Homeಮುಖಪುಟಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಪ್ರಕರಣದಲ್ಲಿ ನೀಡಲಾಗಿದ್ದ ಜಾಮೀನನ್ನು ವಿಫಲಗೊಳಿಸಲೆಂದು ಅವರನ್ನು ಸಿಬಿಐ ಬಂಧಿಸಿತ್ತು ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾಗಿ ವರದಿಯಾಗಿದೆ.

ಸಿಬಿಐ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು ನೀಡುವ ವೇಳೆ ನ್ಯಾಯಮೂರ್ತಿ ಭುಯಾನ್ ಅವರು ಈ ವಿಚಾರ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಸಿಬಿಐ ಬಂಧನ ಉತ್ತರಕ್ಕಿಂತ ಹೆಚ್ಚು ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ. ಮಾರ್ಚ್‌ 2023ರಲ್ಲಿಯೇ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತಾದರೂ, ಅವರನ್ನು ಸಿಬಿಐ ಬಂಧಿಸಿರಲಿಲ್ಲ. ಬದಲಿಗೆ ಇಡಿ ಪ್ರಕರಣದಲ್ಲಿ ಅವರಿಗೆ ಜಾಮೀನು ದೊರೆತ ಬಳಿಕ ಸಿಬಿಐ ಕ್ರಿಯಾಶೀಲವಾಯಿತು. 22 ತಿಂಗಳಿಗೂ ಹೆಚ್ಚು ಕಾಲ ಸುಮ್ಮನಿದ್ದ ಸಿಬಿಐ, ಆನಂತರ ಕಾರ್ಯಪ್ರವೃತ್ತವಾಗಿ ಕೇಜ್ರಿವಾಲ್‌ ಅವರನ್ನು ವಶಕ್ಕೆ ನೀಡುವಂತೆ ಕೋರಿತು. ಸಿಬಿಐನ ಇಂತಹ ಕ್ರಮ ಬಂಧನದ ಸಂದರ್ಭದ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟು ಹಾಕುತ್ತದೆ. ಸಿಬಿಐ ಬಂಧನದ ಉದ್ದೇಶ ಇಡಿ ಪ್ರಕರಣದಲ್ಲಿ ನೀಡಲಾದ ಜಾಮೀನನ್ನು ವಿಫಲಗೊಳಿಸುವುದಾಗಿತ್ತು” ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ.

ವಿಚಾರಣೆ ವೇಳೆ ಸಿಬಿಐ ಬಂಧನ ಕಾನೂನು ಬದ್ಧವಾಗಿದೆ ಎಂದು ನ್ಯಾ. ಸೂರ್ಯಕಾಂತ್‌ ಹೇಳಿದರೆ, ನ್ಯಾ. ಭುಯಾನ್‌ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

“ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ದೊರೆತಿರುವಾಗ, ಅವರು ಮೊದಲು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿ ಜಾಮೀನು ಪಡೆಯಬೇಕಿತ್ತು ಎಂಬ ಸಾಲಿಸಿಟರ್‌ ಜನರಲ್‌ ಎಸ್‌. ವಿ ರಾಜು ಅವರ ವಾದವನ್ನು ಪುರಸ್ಕರಿಸಲಾಗದು. ಈ ಪ್ರಕರಣದಲ್ಲಿ ಮತ್ತೊಮ್ಮೆ ಕೇಜ್ರಿವಾಲ್‌ ಅವರನ್ನು ಬಂಧಿಸಿದ್ದು ಸಂಪೂರ್ಣ ಅಸಮರ್ಥನೀಯ ಎಂದ ನ್ಯಾ.ಭುಯಾನ್ ಅವರು, ಜಾಮೀನಿಗೆ ಆದ್ಯತೆ ನೀಡುವುದು ವಿಕಸಿತ ನ್ಯಾಯಶಾಸ್ತ್ರ ವ್ಯವಸ್ಥೆಯ ಒಂದು ಮುಖ. ಜಾಮೀನಿಗೇ ಆದ್ಯತೆ, ಅನಿವಾರ್ಯವಾದರೆ ಮಾತ್ರ ಜೈಲು ಎನ್ನುವುದನ್ನು ಮನಗಾಣಬೇಕು. ವಿಚಾರಣಾ ಪ್ರಕ್ರಿಯೆ ಅಥವಾ ಬಂಧನಕ್ಕೆ ಕಾರಣವಾಗುವ ಹಂತಗಳು ಕಿರುಕುಳವಾಗಿ ಮಾರ್ಪಡಾಗಬಾರದು. ಹೀಗಾಗಿ ಸಿಬಿಐ ಬಂಧನವು ನ್ಯಾಯಸಮ್ಮತವಲ್ಲ. ಮೇಲ್ಮನವಿದಾರರನ್ನು (ಕೇಜ್ರಿವಾಲ್) ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ಆದೇಶಿಸಿದ್ದಾರೆ.

ತನಿಖೆಗೆ ಸಹಕರಿಸುವುದು ಎಂದರೆ ಆರೋಪಿಯು ಪ್ರಾಸಿಕ್ಯೂಷನ್ ಬಯಸಿದ ರೀತಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದಲ್ಲ ಎಂಬುವುದಾಗಿ ನ್ಯಾಯಮೂರ್ತಿಗಳು ಸಿಬಿಐಯ ಕಿವಿ ಹಿಂಡಿದ್ದಾರೆ ಎಂದು ಬಾರ್ & ಬೆಂಚ್ ವರದಿ ಹೇಳಿದೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು | ತೀರ್ಪಿನ ಪ್ರಮುಖ ಅಂಶಗಳು; ಕೋರ್ಟ್‌ ವಿಧಿಸಿದ ಷರತ್ತುಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...