Homeಮುಖಪುಟಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

- Advertisement -
- Advertisement -

ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರದ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿವಾಸ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. 100 ಅಧಿಕಾರಿಗಳನ್ನೊಳಗೊಂಡ ತಂಡವು ಗುರುವಾರ ಬೆಳಗ್ಗೆ ವಿವಿಧ ನಗರಗಳಲ್ಲಿನ 30 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಆಗಸ್ಟ್ 23, 2018ರಿಂದ ಅಕ್ಟೋಬರ್ 30, 2019ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್ ಅವರು ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

2019ರಲ್ಲಿ ಖಾಸಗಿ ಕಂಪನಿಯೊಂದಕ್ಕೆ ಕಿರು ಜಲವಿದ್ಯುತ್ ಯೋಜನೆ (ಎಚ್‌ಇಪಿ)ಗಾಗಿ ಸುಮಾರು 2,200 ಕೋಟಿ ಮೌಲ್ಯದ ಸಿವಿಲ್ ಕಾಮಗಾರಿಯ ಗುತ್ತಿಗೆಯನ್ನು ನೀಡುವಲ್ಲಿ ಅವ್ಯವಹಾರದ ಆರೋಪಗಳಿಗೆ ಈ ತನಿಖೆ ಸಂಬಂಧಿಸಿದೆ. ಏಪ್ರಿಲ್ 20, 2022ರಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಮನವಿ ಮೇರೆಗೆ ಈ ಬಗ್ಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅಂದಿನ ಕಿರು ಜಲವಿದ್ಯುತ್ ಯೋಜನೆಯ ಚಯರ್‌ ಮ್ಯಾನ್‌, ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್‌ನ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರ ಅಪರಿಚಿತರ ವಿರುದ್ಧ ಅವ್ಯವಹಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಕಿರು ಜಲವಿದ್ಯುತ್ ಯೋಜನೆಯ ಸಿವಿಲ್ ಕಾಮಗಾರಿಗೆ ಪ್ಯಾಕೇಜ್‌ನ್ನು ಇ-ಟೆಂಡರ್ ಮಾಡುವ ಮಾರ್ಗಸೂಚಿಗಳನ್ನು ಅನುಸರಿಸದೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸಿವಿಪಿಪಿಪಿಎಲ್ (ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್) ಮಂಡಳಿಯ ಸಭೆಯಲ್ಲಿ ಮತ್ತೆ ಹರಾಜಿನ ಮೂಲಕ ಇ-ಟೆಂಡರ್ ಮೂಲಕ ಮರು ಟೆಂಡರ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಅದನ್ನು ಕಾರ್ಯಗತಗೊಳಿಸಲಾಗಿಲ್ಲ. ಅಂತಿಮವಾಗಿ ಟೆಂಡರ್‌ನ್ನು ಖಾಸಗಿ ಕಂಪನಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 2ರಂದು ಸಿಬಿಐ ದೆಹಲಿ, ನೋಯ್ಡಾ, ಚಂಡೀಗಢ ಮತ್ತು ಶಿಮ್ಲಾದ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಇದಲ್ಲದೆ ಜನವರಿ 29, 2024ರಂದು ಸಿಬಿಐ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 21ಲಕ್ಷಕ್ಕೂ ಹೆಚ್ಚು ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ಮೋದಿ, ಬಿಜೆಪಿ ಸರಕಾರವನ್ನು ಹಲವು ಬಾರಿ ತರಾಟೆಗೆ ತೆಗೆದುಕೊಂಡಿದ್ದ ಸತ್ಯಪಾಲ್ ಮಲಿಕ್

2024 ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೇಳಿಕೆಯನ್ನು ನೀಡಿದ್ದರು. ಈ ಮೊದಲು ಪುಲ್ವಮಾ ದಾಳಿ ಬಗ್ಗೆ ಮೋದಿ ಸರಕಾರದ ಬಗ್ಗೆ ಗಂಭೀರವಾದ ಆರೋಪವನ್ನು ಮಾಡಿದ್ದ ಸತ್ಯಪಾಲ್ ಮಲಿಕ್‌, ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅದನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಮೌನವಾಗಿರುವಂತೆ ಸೂಚಿಸಿದ್ದರು ಎಂದು ಹೇಳಿದ್ದರು.

ಇದಲ್ಲದೆ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕೇಂದ್ರ ಸರಕಾರವನ್ನು ತರಾಟೆಗೆ ತಗೆದುಕೊಂಡಿದ್ದರು. ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ಮೋದಿ ಅವರಿಗೆ ಸಲಹೆ ನೀಡಿದಾಗ, ಅವರು ನನಗಾಗಿ ಸತ್ತರೇ? ನಾನ್ಯಾಕೆ ಶ್ರದ್ಧಾಂಜಲಿ ಸಲ್ಲಿಸಲಿ ಎಂದು ಮೋದಿ ಹೇಳಿದ್ದರು ಎಂದು ಮಲಿಕ್ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಣಿಪುರ ಹಿಂಚಾರದ ಬಗ್ಗೆಯೂ ಕೇಂದ್ರ ಸರಕಾರವನ್ನು ಟೀಕಿಸಿ ಹೇಳಿಕೆ ನೀಡಿದ್ದರು.

ಇದನ್ನು ಓದಿ: ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...