Homeಮುಖಪುಟದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ...

ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

- Advertisement -
- Advertisement -

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ. ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಮುನ್ಸಿಪಲ್ ಡ್ರೈವರ್ ಸಾದಿಕ್ ಖುರೇಷಿ ಮತ್ತು ಅವರ ಸಹಾಯಕರ ಮೇಲೆ ಕಸದ ಟ್ರಕ್ನಿಂದ ಕರು ಬಿದ್ದಿದೆ ಎಂದು ಆರೋಪಿಸಲಾಗಿತ್ತು. ಇದರಿಂದಲೇ ಅದು ಸಾವನ್ನಪ್ಪಿದೆ ಎಂದು ಹೇಳಿಕೊಂಡು ಬಜರಂಗ ದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪು ಸಾದಿಕ್‌ ಮೇಲೆ ಹಲ್ಲೆ ನಡೆಸುತ್ತಿರುವ ಮತ್ತು ಪೊಲೀಸರು ಸುಮ್ಮನೆ ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಆನ್ಲೈನ್ನಲ್ಲಿ ಹರಿದಾಡುತ್ತಿದೆ.

ಬಜರಂಗ ದಳದ ಪ್ರತಿಭಟನೆಯ ನಂತರ, ಕಾರ್ಪೊರೇಷನ್ ಅಧಿಕಾರಿಗಳು ಸಾದಿಕ್ ಮತ್ತು ಅವರ ಸಹಾಯಕರನ್ನು ಅಮಾನತುಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಯಾವುದೇ ಔಪಚಾರಿಕ ತನಿಖೆ ಇಲ್ಲದೆ ಇಬ್ಬರನ್ನೂ ಜೈಲಿಗೆ ಕಳುಹಿಸಲಾಯಿತು.

ಮುಸ್ಲಿಂ ಸಮುದಾಯದ ಮುಖಂಡರು ಘಟನೆಯನ್ನು ಪಕ್ಷಪಾತ ಮತ್ತು ಅಧಿಕಾರದ ದುರುಪಯೋಗ ಎಂದು ಬಲವಾಗಿ ಆಕ್ಷೇಪಿಸಿದ್ದಾರೆ. ಸ್ಥಳೀಯ ಮುಖಂಡ ಇಮ್ರಾನ್ ಖೋಖರ್, “ಬಜರಂಗ ದಳದವರು ಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಸಾದಿಕ್ ಖುರೇಷಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ, ಯಾರನ್ನೂ ಬಂಧಿಸಿಲ್ಲ. ಬದಲಾಗಿ, ಚಾಲಕನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಅವಕಾಶವನ್ನೂ ನೀಡದೆ ಜೈಲಿಗೆ ಕಳುಹಿಸಲಾಗಿದೆ. ಆತ ನಿರಪರಾಧಿಎಂದು ಹೇಳಿದ್ದಾರೆ.

ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೋಖರ್ ಹೇಳಿದ್ದಾರೆ.

ಪ್ರಕರಣವು ಅನೇಕ ಹಿಂದೂಗಳನ್ನೂ ಒಳಗೊಂಡಂತೆ, ಮುನ್ಸಿಪಲ್ ನೈರ್ಮಲ್ಯ ಕೆಲಸಗಾರರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ, ನೌಕರರು ಸ್ವಚ್ಛತಾ ಕಾರ್ಯವನ್ನು ನಿಲ್ಲಿಸಿ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ಒಬ್ಬ ನೈರ್ಮಲ್ಯ ಕಾರ್ಮಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ವಿಚಾರಣೆಗೂ ಮೊದಲು ಆಡಳಿತ ನಮ್ಮ ಸಹೋದ್ಯೋಗಿಗೆ ಹೇಗೆ ಶಿಕ್ಷೆ ನೀಡಬಹುದು? ದನದ ಕರು ಖುರೇಷಿಯವರ ಟ್ರಕ್ನಿಂದ ಬೀಳಲಿಲ್ಲ. ಅದು ಮತ್ತೊಂದು ವಾಹನದಿಂದ ಬಂದಿದೆ. ಅವನ ಮೇಲೆ ತಪ್ಪಾಗಿ ಆರೋಪ ಹೊರಿಸಲಾಗಿದೆ,” ಎಂದು ಹೇಳಿದ್ದಾರೆ.

ಪ್ರತಿಭಟನೆಯಿಂದ ನಗರದ ದೊಡ್ಡ ಭಾಗದಲ್ಲಿ ಸ್ವಚ್ಛತಾ ಸೇವೆಗಳಿಗೆ ಅಡ್ಡಿಯುಂಟಾಗಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ಮೇಲೆ ಒತ್ತಡ ಹೆಚ್ಚುತ್ತಿದೆ.

ರತ್ಲಂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, “ಇದು ಹಬ್ಬದ ಸಮಯ ಮತ್ತು ಉದ್ವಿಗ್ನತೆ ಹೆಚ್ಚಲು ನಾವು ಬಯಸುವುದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುಎಂದು ಹೇಳುವ ಮೂಲಕ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಯಾವುದೇ ತನಿಖೆ ಇಲ್ಲದೆ ಸಾದಿಕ್ ಖುರೇಷಿಯವರನ್ನು ಬಂಧಿಸುವ ನಿರ್ಧಾರವು ಟೀಕೆಗೆ ಗುರಿಯಾಗಿದೆ. ನಾಗರಿಕ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರು ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಬದಲು, ಬಜರಂಗ ದಳದ ಪ್ರಭಾವದಡಿಯಲ್ಲಿ ಪೊಲೀಸರು ಮತ್ತು ಕಾರ್ಪೊರೇಷನ್ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ. ಸಮುದಾಯದ ಸದಸ್ಯರು ಮತ್ತು ಮುನ್ಸಿಪಲ್ ಕೆಲಸಗಾರರು ಇಬ್ಬರೂ ಡ್ರೈವರ್ ಅನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶ್ರೀಲಂಕಾದಲ್ಲಿ ಮಹಿಳಾ ರೈತ ಹೋರಾಟಗಾರ್ತಿ ‘ ನೈಲೆನಿ ಜಾಗತಿಕ ವೇದಿಕೆ’ಯಿಂದ 3ನೇ ಸಮಾವೇಶ: 102 ದೇಶಗಳಿಂದ 700 ಕಾರ್ಯಕರ್ತರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...