Homeಕರ್ನಾಟಕಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ನನ್ನ ವಿರುದ್ಧ ಒತ್ತಡ ಹಾಕುತ್ತಿರುವವರಿಗೆ ಒಳ್ಳೆಯದಾಗಲಿ

- Advertisement -
- Advertisement -

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಮಾಧ್ಯಮ ಸ್ನೇಹಿತರು ಬೆಳಗ್ಗೆಯಿಂದ ಅನೇಕ ವಿಚಾರ ತಿಳಿಸಿದ್ದೀರಿ. ಕೆಲವು ಸತ್ಯವನ್ನೂ ಹೇಳಿದ್ದೀರಿ, ಸುಳ್ಳನ್ನು ಹೇಳಿದ್ದೀರಿ. ಅದು ಏನೆಂಬುದನ್ನು ನೀವೇ ಯೋಚಿಸಿ. ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. 2017ರಲ್ಲಿ ಐಟಿ ದಾಳಿ ಆದಾಗ ಅವತ್ತೇ ಬಂಧನ ಆಗುತ್ತೆ ಅಂತಾ ಹೇಳಿದ್ದರು. 2018ರಲ್ಲಿ ಆರ್ಥಿಕ ಅಪರಾಧ ಪ್ರಕರಣ, 2019ರಲ್ಲಿ ಇಡಿ ಪ್ರಕರಣ ನ್ಯಾಯಾಲಯ ನನಗೆ ಜಾಮೀನು ನೀಡಿತು. ಆಗಲೂ ದೇಶದ ಉದ್ದಗಲಕ್ಕೂ, ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲ ಪಕ್ಷದ ಮುಖಂಡರು, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿ ಬೆಂಬಲ ನೀಡಿದರು. ನನಗೆ ಅನ್ಯಾಯ ಆಗಿದೆ ಎಂದು ಜನ ಅಭಿಮಾನದಿಂದ ಬಂದು ಪ್ರತಿಭಟನೆ ಮಾಡಿದರು” ಎಂದು ಹೇಳಿದರು.

“ಎಲ್ಲ ಧರ್ಮದ ಹಿರಿಯರು ನನಗೆ, ನನ್ನ ಕುಟುಂಬಕ್ಕೆ ಶಕ್ತಿ ನೀಡಿದ್ದಾರೆ. ನಾನು ಮರಳಿ ಬಂದಾಗ ಪಕ್ಷ, ಜಾತಿ ಎಲ್ಲ ಮರೆತು ಸ್ವಾಗತ ಕೊಟ್ಟರು. ಜೈಲಿನಿಂದ ಬಂದವನಿಗೆ ಈ ಮೆರವಣಿಗೆ ಬೇಕಾ ಅಂತಾ ಕೇಳಿದ್ದರು. ಅವರು ಒಮ್ಮೆ ಯೋಚಿಸಬೇಕು ಪರಪ್ಪನ ಅಗ್ರಹಾರ ಜೈಲಿನಿಂದ ಬಂದವರು ಹೇಗೆ ಬಂದರು? ನಾನು ಅವರಂತೆ ವಿಕ್ಟರಿ ತೋರಿಸಿ ಬರಲಿಲ್ಲ. ಕೈಮುಗಿದು ಬಂದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

ನಮ್ಮ ರಾಷ್ಟ್ರೀಯ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದ ಏಳು ತಿಂಗಳಲ್ಲಿ ಕೊರೋನಾ ಸಮಸ್ಯೆಯಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದಾಗ ನಾವು ಅವರಿಗೆ ನೆರವಾಗಿದ್ದೇವೆ. ಬಡವರು, ಕಾರ್ಮಿಕರು, ರೈತರು, ಜನ ಸಾಮಾನ್ಯರ ಜತೆ ಸರ್ಕಾರ ನಿಲ್ಲಲಿಲ್ಲ. ವಿರೋಧ ಪಕ್ಷವಾಗಿ ನಾವು ಅವರ ಪರ ನಿಂತೆವು. ಅವರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ.

ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ ಮಾಡಿದೆ. ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಬೆಳೆಯನ್ನು ಅವರ ಹೊಲಕ್ಕೆ ಹೋಗಿ ಖರೀದಿಸಿದೆವು. ಕೊರೋನಾ ವಿಚಾರದಲ್ಲಿ 300, 400 ಪಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಬಗ್ಗೆ ಹೋರಾಟ ಮಾಡಿದೆವು. ವಿಧಾನಸೌಧದಲ್ಲಿ ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ನಾವು ಜನರ ನೋವಿಗೆ ಸ್ಪಂದಿಸದಿದ್ದರೆ, ಅವರ ಭಾವನೆಗೆ ಬೆಲೆ ಕೊಡದಿದ್ದರೆ ನಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾದಂತೆ ಆಗುತ್ತದೆ.

ಇದನ್ನೂ ಓದಿ: ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ಇಂದು ದೇಶದಲ್ಲಿ ಅನೇಕ ಬೆಳವಣಿಗೆ ಆಗುತ್ತಿದೆ. ಹತ್ರಾಸ್ ನಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಯಿತು. ಆಕೆಗೆ ಸರ್ಕಾರ ನ್ಯಾಯ ಒದಗಿಸಿಕೊಡಲು ಮುಂದಾಗಿದೆಯೇ? ಚುನಾವಣೆ ಘೋಷಣೆಯಾದ ಮೇಲೆ, ನಾವು ಅನೇಕ ವಿಚಾರವಾಗಿ ಪ್ರತಿಭಟನೆಗೆ ಕರೆ ಕೊಟ್ಟ ಸಮಯದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಇಷ್ಟು ಆತುರ ಯಾಕೆ? ಈ ಎಫ್ಐಆರ್, ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಖ್ಯಮಂತ್ರಿಗಳೇ 35 ವರ್ಷಗಳಲ್ಲಿ ನನ್ನ ಮೇಲೆ ಯಾವುದಾದರೂ ತನಿಖೆ ಆಗಿದೆಯಾ? ಕ್ರಿಮಿನಲ್ ಕೇಸ್? ಎಫ್ಐಆರ್ ಆಗಿದೆಯಾ? ನಾನು ಮಂತ್ರಿಯಾದ ಎಲ್ಲ ಇಲಾಖೆಗಳ ಫೈಲ್ ಜಾಲಾಡಿದ್ದೀರಾ. ಏನಾದರೂ ತಪ್ಪು ಕಾಣಿಸಿದೆಯಾ?

ಬೇರೆಯವರ ಬಂಡವಾಳವೂ ನನ್ನ ಬಳಿ ಇದೆ. ಆರ್‌ಟಿಐ ಮೂಲಕ ಎಲ್ಲವನ್ನು ಸಂಗ್ರಹಿಸಿದ್ದೇನೆ. ಯಾವಾಗ ಅದನ್ನು ಬಹಿರಂಗ ಮಾಡಬೇಕೋ ಆಗ ಮಾಡುತ್ತೇನೆ. ಬರೀ ಡಿ.ಕೆ ಶಿವಕುಮಾರ್ ಮಾತ್ರನಾ ನಿಮ್ಮ ಕಣ್ಣಿಗೆ ಕಾಣುತ್ತಿರುವುದು? ನಾನು ನಂಬಿರುವ ಶಕ್ತಿ ದೇವರು ಅಜ್ಜಯ್ಯನವರು, ಈ ಜನ ನನ್ನ ಜತೆ ಇದ್ದಾರೆ.

“ನನ್ನ ಮನೆಯಲ್ಲಿ 1.87 ಲಕ್ಷ ಸಿಕ್ಕಿದೆ ಅಂತಾ ಪಂಚನಾಮ ಇದೆ. ಪಕ್ಕದ ಕಚೇರಿಯಲ್ಲಿ 2-3 ಲಕ್ಷ, ದೆಹಲಿಯಲ್ಲಿ 2-3 ಲಕ್ಷ ಸಿಕ್ಕಿದೆ. ಮಾಧ್ಯಮಗಳಲ್ಲಿ ಬಂದಂತೆ ಕೋಟಿಗಟ್ಟಲೆ ಹಣ ಸಿಕ್ಕಿಲ್ಲ. ನಮ್ಮ ಮನೆಯಲ್ಲಿ ಏನು ಸಿಕ್ಕಿದೆಯೋ ಅದನ್ನು ಹೇಳಿದ್ದೇನೆ. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ನಾನು ಉದ್ಯಮಿ, ಶಿಕ್ಷಣದಾರ, ರಾಜಕಾರಣಿ. ನಾನು ತಪ್ಪು ಮಾಡಿದ್ದರೆ, ನನ್ನನ್ನು ನೇಣಿಗೆ ಹಾಕಲಿ. ಅವರು ಯಾವಾಗ ವಿಚಾರಣೆಗೆ ಕರೆಯುತ್ತಾರೋ ಹೋಗುತ್ತೇನೆ” ಎಂದು ಹೇಳಿದರು.


ಇದನ್ನೂ ಓದಿ: ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...