Homeಮುಖಪುಟ‘ಅಶಾಂತಿ ಉಂಟಾಗಬಹುದು’: ಲಕ್ಷದ್ವೀಪ ಪ್ರವೇಶಿಸದಂತೆ ಎಡ ಹಾಗೂ ಕಾಂಗ್ರೆಸ್‌ ಸಂಸದರಿಗೆ ತಡೆ!

‘ಅಶಾಂತಿ ಉಂಟಾಗಬಹುದು’: ಲಕ್ಷದ್ವೀಪ ಪ್ರವೇಶಿಸದಂತೆ ಎಡ ಹಾಗೂ ಕಾಂಗ್ರೆಸ್‌ ಸಂಸದರಿಗೆ ತಡೆ!

- Advertisement -
- Advertisement -

ಲಕ್ಷದ್ವೀಪಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿರುವ ಕೇರಳದ ಹಲವಾರು ಸಂಸದರನ್ನು ಮತ್ತೊಮ್ಮೆ ತಡೆಯಲಾಗಿದೆ. ಕೇರಳದ ಆಡಳಿತ ಪಕ್ಷದ ಎಡಪಂಥೀಯ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ನ ಸಂಸದರಿಗೆ ಆಶ್ಚರ್ಯಕರ ಕಾರಣಗಳಿಗಾಗಿ ಪ್ರವೇಶವನ್ನು ತಿರಸ್ಕರಿಸಲಾಗಿದೆ.

ಎಡಪಂಥೀಯ ಸಂಸದರಿಗೆ ‘ಉತ್ತಮ ನಡವಳಿಕೆಯ ಘೋಷಣೆ’ಗಳನ್ನು ಸಲ್ಲಿಸಲು ದ್ವೀಪದ ಆಡಳಿತವು ಕೇಳಿದ್ದು, ಕಾಂಗ್ರೆಸ್ ಸಂಸದರ ಭೇಟಿಯಿಂದ ಶಾಂತಿಯುತ ದ್ವೀಪದಲ್ಲಿ ಅಶಾಂತಿ ಉಂಟಾಗುತ್ತದೆ ಎಂದು ತಿಳಿಸಿ ಪ್ರವೇಶಕ್ಕೆ ನಿರಾಕರಿಸಲಾಗಿದೆ.

ಲಕ್ಷದ್ವೀಪಕ್ಕೆ ದ್ವೀಪವಾಸಿಯಲ್ಲದವರು ತೆರಳಬೇಕೆಂದರೆ ಅಲ್ಲಿನ ದ್ವೀಪವಾಸಿಯೊಬ್ಬರು ‘ಪ್ರಾಯೋಜಕ’ ಆಗಿ ಇರಬೇಕಾಗುತ್ತದೆ. ಆದರೆ ‘ಉತ್ತಮ ನಡವಳಿಕೆಯ ಘೋಷಣೆ’ಯು ದ್ವೀಪಗಳಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ವಲಸೆ ಕಾರ್ಮಿಕರಿಗೆ ಬಳಸುವ ವ್ಯವಸ್ಥೆಯಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಎಡಪಕ್ಷಗಳ ಏಳು ಸಂಸದರ ಪ್ರಾಯೋಜಕರನ್ನು ನೋಟರಿ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಸಹಿ ಮಾಡಿದ ‘ಉತ್ತಮ ನಡವಳಿಕೆ ಘೋಷಣೆ’ಗಳನ್ನು ಸಲ್ಲಿಸಲು ಲಕ್ಷದ್ವೀಪ ಆಡಳಿತ ಕೇಳಿದೆ.

ದ್ವೀಪಗಳಿಗೆ ಭೇಟಿ ನೀಡುವ ಬಗ್ಗೆಗಿನ ಈ ಗೊಂದಲದ ಪರಿಸ್ಥಿತಿಯ ಬಗ್ಗೆ ಸಂಸದರು ಆಕ್ರೋಶಗೊಂಡಿದ್ದು, ‘‘ಇದು ಜನ ಪ್ರತಿನಿಧಿಗಳ ಶಾಸನಬದ್ದ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ಆಲಪ್ಪುಳ ಕ್ಷೇತ್ರದ ಸಂಸದ ಎ.ಎಂ.ಆರಿಫ್ ಹೇಳಿದ್ದಾರೆ. ಈ ಬಗ್ಗೆ ಸಂಸದರು ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿರುದ್ಧ ಆಕ್ರೋಶ, ಆರೋಪಗಳ ಸರಮಾಲೆ ಕೇಳಿಬಂದಾಗಿನಿಂದ ಎಡ ಪಕ್ಷಗಳ ಏಳು ಸಂಸದ ಅದರ ‘ಸತ್ಯ ಶೋಧನೆ’ಗಾಗಿ ದ್ವೀಪಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೊರೊನಾ ನಿರ್ಬಂಧಗಳನ್ನು ಉಲ್ಲೇಖಿಸಿ ಅವರಿಗೆ ಈ ಮೊದಲು ಪ್ರವೇಶ ನಿರಾಕರಿಸಲಾಗಿತ್ತು.

ಈ ಬಗ್ಗೆ ಸಂಸದರು ಸ್ಪೀಕರ್‌ ಮೂಲಕ ಪ್ರಫುಲ್‌ ಪಟೇಲ್ ಅವರಿಂದ ವಿವರಣೆ ಕೇಳಿದ್ದರು. ನಂತರ ಅವರು ದ್ವೀಪಗಳಿಗೆ ಪ್ರವೇಶಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಈ ವೇಳೆ, ಕಾಂಗ್ರೆಸ್ ಸಂಸದರಾದ ಹಿಬಿ ಈಡನ್ ಮತ್ತು ಟಿ.ಎನ್.ಪ್ರತಾಪನ್ ಅವರು ದ್ವೀಪಗಳಿಗೆ ಭೇಟಿ ನೀಡುವ ಅರ್ಜಿಗಳನ್ನು ಲಕ್ಷದ್ವೀಪ ಆಡಳಿತ ನಿರಾಕರಿಸಿದೆ. ಅವರ ರಾಜಕೀಯ ಚಟುವಟಿಕೆಯ ಭೇಟಿಯಿಂದಾಗಿ ದ್ವೀಪದ ಶಾಂತಿಯುತ ಪರಿಸರಕ್ಕೆ ಭಂಗ ಉಂಟಾಗುತ್ತದೆ ಎಂದು ಹೇಳಿ ಅವರ ಪ್ರವೇಶವನ್ನು ತಿರಸ್ಕರಿಸಲಾಗಿದೆ.

“ದ್ವೀಪದ ಹೊರಗಿನ ರಾಜಕೀಯ ಪಕ್ಷಗಳು ಮತ್ತು ನಾಯಕರು ದ್ವೀಪದ ಜನರು, ರಾಜಕೀಯ ಪಕ್ಷಗಳು, ಕಾರ್ಯಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿರುವುದರಿಂದ ಸಂಸದರ ಭೇಟಿಯು ದ್ವೀಪಗಳಲ್ಲಿ ಅಶಾಂತಿಗೆ ಕಾರಣವಾಗಬಹುದು” ಎಂದು ಲಕ್ಷದ್ವೀಪದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಸ್.ಅಸ್ಕರ್ ಅಲಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...