Homeಕರ್ನಾಟಕಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ನನ್ನ ವಿರುದ್ಧ ಒತ್ತಡ ಹಾಕುತ್ತಿರುವವರಿಗೆ ಒಳ್ಳೆಯದಾಗಲಿ

- Advertisement -
- Advertisement -

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಮಾಧ್ಯಮ ಸ್ನೇಹಿತರು ಬೆಳಗ್ಗೆಯಿಂದ ಅನೇಕ ವಿಚಾರ ತಿಳಿಸಿದ್ದೀರಿ. ಕೆಲವು ಸತ್ಯವನ್ನೂ ಹೇಳಿದ್ದೀರಿ, ಸುಳ್ಳನ್ನು ಹೇಳಿದ್ದೀರಿ. ಅದು ಏನೆಂಬುದನ್ನು ನೀವೇ ಯೋಚಿಸಿ. ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. 2017ರಲ್ಲಿ ಐಟಿ ದಾಳಿ ಆದಾಗ ಅವತ್ತೇ ಬಂಧನ ಆಗುತ್ತೆ ಅಂತಾ ಹೇಳಿದ್ದರು. 2018ರಲ್ಲಿ ಆರ್ಥಿಕ ಅಪರಾಧ ಪ್ರಕರಣ, 2019ರಲ್ಲಿ ಇಡಿ ಪ್ರಕರಣ ನ್ಯಾಯಾಲಯ ನನಗೆ ಜಾಮೀನು ನೀಡಿತು. ಆಗಲೂ ದೇಶದ ಉದ್ದಗಲಕ್ಕೂ, ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲ ಪಕ್ಷದ ಮುಖಂಡರು, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿ ಬೆಂಬಲ ನೀಡಿದರು. ನನಗೆ ಅನ್ಯಾಯ ಆಗಿದೆ ಎಂದು ಜನ ಅಭಿಮಾನದಿಂದ ಬಂದು ಪ್ರತಿಭಟನೆ ಮಾಡಿದರು” ಎಂದು ಹೇಳಿದರು.

“ಎಲ್ಲ ಧರ್ಮದ ಹಿರಿಯರು ನನಗೆ, ನನ್ನ ಕುಟುಂಬಕ್ಕೆ ಶಕ್ತಿ ನೀಡಿದ್ದಾರೆ. ನಾನು ಮರಳಿ ಬಂದಾಗ ಪಕ್ಷ, ಜಾತಿ ಎಲ್ಲ ಮರೆತು ಸ್ವಾಗತ ಕೊಟ್ಟರು. ಜೈಲಿನಿಂದ ಬಂದವನಿಗೆ ಈ ಮೆರವಣಿಗೆ ಬೇಕಾ ಅಂತಾ ಕೇಳಿದ್ದರು. ಅವರು ಒಮ್ಮೆ ಯೋಚಿಸಬೇಕು ಪರಪ್ಪನ ಅಗ್ರಹಾರ ಜೈಲಿನಿಂದ ಬಂದವರು ಹೇಗೆ ಬಂದರು? ನಾನು ಅವರಂತೆ ವಿಕ್ಟರಿ ತೋರಿಸಿ ಬರಲಿಲ್ಲ. ಕೈಮುಗಿದು ಬಂದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

ನಮ್ಮ ರಾಷ್ಟ್ರೀಯ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದ ಏಳು ತಿಂಗಳಲ್ಲಿ ಕೊರೋನಾ ಸಮಸ್ಯೆಯಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದಾಗ ನಾವು ಅವರಿಗೆ ನೆರವಾಗಿದ್ದೇವೆ. ಬಡವರು, ಕಾರ್ಮಿಕರು, ರೈತರು, ಜನ ಸಾಮಾನ್ಯರ ಜತೆ ಸರ್ಕಾರ ನಿಲ್ಲಲಿಲ್ಲ. ವಿರೋಧ ಪಕ್ಷವಾಗಿ ನಾವು ಅವರ ಪರ ನಿಂತೆವು. ಅವರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ.

ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ ಮಾಡಿದೆ. ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಬೆಳೆಯನ್ನು ಅವರ ಹೊಲಕ್ಕೆ ಹೋಗಿ ಖರೀದಿಸಿದೆವು. ಕೊರೋನಾ ವಿಚಾರದಲ್ಲಿ 300, 400 ಪಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಬಗ್ಗೆ ಹೋರಾಟ ಮಾಡಿದೆವು. ವಿಧಾನಸೌಧದಲ್ಲಿ ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ನಾವು ಜನರ ನೋವಿಗೆ ಸ್ಪಂದಿಸದಿದ್ದರೆ, ಅವರ ಭಾವನೆಗೆ ಬೆಲೆ ಕೊಡದಿದ್ದರೆ ನಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾದಂತೆ ಆಗುತ್ತದೆ.

ಇದನ್ನೂ ಓದಿ: ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ಇಂದು ದೇಶದಲ್ಲಿ ಅನೇಕ ಬೆಳವಣಿಗೆ ಆಗುತ್ತಿದೆ. ಹತ್ರಾಸ್ ನಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಯಿತು. ಆಕೆಗೆ ಸರ್ಕಾರ ನ್ಯಾಯ ಒದಗಿಸಿಕೊಡಲು ಮುಂದಾಗಿದೆಯೇ? ಚುನಾವಣೆ ಘೋಷಣೆಯಾದ ಮೇಲೆ, ನಾವು ಅನೇಕ ವಿಚಾರವಾಗಿ ಪ್ರತಿಭಟನೆಗೆ ಕರೆ ಕೊಟ್ಟ ಸಮಯದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಇಷ್ಟು ಆತುರ ಯಾಕೆ? ಈ ಎಫ್ಐಆರ್, ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಖ್ಯಮಂತ್ರಿಗಳೇ 35 ವರ್ಷಗಳಲ್ಲಿ ನನ್ನ ಮೇಲೆ ಯಾವುದಾದರೂ ತನಿಖೆ ಆಗಿದೆಯಾ? ಕ್ರಿಮಿನಲ್ ಕೇಸ್? ಎಫ್ಐಆರ್ ಆಗಿದೆಯಾ? ನಾನು ಮಂತ್ರಿಯಾದ ಎಲ್ಲ ಇಲಾಖೆಗಳ ಫೈಲ್ ಜಾಲಾಡಿದ್ದೀರಾ. ಏನಾದರೂ ತಪ್ಪು ಕಾಣಿಸಿದೆಯಾ?

ಬೇರೆಯವರ ಬಂಡವಾಳವೂ ನನ್ನ ಬಳಿ ಇದೆ. ಆರ್‌ಟಿಐ ಮೂಲಕ ಎಲ್ಲವನ್ನು ಸಂಗ್ರಹಿಸಿದ್ದೇನೆ. ಯಾವಾಗ ಅದನ್ನು ಬಹಿರಂಗ ಮಾಡಬೇಕೋ ಆಗ ಮಾಡುತ್ತೇನೆ. ಬರೀ ಡಿ.ಕೆ ಶಿವಕುಮಾರ್ ಮಾತ್ರನಾ ನಿಮ್ಮ ಕಣ್ಣಿಗೆ ಕಾಣುತ್ತಿರುವುದು? ನಾನು ನಂಬಿರುವ ಶಕ್ತಿ ದೇವರು ಅಜ್ಜಯ್ಯನವರು, ಈ ಜನ ನನ್ನ ಜತೆ ಇದ್ದಾರೆ.

“ನನ್ನ ಮನೆಯಲ್ಲಿ 1.87 ಲಕ್ಷ ಸಿಕ್ಕಿದೆ ಅಂತಾ ಪಂಚನಾಮ ಇದೆ. ಪಕ್ಕದ ಕಚೇರಿಯಲ್ಲಿ 2-3 ಲಕ್ಷ, ದೆಹಲಿಯಲ್ಲಿ 2-3 ಲಕ್ಷ ಸಿಕ್ಕಿದೆ. ಮಾಧ್ಯಮಗಳಲ್ಲಿ ಬಂದಂತೆ ಕೋಟಿಗಟ್ಟಲೆ ಹಣ ಸಿಕ್ಕಿಲ್ಲ. ನಮ್ಮ ಮನೆಯಲ್ಲಿ ಏನು ಸಿಕ್ಕಿದೆಯೋ ಅದನ್ನು ಹೇಳಿದ್ದೇನೆ. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ನಾನು ಉದ್ಯಮಿ, ಶಿಕ್ಷಣದಾರ, ರಾಜಕಾರಣಿ. ನಾನು ತಪ್ಪು ಮಾಡಿದ್ದರೆ, ನನ್ನನ್ನು ನೇಣಿಗೆ ಹಾಕಲಿ. ಅವರು ಯಾವಾಗ ವಿಚಾರಣೆಗೆ ಕರೆಯುತ್ತಾರೋ ಹೋಗುತ್ತೇನೆ” ಎಂದು ಹೇಳಿದರು.


ಇದನ್ನೂ ಓದಿ: ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...