Homeಮುಖಪುಟ‘ಅಶಾಂತಿ ಉಂಟಾಗಬಹುದು’: ಲಕ್ಷದ್ವೀಪ ಪ್ರವೇಶಿಸದಂತೆ ಎಡ ಹಾಗೂ ಕಾಂಗ್ರೆಸ್‌ ಸಂಸದರಿಗೆ ತಡೆ!

‘ಅಶಾಂತಿ ಉಂಟಾಗಬಹುದು’: ಲಕ್ಷದ್ವೀಪ ಪ್ರವೇಶಿಸದಂತೆ ಎಡ ಹಾಗೂ ಕಾಂಗ್ರೆಸ್‌ ಸಂಸದರಿಗೆ ತಡೆ!

- Advertisement -
- Advertisement -

ಲಕ್ಷದ್ವೀಪಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿರುವ ಕೇರಳದ ಹಲವಾರು ಸಂಸದರನ್ನು ಮತ್ತೊಮ್ಮೆ ತಡೆಯಲಾಗಿದೆ. ಕೇರಳದ ಆಡಳಿತ ಪಕ್ಷದ ಎಡಪಂಥೀಯ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ನ ಸಂಸದರಿಗೆ ಆಶ್ಚರ್ಯಕರ ಕಾರಣಗಳಿಗಾಗಿ ಪ್ರವೇಶವನ್ನು ತಿರಸ್ಕರಿಸಲಾಗಿದೆ.

ಎಡಪಂಥೀಯ ಸಂಸದರಿಗೆ ‘ಉತ್ತಮ ನಡವಳಿಕೆಯ ಘೋಷಣೆ’ಗಳನ್ನು ಸಲ್ಲಿಸಲು ದ್ವೀಪದ ಆಡಳಿತವು ಕೇಳಿದ್ದು, ಕಾಂಗ್ರೆಸ್ ಸಂಸದರ ಭೇಟಿಯಿಂದ ಶಾಂತಿಯುತ ದ್ವೀಪದಲ್ಲಿ ಅಶಾಂತಿ ಉಂಟಾಗುತ್ತದೆ ಎಂದು ತಿಳಿಸಿ ಪ್ರವೇಶಕ್ಕೆ ನಿರಾಕರಿಸಲಾಗಿದೆ.

ಲಕ್ಷದ್ವೀಪಕ್ಕೆ ದ್ವೀಪವಾಸಿಯಲ್ಲದವರು ತೆರಳಬೇಕೆಂದರೆ ಅಲ್ಲಿನ ದ್ವೀಪವಾಸಿಯೊಬ್ಬರು ‘ಪ್ರಾಯೋಜಕ’ ಆಗಿ ಇರಬೇಕಾಗುತ್ತದೆ. ಆದರೆ ‘ಉತ್ತಮ ನಡವಳಿಕೆಯ ಘೋಷಣೆ’ಯು ದ್ವೀಪಗಳಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ವಲಸೆ ಕಾರ್ಮಿಕರಿಗೆ ಬಳಸುವ ವ್ಯವಸ್ಥೆಯಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಎಡಪಕ್ಷಗಳ ಏಳು ಸಂಸದರ ಪ್ರಾಯೋಜಕರನ್ನು ನೋಟರಿ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಸಹಿ ಮಾಡಿದ ‘ಉತ್ತಮ ನಡವಳಿಕೆ ಘೋಷಣೆ’ಗಳನ್ನು ಸಲ್ಲಿಸಲು ಲಕ್ಷದ್ವೀಪ ಆಡಳಿತ ಕೇಳಿದೆ.

ದ್ವೀಪಗಳಿಗೆ ಭೇಟಿ ನೀಡುವ ಬಗ್ಗೆಗಿನ ಈ ಗೊಂದಲದ ಪರಿಸ್ಥಿತಿಯ ಬಗ್ಗೆ ಸಂಸದರು ಆಕ್ರೋಶಗೊಂಡಿದ್ದು, ‘‘ಇದು ಜನ ಪ್ರತಿನಿಧಿಗಳ ಶಾಸನಬದ್ದ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ಆಲಪ್ಪುಳ ಕ್ಷೇತ್ರದ ಸಂಸದ ಎ.ಎಂ.ಆರಿಫ್ ಹೇಳಿದ್ದಾರೆ. ಈ ಬಗ್ಗೆ ಸಂಸದರು ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿರುದ್ಧ ಆಕ್ರೋಶ, ಆರೋಪಗಳ ಸರಮಾಲೆ ಕೇಳಿಬಂದಾಗಿನಿಂದ ಎಡ ಪಕ್ಷಗಳ ಏಳು ಸಂಸದ ಅದರ ‘ಸತ್ಯ ಶೋಧನೆ’ಗಾಗಿ ದ್ವೀಪಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೊರೊನಾ ನಿರ್ಬಂಧಗಳನ್ನು ಉಲ್ಲೇಖಿಸಿ ಅವರಿಗೆ ಈ ಮೊದಲು ಪ್ರವೇಶ ನಿರಾಕರಿಸಲಾಗಿತ್ತು.

ಈ ಬಗ್ಗೆ ಸಂಸದರು ಸ್ಪೀಕರ್‌ ಮೂಲಕ ಪ್ರಫುಲ್‌ ಪಟೇಲ್ ಅವರಿಂದ ವಿವರಣೆ ಕೇಳಿದ್ದರು. ನಂತರ ಅವರು ದ್ವೀಪಗಳಿಗೆ ಪ್ರವೇಶಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಈ ವೇಳೆ, ಕಾಂಗ್ರೆಸ್ ಸಂಸದರಾದ ಹಿಬಿ ಈಡನ್ ಮತ್ತು ಟಿ.ಎನ್.ಪ್ರತಾಪನ್ ಅವರು ದ್ವೀಪಗಳಿಗೆ ಭೇಟಿ ನೀಡುವ ಅರ್ಜಿಗಳನ್ನು ಲಕ್ಷದ್ವೀಪ ಆಡಳಿತ ನಿರಾಕರಿಸಿದೆ. ಅವರ ರಾಜಕೀಯ ಚಟುವಟಿಕೆಯ ಭೇಟಿಯಿಂದಾಗಿ ದ್ವೀಪದ ಶಾಂತಿಯುತ ಪರಿಸರಕ್ಕೆ ಭಂಗ ಉಂಟಾಗುತ್ತದೆ ಎಂದು ಹೇಳಿ ಅವರ ಪ್ರವೇಶವನ್ನು ತಿರಸ್ಕರಿಸಲಾಗಿದೆ.

“ದ್ವೀಪದ ಹೊರಗಿನ ರಾಜಕೀಯ ಪಕ್ಷಗಳು ಮತ್ತು ನಾಯಕರು ದ್ವೀಪದ ಜನರು, ರಾಜಕೀಯ ಪಕ್ಷಗಳು, ಕಾರ್ಯಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿರುವುದರಿಂದ ಸಂಸದರ ಭೇಟಿಯು ದ್ವೀಪಗಳಲ್ಲಿ ಅಶಾಂತಿಗೆ ಕಾರಣವಾಗಬಹುದು” ಎಂದು ಲಕ್ಷದ್ವೀಪದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಸ್.ಅಸ್ಕರ್ ಅಲಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...