Homeಕರ್ನಾಟಕಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ನನ್ನ ವಿರುದ್ಧ ಒತ್ತಡ ಹಾಕುತ್ತಿರುವವರಿಗೆ ಒಳ್ಳೆಯದಾಗಲಿ

- Advertisement -
- Advertisement -

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಮಾಧ್ಯಮ ಸ್ನೇಹಿತರು ಬೆಳಗ್ಗೆಯಿಂದ ಅನೇಕ ವಿಚಾರ ತಿಳಿಸಿದ್ದೀರಿ. ಕೆಲವು ಸತ್ಯವನ್ನೂ ಹೇಳಿದ್ದೀರಿ, ಸುಳ್ಳನ್ನು ಹೇಳಿದ್ದೀರಿ. ಅದು ಏನೆಂಬುದನ್ನು ನೀವೇ ಯೋಚಿಸಿ. ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. 2017ರಲ್ಲಿ ಐಟಿ ದಾಳಿ ಆದಾಗ ಅವತ್ತೇ ಬಂಧನ ಆಗುತ್ತೆ ಅಂತಾ ಹೇಳಿದ್ದರು. 2018ರಲ್ಲಿ ಆರ್ಥಿಕ ಅಪರಾಧ ಪ್ರಕರಣ, 2019ರಲ್ಲಿ ಇಡಿ ಪ್ರಕರಣ ನ್ಯಾಯಾಲಯ ನನಗೆ ಜಾಮೀನು ನೀಡಿತು. ಆಗಲೂ ದೇಶದ ಉದ್ದಗಲಕ್ಕೂ, ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲ ಪಕ್ಷದ ಮುಖಂಡರು, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿ ಬೆಂಬಲ ನೀಡಿದರು. ನನಗೆ ಅನ್ಯಾಯ ಆಗಿದೆ ಎಂದು ಜನ ಅಭಿಮಾನದಿಂದ ಬಂದು ಪ್ರತಿಭಟನೆ ಮಾಡಿದರು” ಎಂದು ಹೇಳಿದರು.

“ಎಲ್ಲ ಧರ್ಮದ ಹಿರಿಯರು ನನಗೆ, ನನ್ನ ಕುಟುಂಬಕ್ಕೆ ಶಕ್ತಿ ನೀಡಿದ್ದಾರೆ. ನಾನು ಮರಳಿ ಬಂದಾಗ ಪಕ್ಷ, ಜಾತಿ ಎಲ್ಲ ಮರೆತು ಸ್ವಾಗತ ಕೊಟ್ಟರು. ಜೈಲಿನಿಂದ ಬಂದವನಿಗೆ ಈ ಮೆರವಣಿಗೆ ಬೇಕಾ ಅಂತಾ ಕೇಳಿದ್ದರು. ಅವರು ಒಮ್ಮೆ ಯೋಚಿಸಬೇಕು ಪರಪ್ಪನ ಅಗ್ರಹಾರ ಜೈಲಿನಿಂದ ಬಂದವರು ಹೇಗೆ ಬಂದರು? ನಾನು ಅವರಂತೆ ವಿಕ್ಟರಿ ತೋರಿಸಿ ಬರಲಿಲ್ಲ. ಕೈಮುಗಿದು ಬಂದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

ನಮ್ಮ ರಾಷ್ಟ್ರೀಯ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದ ಏಳು ತಿಂಗಳಲ್ಲಿ ಕೊರೋನಾ ಸಮಸ್ಯೆಯಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದಾಗ ನಾವು ಅವರಿಗೆ ನೆರವಾಗಿದ್ದೇವೆ. ಬಡವರು, ಕಾರ್ಮಿಕರು, ರೈತರು, ಜನ ಸಾಮಾನ್ಯರ ಜತೆ ಸರ್ಕಾರ ನಿಲ್ಲಲಿಲ್ಲ. ವಿರೋಧ ಪಕ್ಷವಾಗಿ ನಾವು ಅವರ ಪರ ನಿಂತೆವು. ಅವರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ.

ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ ಮಾಡಿದೆ. ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಬೆಳೆಯನ್ನು ಅವರ ಹೊಲಕ್ಕೆ ಹೋಗಿ ಖರೀದಿಸಿದೆವು. ಕೊರೋನಾ ವಿಚಾರದಲ್ಲಿ 300, 400 ಪಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಬಗ್ಗೆ ಹೋರಾಟ ಮಾಡಿದೆವು. ವಿಧಾನಸೌಧದಲ್ಲಿ ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ನಾವು ಜನರ ನೋವಿಗೆ ಸ್ಪಂದಿಸದಿದ್ದರೆ, ಅವರ ಭಾವನೆಗೆ ಬೆಲೆ ಕೊಡದಿದ್ದರೆ ನಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾದಂತೆ ಆಗುತ್ತದೆ.

ಇದನ್ನೂ ಓದಿ: ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ಇಂದು ದೇಶದಲ್ಲಿ ಅನೇಕ ಬೆಳವಣಿಗೆ ಆಗುತ್ತಿದೆ. ಹತ್ರಾಸ್ ನಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಯಿತು. ಆಕೆಗೆ ಸರ್ಕಾರ ನ್ಯಾಯ ಒದಗಿಸಿಕೊಡಲು ಮುಂದಾಗಿದೆಯೇ? ಚುನಾವಣೆ ಘೋಷಣೆಯಾದ ಮೇಲೆ, ನಾವು ಅನೇಕ ವಿಚಾರವಾಗಿ ಪ್ರತಿಭಟನೆಗೆ ಕರೆ ಕೊಟ್ಟ ಸಮಯದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಇಷ್ಟು ಆತುರ ಯಾಕೆ? ಈ ಎಫ್ಐಆರ್, ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಖ್ಯಮಂತ್ರಿಗಳೇ 35 ವರ್ಷಗಳಲ್ಲಿ ನನ್ನ ಮೇಲೆ ಯಾವುದಾದರೂ ತನಿಖೆ ಆಗಿದೆಯಾ? ಕ್ರಿಮಿನಲ್ ಕೇಸ್? ಎಫ್ಐಆರ್ ಆಗಿದೆಯಾ? ನಾನು ಮಂತ್ರಿಯಾದ ಎಲ್ಲ ಇಲಾಖೆಗಳ ಫೈಲ್ ಜಾಲಾಡಿದ್ದೀರಾ. ಏನಾದರೂ ತಪ್ಪು ಕಾಣಿಸಿದೆಯಾ?

ಬೇರೆಯವರ ಬಂಡವಾಳವೂ ನನ್ನ ಬಳಿ ಇದೆ. ಆರ್‌ಟಿಐ ಮೂಲಕ ಎಲ್ಲವನ್ನು ಸಂಗ್ರಹಿಸಿದ್ದೇನೆ. ಯಾವಾಗ ಅದನ್ನು ಬಹಿರಂಗ ಮಾಡಬೇಕೋ ಆಗ ಮಾಡುತ್ತೇನೆ. ಬರೀ ಡಿ.ಕೆ ಶಿವಕುಮಾರ್ ಮಾತ್ರನಾ ನಿಮ್ಮ ಕಣ್ಣಿಗೆ ಕಾಣುತ್ತಿರುವುದು? ನಾನು ನಂಬಿರುವ ಶಕ್ತಿ ದೇವರು ಅಜ್ಜಯ್ಯನವರು, ಈ ಜನ ನನ್ನ ಜತೆ ಇದ್ದಾರೆ.

“ನನ್ನ ಮನೆಯಲ್ಲಿ 1.87 ಲಕ್ಷ ಸಿಕ್ಕಿದೆ ಅಂತಾ ಪಂಚನಾಮ ಇದೆ. ಪಕ್ಕದ ಕಚೇರಿಯಲ್ಲಿ 2-3 ಲಕ್ಷ, ದೆಹಲಿಯಲ್ಲಿ 2-3 ಲಕ್ಷ ಸಿಕ್ಕಿದೆ. ಮಾಧ್ಯಮಗಳಲ್ಲಿ ಬಂದಂತೆ ಕೋಟಿಗಟ್ಟಲೆ ಹಣ ಸಿಕ್ಕಿಲ್ಲ. ನಮ್ಮ ಮನೆಯಲ್ಲಿ ಏನು ಸಿಕ್ಕಿದೆಯೋ ಅದನ್ನು ಹೇಳಿದ್ದೇನೆ. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ನಾನು ಉದ್ಯಮಿ, ಶಿಕ್ಷಣದಾರ, ರಾಜಕಾರಣಿ. ನಾನು ತಪ್ಪು ಮಾಡಿದ್ದರೆ, ನನ್ನನ್ನು ನೇಣಿಗೆ ಹಾಕಲಿ. ಅವರು ಯಾವಾಗ ವಿಚಾರಣೆಗೆ ಕರೆಯುತ್ತಾರೋ ಹೋಗುತ್ತೇನೆ” ಎಂದು ಹೇಳಿದರು.


ಇದನ್ನೂ ಓದಿ: ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...