Homeಮುಖಪುಟದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ...

ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

- Advertisement -
- Advertisement -

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ. ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಮುನ್ಸಿಪಲ್ ಡ್ರೈವರ್ ಸಾದಿಕ್ ಖುರೇಷಿ ಮತ್ತು ಅವರ ಸಹಾಯಕರ ಮೇಲೆ ಕಸದ ಟ್ರಕ್ನಿಂದ ಕರು ಬಿದ್ದಿದೆ ಎಂದು ಆರೋಪಿಸಲಾಗಿತ್ತು. ಇದರಿಂದಲೇ ಅದು ಸಾವನ್ನಪ್ಪಿದೆ ಎಂದು ಹೇಳಿಕೊಂಡು ಬಜರಂಗ ದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪು ಸಾದಿಕ್‌ ಮೇಲೆ ಹಲ್ಲೆ ನಡೆಸುತ್ತಿರುವ ಮತ್ತು ಪೊಲೀಸರು ಸುಮ್ಮನೆ ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಆನ್ಲೈನ್ನಲ್ಲಿ ಹರಿದಾಡುತ್ತಿದೆ.

ಬಜರಂಗ ದಳದ ಪ್ರತಿಭಟನೆಯ ನಂತರ, ಕಾರ್ಪೊರೇಷನ್ ಅಧಿಕಾರಿಗಳು ಸಾದಿಕ್ ಮತ್ತು ಅವರ ಸಹಾಯಕರನ್ನು ಅಮಾನತುಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಯಾವುದೇ ಔಪಚಾರಿಕ ತನಿಖೆ ಇಲ್ಲದೆ ಇಬ್ಬರನ್ನೂ ಜೈಲಿಗೆ ಕಳುಹಿಸಲಾಯಿತು.

ಮುಸ್ಲಿಂ ಸಮುದಾಯದ ಮುಖಂಡರು ಘಟನೆಯನ್ನು ಪಕ್ಷಪಾತ ಮತ್ತು ಅಧಿಕಾರದ ದುರುಪಯೋಗ ಎಂದು ಬಲವಾಗಿ ಆಕ್ಷೇಪಿಸಿದ್ದಾರೆ. ಸ್ಥಳೀಯ ಮುಖಂಡ ಇಮ್ರಾನ್ ಖೋಖರ್, “ಬಜರಂಗ ದಳದವರು ಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಸಾದಿಕ್ ಖುರೇಷಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ, ಯಾರನ್ನೂ ಬಂಧಿಸಿಲ್ಲ. ಬದಲಾಗಿ, ಚಾಲಕನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಅವಕಾಶವನ್ನೂ ನೀಡದೆ ಜೈಲಿಗೆ ಕಳುಹಿಸಲಾಗಿದೆ. ಆತ ನಿರಪರಾಧಿಎಂದು ಹೇಳಿದ್ದಾರೆ.

ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೋಖರ್ ಹೇಳಿದ್ದಾರೆ.

ಪ್ರಕರಣವು ಅನೇಕ ಹಿಂದೂಗಳನ್ನೂ ಒಳಗೊಂಡಂತೆ, ಮುನ್ಸಿಪಲ್ ನೈರ್ಮಲ್ಯ ಕೆಲಸಗಾರರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ, ನೌಕರರು ಸ್ವಚ್ಛತಾ ಕಾರ್ಯವನ್ನು ನಿಲ್ಲಿಸಿ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ಒಬ್ಬ ನೈರ್ಮಲ್ಯ ಕಾರ್ಮಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ವಿಚಾರಣೆಗೂ ಮೊದಲು ಆಡಳಿತ ನಮ್ಮ ಸಹೋದ್ಯೋಗಿಗೆ ಹೇಗೆ ಶಿಕ್ಷೆ ನೀಡಬಹುದು? ದನದ ಕರು ಖುರೇಷಿಯವರ ಟ್ರಕ್ನಿಂದ ಬೀಳಲಿಲ್ಲ. ಅದು ಮತ್ತೊಂದು ವಾಹನದಿಂದ ಬಂದಿದೆ. ಅವನ ಮೇಲೆ ತಪ್ಪಾಗಿ ಆರೋಪ ಹೊರಿಸಲಾಗಿದೆ,” ಎಂದು ಹೇಳಿದ್ದಾರೆ.

ಪ್ರತಿಭಟನೆಯಿಂದ ನಗರದ ದೊಡ್ಡ ಭಾಗದಲ್ಲಿ ಸ್ವಚ್ಛತಾ ಸೇವೆಗಳಿಗೆ ಅಡ್ಡಿಯುಂಟಾಗಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ಮೇಲೆ ಒತ್ತಡ ಹೆಚ್ಚುತ್ತಿದೆ.

ರತ್ಲಂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, “ಇದು ಹಬ್ಬದ ಸಮಯ ಮತ್ತು ಉದ್ವಿಗ್ನತೆ ಹೆಚ್ಚಲು ನಾವು ಬಯಸುವುದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುಎಂದು ಹೇಳುವ ಮೂಲಕ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಯಾವುದೇ ತನಿಖೆ ಇಲ್ಲದೆ ಸಾದಿಕ್ ಖುರೇಷಿಯವರನ್ನು ಬಂಧಿಸುವ ನಿರ್ಧಾರವು ಟೀಕೆಗೆ ಗುರಿಯಾಗಿದೆ. ನಾಗರಿಕ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರು ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಬದಲು, ಬಜರಂಗ ದಳದ ಪ್ರಭಾವದಡಿಯಲ್ಲಿ ಪೊಲೀಸರು ಮತ್ತು ಕಾರ್ಪೊರೇಷನ್ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ. ಸಮುದಾಯದ ಸದಸ್ಯರು ಮತ್ತು ಮುನ್ಸಿಪಲ್ ಕೆಲಸಗಾರರು ಇಬ್ಬರೂ ಡ್ರೈವರ್ ಅನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶ್ರೀಲಂಕಾದಲ್ಲಿ ಮಹಿಳಾ ರೈತ ಹೋರಾಟಗಾರ್ತಿ ‘ ನೈಲೆನಿ ಜಾಗತಿಕ ವೇದಿಕೆ’ಯಿಂದ 3ನೇ ಸಮಾವೇಶ: 102 ದೇಶಗಳಿಂದ 700 ಕಾರ್ಯಕರ್ತರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...