Homeಮುಖಪುಟಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಪ್ರಕರಣದಲ್ಲಿ ನೀಡಲಾಗಿದ್ದ ಜಾಮೀನನ್ನು ವಿಫಲಗೊಳಿಸಲೆಂದು ಅವರನ್ನು ಸಿಬಿಐ ಬಂಧಿಸಿತ್ತು ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾಗಿ ವರದಿಯಾಗಿದೆ.

ಸಿಬಿಐ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು ನೀಡುವ ವೇಳೆ ನ್ಯಾಯಮೂರ್ತಿ ಭುಯಾನ್ ಅವರು ಈ ವಿಚಾರ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಸಿಬಿಐ ಬಂಧನ ಉತ್ತರಕ್ಕಿಂತ ಹೆಚ್ಚು ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ. ಮಾರ್ಚ್‌ 2023ರಲ್ಲಿಯೇ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತಾದರೂ, ಅವರನ್ನು ಸಿಬಿಐ ಬಂಧಿಸಿರಲಿಲ್ಲ. ಬದಲಿಗೆ ಇಡಿ ಪ್ರಕರಣದಲ್ಲಿ ಅವರಿಗೆ ಜಾಮೀನು ದೊರೆತ ಬಳಿಕ ಸಿಬಿಐ ಕ್ರಿಯಾಶೀಲವಾಯಿತು. 22 ತಿಂಗಳಿಗೂ ಹೆಚ್ಚು ಕಾಲ ಸುಮ್ಮನಿದ್ದ ಸಿಬಿಐ, ಆನಂತರ ಕಾರ್ಯಪ್ರವೃತ್ತವಾಗಿ ಕೇಜ್ರಿವಾಲ್‌ ಅವರನ್ನು ವಶಕ್ಕೆ ನೀಡುವಂತೆ ಕೋರಿತು. ಸಿಬಿಐನ ಇಂತಹ ಕ್ರಮ ಬಂಧನದ ಸಂದರ್ಭದ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟು ಹಾಕುತ್ತದೆ. ಸಿಬಿಐ ಬಂಧನದ ಉದ್ದೇಶ ಇಡಿ ಪ್ರಕರಣದಲ್ಲಿ ನೀಡಲಾದ ಜಾಮೀನನ್ನು ವಿಫಲಗೊಳಿಸುವುದಾಗಿತ್ತು” ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ.

ವಿಚಾರಣೆ ವೇಳೆ ಸಿಬಿಐ ಬಂಧನ ಕಾನೂನು ಬದ್ಧವಾಗಿದೆ ಎಂದು ನ್ಯಾ. ಸೂರ್ಯಕಾಂತ್‌ ಹೇಳಿದರೆ, ನ್ಯಾ. ಭುಯಾನ್‌ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

“ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ದೊರೆತಿರುವಾಗ, ಅವರು ಮೊದಲು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿ ಜಾಮೀನು ಪಡೆಯಬೇಕಿತ್ತು ಎಂಬ ಸಾಲಿಸಿಟರ್‌ ಜನರಲ್‌ ಎಸ್‌. ವಿ ರಾಜು ಅವರ ವಾದವನ್ನು ಪುರಸ್ಕರಿಸಲಾಗದು. ಈ ಪ್ರಕರಣದಲ್ಲಿ ಮತ್ತೊಮ್ಮೆ ಕೇಜ್ರಿವಾಲ್‌ ಅವರನ್ನು ಬಂಧಿಸಿದ್ದು ಸಂಪೂರ್ಣ ಅಸಮರ್ಥನೀಯ ಎಂದ ನ್ಯಾ.ಭುಯಾನ್ ಅವರು, ಜಾಮೀನಿಗೆ ಆದ್ಯತೆ ನೀಡುವುದು ವಿಕಸಿತ ನ್ಯಾಯಶಾಸ್ತ್ರ ವ್ಯವಸ್ಥೆಯ ಒಂದು ಮುಖ. ಜಾಮೀನಿಗೇ ಆದ್ಯತೆ, ಅನಿವಾರ್ಯವಾದರೆ ಮಾತ್ರ ಜೈಲು ಎನ್ನುವುದನ್ನು ಮನಗಾಣಬೇಕು. ವಿಚಾರಣಾ ಪ್ರಕ್ರಿಯೆ ಅಥವಾ ಬಂಧನಕ್ಕೆ ಕಾರಣವಾಗುವ ಹಂತಗಳು ಕಿರುಕುಳವಾಗಿ ಮಾರ್ಪಡಾಗಬಾರದು. ಹೀಗಾಗಿ ಸಿಬಿಐ ಬಂಧನವು ನ್ಯಾಯಸಮ್ಮತವಲ್ಲ. ಮೇಲ್ಮನವಿದಾರರನ್ನು (ಕೇಜ್ರಿವಾಲ್) ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ಆದೇಶಿಸಿದ್ದಾರೆ.

ತನಿಖೆಗೆ ಸಹಕರಿಸುವುದು ಎಂದರೆ ಆರೋಪಿಯು ಪ್ರಾಸಿಕ್ಯೂಷನ್ ಬಯಸಿದ ರೀತಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದಲ್ಲ ಎಂಬುವುದಾಗಿ ನ್ಯಾಯಮೂರ್ತಿಗಳು ಸಿಬಿಐಯ ಕಿವಿ ಹಿಂಡಿದ್ದಾರೆ ಎಂದು ಬಾರ್ & ಬೆಂಚ್ ವರದಿ ಹೇಳಿದೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು | ತೀರ್ಪಿನ ಪ್ರಮುಖ ಅಂಶಗಳು; ಕೋರ್ಟ್‌ ವಿಧಿಸಿದ ಷರತ್ತುಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...