Homeಮುಖಪುಟಏರ್ ಇಂಡಿಯಾ ತನಿಖೆ ಮುಗಿಸಿದ ಸಿಬಿಐ: 'ಬಿಜೆಪಿಯು ಮನಮೋಹನ್ ಸಿಂಗ್ ಕ್ಷಮೆ ಕೇಳಬೇಕು..' ಎಂದ ಸಂಜಯ್...

ಏರ್ ಇಂಡಿಯಾ ತನಿಖೆ ಮುಗಿಸಿದ ಸಿಬಿಐ: ‘ಬಿಜೆಪಿಯು ಮನಮೋಹನ್ ಸಿಂಗ್ ಕ್ಷಮೆ ಕೇಳಬೇಕು..’ ಎಂದ ಸಂಜಯ್ ರಾವತ್

- Advertisement -
- Advertisement -

ಏರ್ ಇಂಡಿಯಾ-ಇಂಡಿಯನ್ ಏರ್‌ಲೈನ್ಸ್ ವಿಲೀನ ಪ್ರಕರಣದಲ್ಲಿ ಸಿಬಿಐ ಮುಕ್ತಾಯದ ವರದಿಯನ್ನು ಸಲ್ಲಿಸಿದ ನಂತರ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕ್ಷಮೆಯಾಚಿಸಬೇಕು ಎಂದು ಬಿಜೆಪಿಯನ್ನು ಒತ್ತಾಯಿಸಿದ್ದಾರೆ.

ಯುಪಿಎ ಅವಧಿಯಲ್ಲಿ ಏರ್ ಇಂಡಿಯಾ ಮತ್ತು ಇಂಡಿಯನ್ ಏರ್‌ಲೈನ್ಸ್ ವಿಲೀನದಿಂದ ರೂಪುಗೊಂಡ ಕಂಪನಿಯಾದ ಎನ್‌ಎಸಿಎಲ್ ವಿಮಾನಗಳ ಗುತ್ತಿಗೆಯಲ್ಲಿನ ಅಕ್ರಮಗಳ ಕುರಿತು ತನಿಖೆಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ಗುರುವಾರ ಹೇಳಿದರು.

ಈಗ ಅಜಿತ್ ಪವಾರ್ ನೇತೃತ್ವದ ಪಕ್ಷಕ್ಕೆ ಸೇರಿದ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಗುತ್ತಿಗೆ ನೀಡಿದಾಗ ಹಿಂದಿನ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ ಅಲೈಯನ್ಸ್ (ಯುಪಿಎ) ಸರ್ಕಾರದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ನಡೆದ ಭ್ರಷ್ಟಾಚಾರದ ಆರೋಪದ ಕುರಿತು ಮೇಲೆ ಬಿಜೆಪಿ ಧ್ವನಿ ಎತ್ತಿತ್ತು. ಈಗ ಸಿಬಿಐ ಕೇಸ್ ಕ್ಲೋಸ್ ಮಾಡಿದ್ದು, ಬಿಜೆಪಿಯು ಡಾ. ಮನಮೋಹನ್ ಸಿಂಗ್ ಅವರ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದರು.

ಏರ್ ಇಂಡಿಯಾ ಮತ್ತು ಇಂಡಿಯನ್ ಏರ್‌ಲೈನ್ಸ್ ವಿಲೀನದ ನಂತರ ನ್ಯಾಷನಲ್ ಏವಿಯೇಷನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NACIL) ಅನ್ನು ರಚಿಸಲಾಯಿತು. ಈ ನಿರ್ಧಾರವನ್ನು “ಅಪ್ರಾಮಾಣಿಕವಾಗಿ” ತೆಗೆದುಕೊಳ್ಳಲಾಗಿದೆ, ಸ್ವಾಧೀನ ಕಾರ್ಯಕ್ರಮ ನಡೆಯುತ್ತಿರುವಾಗಲೂ ವಿಮಾನವನ್ನು ಗುತ್ತಿಗೆಗೆ ನೀಡಲಾಗಿದೆ ಎಂದು ಸಿಬಿಐ ಆರೋಪಿಸಿತ್ತು.

ಗುತ್ತಿಗೆ ನಿರ್ಧಾರವನ್ನು “ಬಾಹ್ಯ ಪರಿಗಣನೆಗಳ ಮೇಲೆ ಇತರ ಅಪರಿಚಿತ ವ್ಯಕ್ತಿಗಳೊಂದಿಗೆ ಪಿತೂರಿ” ಮಾಡಲಾಗಿದೆ. ಇದರ ಪರಿಣಾಮವಾಗಿ ಖಾಸಗಿ ಕಂಪನಿಗಳಿಗೆ “ಹಣಕಾಸಿನ ಲಾಭ” ಮತ್ತು ಪರಿಣಾಮವಾಗಿ “ಸರ್ಕಾರಿ ಬೊಕ್ಕಸಕ್ಕೆ ನಷ್ಟ” ಎಂದು ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಆರೋಪಿಸಿದೆ.

ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ:

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾ ವಿಕಾಸ್ ಅಘಾಡಿ (ಎಂವಿಎ) ಪಾಲುದಾರರ ನಡುವೆ ವರದಿಯಾದ ಭಿನ್ನಾಭಿಪ್ರಾಯದ ಬಗ್ಗೆ ಮಾತನಾಡಿದ ರಾವತ್, “ಸೀಟು ಹಂಚಿಕೆಯಲ್ಲಿ ಮಿತ್ರಪಕ್ಷಗಳ ನಡುವೆ ಯಾವುದೇ ವಿವಾದವಿಲ್ಲ” ಎಂದು ಹೇಳಿದರು.

‘ಏಪ್ರಿಲ್ 3 ರಂದು ಶಿವಾಲಯದಲ್ಲಿ ಎಂವಿಎ ನಾಯಕರ ಪತ್ರಿಕಾಗೋಷ್ಠಿ ನಡೆಯಲಿದೆ. ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತು ಕಾಂಗ್ರೆಸ್ ಮುಖಂಡರಾದ ನಾನಾ ಪಟೋಲೆ, ಪೃಥ್ವಿರಾಜ್ ಚವ್ಹಾಣ್ ಮತ್ತು ಬಾಳಾಸಾಹೇಬ್ ಥೋರಟ್ ಉಪಸ್ಥಿತರಿರುವರು’ ಎಂದು ಅವರು ಹೇಳಿದರು.

ಮಾರ್ಚ್ 31 ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ “ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು” ಆಯೋಜಿಸಲಾದ ಪ್ರತಿಪಕ್ಷ ಇಂಡಿಯಾ ಬ್ಲಾಕ್ ರ್ಯಾಲಿಯಲ್ಲಿ ಠಾಕ್ರೆ ಭಾಗವಹಿಸಲಿದ್ದಾರೆ ಎಂದು ಸಂಜಯ್ ರಾವತ್ ಹೇಳಿದರು.

ಇದನ್ನೂ ಓದಿ; ‘ಐಟಿ ಇಲಾಖೆಯು ಬಿಜೆಪಿಯಿಂದ ₹4,600 ಕೋಟಿಗೆ ಬೇಡಿಕೆ ಇಡಬೇಕು..’; ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...