Homeಮುಖಪುಟಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

- Advertisement -
- Advertisement -

ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರದ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿವಾಸ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. 100 ಅಧಿಕಾರಿಗಳನ್ನೊಳಗೊಂಡ ತಂಡವು ಗುರುವಾರ ಬೆಳಗ್ಗೆ ವಿವಿಧ ನಗರಗಳಲ್ಲಿನ 30 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಆಗಸ್ಟ್ 23, 2018ರಿಂದ ಅಕ್ಟೋಬರ್ 30, 2019ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್ ಅವರು ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

2019ರಲ್ಲಿ ಖಾಸಗಿ ಕಂಪನಿಯೊಂದಕ್ಕೆ ಕಿರು ಜಲವಿದ್ಯುತ್ ಯೋಜನೆ (ಎಚ್‌ಇಪಿ)ಗಾಗಿ ಸುಮಾರು 2,200 ಕೋಟಿ ಮೌಲ್ಯದ ಸಿವಿಲ್ ಕಾಮಗಾರಿಯ ಗುತ್ತಿಗೆಯನ್ನು ನೀಡುವಲ್ಲಿ ಅವ್ಯವಹಾರದ ಆರೋಪಗಳಿಗೆ ಈ ತನಿಖೆ ಸಂಬಂಧಿಸಿದೆ. ಏಪ್ರಿಲ್ 20, 2022ರಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಮನವಿ ಮೇರೆಗೆ ಈ ಬಗ್ಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅಂದಿನ ಕಿರು ಜಲವಿದ್ಯುತ್ ಯೋಜನೆಯ ಚಯರ್‌ ಮ್ಯಾನ್‌, ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್‌ನ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರ ಅಪರಿಚಿತರ ವಿರುದ್ಧ ಅವ್ಯವಹಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಕಿರು ಜಲವಿದ್ಯುತ್ ಯೋಜನೆಯ ಸಿವಿಲ್ ಕಾಮಗಾರಿಗೆ ಪ್ಯಾಕೇಜ್‌ನ್ನು ಇ-ಟೆಂಡರ್ ಮಾಡುವ ಮಾರ್ಗಸೂಚಿಗಳನ್ನು ಅನುಸರಿಸದೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸಿವಿಪಿಪಿಪಿಎಲ್ (ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್) ಮಂಡಳಿಯ ಸಭೆಯಲ್ಲಿ ಮತ್ತೆ ಹರಾಜಿನ ಮೂಲಕ ಇ-ಟೆಂಡರ್ ಮೂಲಕ ಮರು ಟೆಂಡರ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಅದನ್ನು ಕಾರ್ಯಗತಗೊಳಿಸಲಾಗಿಲ್ಲ. ಅಂತಿಮವಾಗಿ ಟೆಂಡರ್‌ನ್ನು ಖಾಸಗಿ ಕಂಪನಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 2ರಂದು ಸಿಬಿಐ ದೆಹಲಿ, ನೋಯ್ಡಾ, ಚಂಡೀಗಢ ಮತ್ತು ಶಿಮ್ಲಾದ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಇದಲ್ಲದೆ ಜನವರಿ 29, 2024ರಂದು ಸಿಬಿಐ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 21ಲಕ್ಷಕ್ಕೂ ಹೆಚ್ಚು ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ಮೋದಿ, ಬಿಜೆಪಿ ಸರಕಾರವನ್ನು ಹಲವು ಬಾರಿ ತರಾಟೆಗೆ ತೆಗೆದುಕೊಂಡಿದ್ದ ಸತ್ಯಪಾಲ್ ಮಲಿಕ್

2024 ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೇಳಿಕೆಯನ್ನು ನೀಡಿದ್ದರು. ಈ ಮೊದಲು ಪುಲ್ವಮಾ ದಾಳಿ ಬಗ್ಗೆ ಮೋದಿ ಸರಕಾರದ ಬಗ್ಗೆ ಗಂಭೀರವಾದ ಆರೋಪವನ್ನು ಮಾಡಿದ್ದ ಸತ್ಯಪಾಲ್ ಮಲಿಕ್‌, ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅದನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಮೌನವಾಗಿರುವಂತೆ ಸೂಚಿಸಿದ್ದರು ಎಂದು ಹೇಳಿದ್ದರು.

ಇದಲ್ಲದೆ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕೇಂದ್ರ ಸರಕಾರವನ್ನು ತರಾಟೆಗೆ ತಗೆದುಕೊಂಡಿದ್ದರು. ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ಮೋದಿ ಅವರಿಗೆ ಸಲಹೆ ನೀಡಿದಾಗ, ಅವರು ನನಗಾಗಿ ಸತ್ತರೇ? ನಾನ್ಯಾಕೆ ಶ್ರದ್ಧಾಂಜಲಿ ಸಲ್ಲಿಸಲಿ ಎಂದು ಮೋದಿ ಹೇಳಿದ್ದರು ಎಂದು ಮಲಿಕ್ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಣಿಪುರ ಹಿಂಚಾರದ ಬಗ್ಗೆಯೂ ಕೇಂದ್ರ ಸರಕಾರವನ್ನು ಟೀಕಿಸಿ ಹೇಳಿಕೆ ನೀಡಿದ್ದರು.

ಇದನ್ನು ಓದಿ: ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...