿಕ್ ಖುರೇಷಿ ಮತ್ತು ಅವರ ಸಹಾಯಕರ ಮೇಲೆ ಕಸದ ಟ್ರಕ್ನಿಂದ ಕರು ಬಿದ್ದಿದೆ ಎಂದು ಆರೋಪಿಸಲಾಗಿತ್ತು. ಇದರಿಂದಲೇ ಅದು ಸಾವನ್ನಪ್ಪಿದೆ ಎಂದು ಹೇಳಿಕೊಂಡು ಬಜರಂಗ ದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪು ಸಾದಿಕ್‌ ಮೇಲೆ ಹಲ್ಲೆ ನಡೆಸುತ್ತಿರುವ ಮತ್ತು ಪೊಲೀಸರು ಸುಮ್ಮನೆ ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಆನ್ಲೈನ್ನಲ್ಲಿ ಹರಿದಾಡುತ್ತಿದೆ.

ಬಜರಂಗ ದಳದ ಪ್ರತಿಭಟನೆಯ ನಂತರ, ಕಾರ್ಪೊರೇಷನ್ ಅಧಿಕಾರಿಗಳು ಸಾದಿಕ್ ಮತ್ತು ಅವರ ಸಹಾಯಕರನ್ನು ಅಮಾನತುಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಯಾವುದೇ ಔಪಚಾರಿಕ ತನಿಖೆ ಇಲ್ಲದೆ ಇಬ್ಬರನ್ನೂ ಜೈಲಿಗೆ ಕಳುಹಿಸಲಾಯಿತು.

ಮುಸ್ಲಿಂ ಸಮುದಾಯದ ಮುಖಂಡರು ಘಟನೆಯನ್ನು ಪಕ್ಷಪಾತ ಮತ್ತು ಅಧಿಕಾರದ ದುರುಪಯೋಗ ಎಂದು ಬಲವಾಗಿ ಆಕ್ಷೇಪಿಸಿದ್ದಾರೆ. ಸ್ಥಳೀಯ ಮುಖಂಡ ಇಮ್ರಾನ್ ಖೋಖರ್, “ಬಜರಂಗ ದಳದವರು ಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಸಾದಿಕ್ ಖುರೇಷಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ, ಯಾರನ್ನೂ ಬಂಧಿಸಿಲ್ಲ. ಬದಲಾಗಿ, ಚಾಲಕನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಅವಕಾಶವನ್ನೂ ನೀಡದೆ ಜೈಲಿಗೆ ಕಳುಹಿಸಲಾಗಿದೆ. ಆತ ನಿರಪರಾಧಿಎಂದು ಹೇಳಿದ್ದಾರೆ.

ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೋಖರ್ ಹೇಳಿದ್ದಾರೆ.

ಪ್ರಕರಣವು ಅನೇಕ ಹಿಂದೂಗಳನ್ನೂ ಒಳಗೊಂಡಂತೆ, ಮುನ್ಸಿಪಲ್ ನೈರ್ಮಲ್ಯ ಕೆಲಸಗಾರರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ, ನೌಕರರು ಸ್ವಚ್ಛತಾ ಕಾರ್ಯವನ್ನು ನಿಲ್ಲಿಸಿ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ಒಬ್ಬ ನೈರ್ಮಲ್ಯ ಕಾರ್ಮಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ವಿಚಾರಣೆಗೂ ಮೊದಲು ಆಡಳಿತ ನಮ್ಮ ಸಹೋದ್ಯೋಗಿಗೆ ಹೇಗೆ ಶಿಕ್ಷೆ ನೀಡಬಹುದು? ದನದ ಕರು ಖುರೇಷಿಯವರ ಟ್ರಕ್ನಿಂದ ಬೀಳಲಿಲ್ಲ. ಅದು ಮತ್ತೊಂದು ವಾಹನದಿಂದ ಬಂದಿದೆ. ಅವನ ಮೇಲೆ ತಪ್ಪಾಗಿ ಆರೋಪ ಹೊರಿಸಲಾಗಿದೆ,” ಎಂದು ಹೇಳಿದ್ದಾರೆ.

ಪ್ರತಿಭಟನೆಯಿಂದ ನಗರದ ದೊಡ್ಡ ಭಾಗದಲ್ಲಿ ಸ್ವಚ್ಛತಾ ಸೇವೆಗಳಿಗೆ ಅಡ್ಡಿಯುಂಟಾಗಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ಮೇಲೆ ಒತ್ತಡ ಹೆಚ್ಚುತ್ತಿದೆ.

ರತ್ಲಂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, “ಇದು ಹಬ್ಬದ ಸಮಯ ಮತ್ತು ಉದ್ವಿಗ್ನತೆ ಹೆಚ್ಚಲು ನಾವು ಬಯಸುವುದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುಎಂದು ಹೇಳುವ ಮೂಲಕ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಯಾವುದೇ ತನಿಖೆ ಇಲ್ಲದೆ ಸಾದಿಕ್ ಖುರೇಷಿಯವರನ್ನು ಬಂಧಿಸುವ ನಿರ್ಧಾರವು ಟೀಕೆಗೆ ಗುರಿಯಾಗಿದೆ. ನಾಗರಿಕ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರು ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಬದಲು, ಬಜರಂಗ ದಳದ ಪ್ರಭಾವದಡಿಯಲ್ಲಿ ಪೊಲೀಸರು ಮತ್ತು ಕಾರ್ಪೊರೇಷನ್ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ. ಸಮುದಾಯದ ಸದಸ್ಯರು ಮತ್ತು ಮುನ್ಸಿಪಲ್ ಕೆಲಸಗಾರರು ಇಬ್ಬರೂ ಡ್ರೈವರ್ ಅನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶ್ರೀಲಂಕಾದಲ್ಲಿ ಮಹಿಳಾ ರೈತ ಹೋರಾಟಗಾರ್ತಿ ‘ ನೈಲೆನಿ ಜಾಗತಿಕ ವೇದಿಕೆ’ಯಿಂದ 3ನೇ ಸಮಾವೇಶ: 102 ದೇಶಗಳಿಂದ 700 ಕಾರ್ಯಕರ್ತರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...