Homeಮುಖಪುಟಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

- Advertisement -
- Advertisement -

ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರದ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿವಾಸ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. 100 ಅಧಿಕಾರಿಗಳನ್ನೊಳಗೊಂಡ ತಂಡವು ಗುರುವಾರ ಬೆಳಗ್ಗೆ ವಿವಿಧ ನಗರಗಳಲ್ಲಿನ 30 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಆಗಸ್ಟ್ 23, 2018ರಿಂದ ಅಕ್ಟೋಬರ್ 30, 2019ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್ ಅವರು ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

2019ರಲ್ಲಿ ಖಾಸಗಿ ಕಂಪನಿಯೊಂದಕ್ಕೆ ಕಿರು ಜಲವಿದ್ಯುತ್ ಯೋಜನೆ (ಎಚ್‌ಇಪಿ)ಗಾಗಿ ಸುಮಾರು 2,200 ಕೋಟಿ ಮೌಲ್ಯದ ಸಿವಿಲ್ ಕಾಮಗಾರಿಯ ಗುತ್ತಿಗೆಯನ್ನು ನೀಡುವಲ್ಲಿ ಅವ್ಯವಹಾರದ ಆರೋಪಗಳಿಗೆ ಈ ತನಿಖೆ ಸಂಬಂಧಿಸಿದೆ. ಏಪ್ರಿಲ್ 20, 2022ರಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಮನವಿ ಮೇರೆಗೆ ಈ ಬಗ್ಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅಂದಿನ ಕಿರು ಜಲವಿದ್ಯುತ್ ಯೋಜನೆಯ ಚಯರ್‌ ಮ್ಯಾನ್‌, ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್‌ನ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರ ಅಪರಿಚಿತರ ವಿರುದ್ಧ ಅವ್ಯವಹಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಕಿರು ಜಲವಿದ್ಯುತ್ ಯೋಜನೆಯ ಸಿವಿಲ್ ಕಾಮಗಾರಿಗೆ ಪ್ಯಾಕೇಜ್‌ನ್ನು ಇ-ಟೆಂಡರ್ ಮಾಡುವ ಮಾರ್ಗಸೂಚಿಗಳನ್ನು ಅನುಸರಿಸದೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸಿವಿಪಿಪಿಪಿಎಲ್ (ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್) ಮಂಡಳಿಯ ಸಭೆಯಲ್ಲಿ ಮತ್ತೆ ಹರಾಜಿನ ಮೂಲಕ ಇ-ಟೆಂಡರ್ ಮೂಲಕ ಮರು ಟೆಂಡರ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಅದನ್ನು ಕಾರ್ಯಗತಗೊಳಿಸಲಾಗಿಲ್ಲ. ಅಂತಿಮವಾಗಿ ಟೆಂಡರ್‌ನ್ನು ಖಾಸಗಿ ಕಂಪನಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 2ರಂದು ಸಿಬಿಐ ದೆಹಲಿ, ನೋಯ್ಡಾ, ಚಂಡೀಗಢ ಮತ್ತು ಶಿಮ್ಲಾದ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಇದಲ್ಲದೆ ಜನವರಿ 29, 2024ರಂದು ಸಿಬಿಐ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 21ಲಕ್ಷಕ್ಕೂ ಹೆಚ್ಚು ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ಮೋದಿ, ಬಿಜೆಪಿ ಸರಕಾರವನ್ನು ಹಲವು ಬಾರಿ ತರಾಟೆಗೆ ತೆಗೆದುಕೊಂಡಿದ್ದ ಸತ್ಯಪಾಲ್ ಮಲಿಕ್

2024 ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೇಳಿಕೆಯನ್ನು ನೀಡಿದ್ದರು. ಈ ಮೊದಲು ಪುಲ್ವಮಾ ದಾಳಿ ಬಗ್ಗೆ ಮೋದಿ ಸರಕಾರದ ಬಗ್ಗೆ ಗಂಭೀರವಾದ ಆರೋಪವನ್ನು ಮಾಡಿದ್ದ ಸತ್ಯಪಾಲ್ ಮಲಿಕ್‌, ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅದನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಮೌನವಾಗಿರುವಂತೆ ಸೂಚಿಸಿದ್ದರು ಎಂದು ಹೇಳಿದ್ದರು.

ಇದಲ್ಲದೆ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕೇಂದ್ರ ಸರಕಾರವನ್ನು ತರಾಟೆಗೆ ತಗೆದುಕೊಂಡಿದ್ದರು. ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ಮೋದಿ ಅವರಿಗೆ ಸಲಹೆ ನೀಡಿದಾಗ, ಅವರು ನನಗಾಗಿ ಸತ್ತರೇ? ನಾನ್ಯಾಕೆ ಶ್ರದ್ಧಾಂಜಲಿ ಸಲ್ಲಿಸಲಿ ಎಂದು ಮೋದಿ ಹೇಳಿದ್ದರು ಎಂದು ಮಲಿಕ್ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಣಿಪುರ ಹಿಂಚಾರದ ಬಗ್ಗೆಯೂ ಕೇಂದ್ರ ಸರಕಾರವನ್ನು ಟೀಕಿಸಿ ಹೇಳಿಕೆ ನೀಡಿದ್ದರು.

ಇದನ್ನು ಓದಿ: ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...