Homeಮುಖಪುಟ‘ಅಶಾಂತಿ ಉಂಟಾಗಬಹುದು’: ಲಕ್ಷದ್ವೀಪ ಪ್ರವೇಶಿಸದಂತೆ ಎಡ ಹಾಗೂ ಕಾಂಗ್ರೆಸ್‌ ಸಂಸದರಿಗೆ ತಡೆ!

‘ಅಶಾಂತಿ ಉಂಟಾಗಬಹುದು’: ಲಕ್ಷದ್ವೀಪ ಪ್ರವೇಶಿಸದಂತೆ ಎಡ ಹಾಗೂ ಕಾಂಗ್ರೆಸ್‌ ಸಂಸದರಿಗೆ ತಡೆ!

- Advertisement -
- Advertisement -

ಲಕ್ಷದ್ವೀಪಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿರುವ ಕೇರಳದ ಹಲವಾರು ಸಂಸದರನ್ನು ಮತ್ತೊಮ್ಮೆ ತಡೆಯಲಾಗಿದೆ. ಕೇರಳದ ಆಡಳಿತ ಪಕ್ಷದ ಎಡಪಂಥೀಯ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ನ ಸಂಸದರಿಗೆ ಆಶ್ಚರ್ಯಕರ ಕಾರಣಗಳಿಗಾಗಿ ಪ್ರವೇಶವನ್ನು ತಿರಸ್ಕರಿಸಲಾಗಿದೆ.

ಎಡಪಂಥೀಯ ಸಂಸದರಿಗೆ ‘ಉತ್ತಮ ನಡವಳಿಕೆಯ ಘೋಷಣೆ’ಗಳನ್ನು ಸಲ್ಲಿಸಲು ದ್ವೀಪದ ಆಡಳಿತವು ಕೇಳಿದ್ದು, ಕಾಂಗ್ರೆಸ್ ಸಂಸದರ ಭೇಟಿಯಿಂದ ಶಾಂತಿಯುತ ದ್ವೀಪದಲ್ಲಿ ಅಶಾಂತಿ ಉಂಟಾಗುತ್ತದೆ ಎಂದು ತಿಳಿಸಿ ಪ್ರವೇಶಕ್ಕೆ ನಿರಾಕರಿಸಲಾಗಿದೆ.

ಲಕ್ಷದ್ವೀಪಕ್ಕೆ ದ್ವೀಪವಾಸಿಯಲ್ಲದವರು ತೆರಳಬೇಕೆಂದರೆ ಅಲ್ಲಿನ ದ್ವೀಪವಾಸಿಯೊಬ್ಬರು ‘ಪ್ರಾಯೋಜಕ’ ಆಗಿ ಇರಬೇಕಾಗುತ್ತದೆ. ಆದರೆ ‘ಉತ್ತಮ ನಡವಳಿಕೆಯ ಘೋಷಣೆ’ಯು ದ್ವೀಪಗಳಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ವಲಸೆ ಕಾರ್ಮಿಕರಿಗೆ ಬಳಸುವ ವ್ಯವಸ್ಥೆಯಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಎಡಪಕ್ಷಗಳ ಏಳು ಸಂಸದರ ಪ್ರಾಯೋಜಕರನ್ನು ನೋಟರಿ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಸಹಿ ಮಾಡಿದ ‘ಉತ್ತಮ ನಡವಳಿಕೆ ಘೋಷಣೆ’ಗಳನ್ನು ಸಲ್ಲಿಸಲು ಲಕ್ಷದ್ವೀಪ ಆಡಳಿತ ಕೇಳಿದೆ.

ದ್ವೀಪಗಳಿಗೆ ಭೇಟಿ ನೀಡುವ ಬಗ್ಗೆಗಿನ ಈ ಗೊಂದಲದ ಪರಿಸ್ಥಿತಿಯ ಬಗ್ಗೆ ಸಂಸದರು ಆಕ್ರೋಶಗೊಂಡಿದ್ದು, ‘‘ಇದು ಜನ ಪ್ರತಿನಿಧಿಗಳ ಶಾಸನಬದ್ದ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ಆಲಪ್ಪುಳ ಕ್ಷೇತ್ರದ ಸಂಸದ ಎ.ಎಂ.ಆರಿಫ್ ಹೇಳಿದ್ದಾರೆ. ಈ ಬಗ್ಗೆ ಸಂಸದರು ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿರುದ್ಧ ಆಕ್ರೋಶ, ಆರೋಪಗಳ ಸರಮಾಲೆ ಕೇಳಿಬಂದಾಗಿನಿಂದ ಎಡ ಪಕ್ಷಗಳ ಏಳು ಸಂಸದ ಅದರ ‘ಸತ್ಯ ಶೋಧನೆ’ಗಾಗಿ ದ್ವೀಪಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೊರೊನಾ ನಿರ್ಬಂಧಗಳನ್ನು ಉಲ್ಲೇಖಿಸಿ ಅವರಿಗೆ ಈ ಮೊದಲು ಪ್ರವೇಶ ನಿರಾಕರಿಸಲಾಗಿತ್ತು.

ಈ ಬಗ್ಗೆ ಸಂಸದರು ಸ್ಪೀಕರ್‌ ಮೂಲಕ ಪ್ರಫುಲ್‌ ಪಟೇಲ್ ಅವರಿಂದ ವಿವರಣೆ ಕೇಳಿದ್ದರು. ನಂತರ ಅವರು ದ್ವೀಪಗಳಿಗೆ ಪ್ರವೇಶಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಈ ವೇಳೆ, ಕಾಂಗ್ರೆಸ್ ಸಂಸದರಾದ ಹಿಬಿ ಈಡನ್ ಮತ್ತು ಟಿ.ಎನ್.ಪ್ರತಾಪನ್ ಅವರು ದ್ವೀಪಗಳಿಗೆ ಭೇಟಿ ನೀಡುವ ಅರ್ಜಿಗಳನ್ನು ಲಕ್ಷದ್ವೀಪ ಆಡಳಿತ ನಿರಾಕರಿಸಿದೆ. ಅವರ ರಾಜಕೀಯ ಚಟುವಟಿಕೆಯ ಭೇಟಿಯಿಂದಾಗಿ ದ್ವೀಪದ ಶಾಂತಿಯುತ ಪರಿಸರಕ್ಕೆ ಭಂಗ ಉಂಟಾಗುತ್ತದೆ ಎಂದು ಹೇಳಿ ಅವರ ಪ್ರವೇಶವನ್ನು ತಿರಸ್ಕರಿಸಲಾಗಿದೆ.

“ದ್ವೀಪದ ಹೊರಗಿನ ರಾಜಕೀಯ ಪಕ್ಷಗಳು ಮತ್ತು ನಾಯಕರು ದ್ವೀಪದ ಜನರು, ರಾಜಕೀಯ ಪಕ್ಷಗಳು, ಕಾರ್ಯಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿರುವುದರಿಂದ ಸಂಸದರ ಭೇಟಿಯು ದ್ವೀಪಗಳಲ್ಲಿ ಅಶಾಂತಿಗೆ ಕಾರಣವಾಗಬಹುದು” ಎಂದು ಲಕ್ಷದ್ವೀಪದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಸ್.ಅಸ್ಕರ್ ಅಲಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...