Homeಕರ್ನಾಟಕಸೌಜನ್ಯ ಪ್ರಕರಣ: ಸಂತೋಷ್‌ ರಾವ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ

ಸೌಜನ್ಯ ಪ್ರಕರಣ: ಸಂತೋಷ್‌ ರಾವ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ

- Advertisement -
- Advertisement -

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂತೋಷ್‌ ರಾವ್‌ಗೆ ನಿರ್ದೋಷಿ ಎಂದು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.

ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದ 4 ತಿಂಗಳ ಬಳಿಕ ಸಿಬಿಐ ಈ ಮೇಲ್ಮನವಿ ಸಲ್ಲಿಸಿದೆ.  ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂ.16ರಂದು ತೀರ್ಪು ನೀಡಿತ್ತು. ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶವನ್ನೂ ನೀಡಲಾಗಿತ್ತು.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ 2012ರ ಅ.12ರಂದು ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಸಂತೋಷ್‌ ರಾವ್‌ ಅವರನ್ನು ಬಂಧಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ 11 ವರ್ಷಗಳ ಬಳಿಕ ಆರೋಪಿಯನ್ನು ನಿರ್ದೋಷಿ ಎಂದು ವಿಚಾರಣಾ ನ್ಯಾಯಾಲಯ ತೀರ್ಪು ನೀಡಿತ್ತು. ಪ್ರಕರಣದಲ್ಲಿ ಸಂತೋಷ್‌ ರಾವ್‌ ವಿರುದ್ಧ ಸಿಬಿಐ ಪೂರಕ ಸಾಕ್ಷಿ ನೀಡಲು ವಿಫಲವಾಗಿದೆ ಎಂದು ಹೇಳಿತ್ತು.

ಈ ಮಧ್ಯೆ ‍ಪ್ರಕರಣದ ಮರು ತನಿಖೆಗೆ ಕೋರಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. 2012ರ ಅ.9ರ ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿದ್ದಳು. ಮರು ದಿನ ರಾತ್ರಿ ಮಣ್ಣಸಂಕ ಬಳಿಯಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಈ  ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು.

ಸೌಜನ್ಯ ಪ್ರಕರಣದಲ್ಲಿ 2012ರಲ್ಲಿ ಸಂತೋಷ್ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದ್ದರು. ಬಳಿಕ 2017ರಲ್ಲಿ ಸಂತೋಷ್ ರಾವ್‌ಗೆ ಜಾಮೀನು ದೊರೆತಿತ್ತು. ಮಗ ಜೈಲು ಸೇರಿದ ಬಳಿಕ ಕೊರಗಿನಲ್ಲಿ 2016ರಲ್ಲಿ ಸಂತೋಷ್ ರಾವ್ ತಾಯಿ ಕೊನೆಯುಸಿರೆಳೆದಿದ್ದರು. ಸುಮಾರು 38 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ರಾವ್ ತಂದೆ ಖಿನ್ನತೆಗೆ ಒಳಗಾಗಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಸಂತೋಷ್ ರಾವ್ ಎಲ್ಲಿಯೂ ಕಾಣಿಸಿಕೊಳ್ಳದೆ ತನ್ನಷ್ಟಕ್ಕೆ ತಾನೇ ದೇವಸ್ಥಾನದಲ್ಲಿ ಧಾರ್ಮಿಕ ಸೇವೆ ಮಾಡುತ್ತಾ ಉಳಿದುಕೊಂಡಿದ್ದರು.

ಸಂತೋಷ್‌ ರಾವ್‌ ನಿರ್ದೋಷಿ ಎಂಬ ತೀರ್ಪಿನ ಬೆನ್ನಲ್ಲೇ  ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕರಾವಳಿಯ ವಿವಿಧೆಡೆ ಭಾರೀ ಪ್ರತಿಭಟನೆ ನಡೆದಿದೆ.

ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಚೌಧರಿ ಲಾಲ್ ಸಿಂಗ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...