Homeಕರ್ನಾಟಕಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ನನ್ನ ವಿರುದ್ಧ ಒತ್ತಡ ಹಾಕುತ್ತಿರುವವರಿಗೆ ಒಳ್ಳೆಯದಾಗಲಿ

- Advertisement -
- Advertisement -

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಮಾಧ್ಯಮ ಸ್ನೇಹಿತರು ಬೆಳಗ್ಗೆಯಿಂದ ಅನೇಕ ವಿಚಾರ ತಿಳಿಸಿದ್ದೀರಿ. ಕೆಲವು ಸತ್ಯವನ್ನೂ ಹೇಳಿದ್ದೀರಿ, ಸುಳ್ಳನ್ನು ಹೇಳಿದ್ದೀರಿ. ಅದು ಏನೆಂಬುದನ್ನು ನೀವೇ ಯೋಚಿಸಿ. ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. 2017ರಲ್ಲಿ ಐಟಿ ದಾಳಿ ಆದಾಗ ಅವತ್ತೇ ಬಂಧನ ಆಗುತ್ತೆ ಅಂತಾ ಹೇಳಿದ್ದರು. 2018ರಲ್ಲಿ ಆರ್ಥಿಕ ಅಪರಾಧ ಪ್ರಕರಣ, 2019ರಲ್ಲಿ ಇಡಿ ಪ್ರಕರಣ ನ್ಯಾಯಾಲಯ ನನಗೆ ಜಾಮೀನು ನೀಡಿತು. ಆಗಲೂ ದೇಶದ ಉದ್ದಗಲಕ್ಕೂ, ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲ ಪಕ್ಷದ ಮುಖಂಡರು, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿ ಬೆಂಬಲ ನೀಡಿದರು. ನನಗೆ ಅನ್ಯಾಯ ಆಗಿದೆ ಎಂದು ಜನ ಅಭಿಮಾನದಿಂದ ಬಂದು ಪ್ರತಿಭಟನೆ ಮಾಡಿದರು” ಎಂದು ಹೇಳಿದರು.

“ಎಲ್ಲ ಧರ್ಮದ ಹಿರಿಯರು ನನಗೆ, ನನ್ನ ಕುಟುಂಬಕ್ಕೆ ಶಕ್ತಿ ನೀಡಿದ್ದಾರೆ. ನಾನು ಮರಳಿ ಬಂದಾಗ ಪಕ್ಷ, ಜಾತಿ ಎಲ್ಲ ಮರೆತು ಸ್ವಾಗತ ಕೊಟ್ಟರು. ಜೈಲಿನಿಂದ ಬಂದವನಿಗೆ ಈ ಮೆರವಣಿಗೆ ಬೇಕಾ ಅಂತಾ ಕೇಳಿದ್ದರು. ಅವರು ಒಮ್ಮೆ ಯೋಚಿಸಬೇಕು ಪರಪ್ಪನ ಅಗ್ರಹಾರ ಜೈಲಿನಿಂದ ಬಂದವರು ಹೇಗೆ ಬಂದರು? ನಾನು ಅವರಂತೆ ವಿಕ್ಟರಿ ತೋರಿಸಿ ಬರಲಿಲ್ಲ. ಕೈಮುಗಿದು ಬಂದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

ನಮ್ಮ ರಾಷ್ಟ್ರೀಯ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದ ಏಳು ತಿಂಗಳಲ್ಲಿ ಕೊರೋನಾ ಸಮಸ್ಯೆಯಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದಾಗ ನಾವು ಅವರಿಗೆ ನೆರವಾಗಿದ್ದೇವೆ. ಬಡವರು, ಕಾರ್ಮಿಕರು, ರೈತರು, ಜನ ಸಾಮಾನ್ಯರ ಜತೆ ಸರ್ಕಾರ ನಿಲ್ಲಲಿಲ್ಲ. ವಿರೋಧ ಪಕ್ಷವಾಗಿ ನಾವು ಅವರ ಪರ ನಿಂತೆವು. ಅವರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ.

ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ ಮಾಡಿದೆ. ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಬೆಳೆಯನ್ನು ಅವರ ಹೊಲಕ್ಕೆ ಹೋಗಿ ಖರೀದಿಸಿದೆವು. ಕೊರೋನಾ ವಿಚಾರದಲ್ಲಿ 300, 400 ಪಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಬಗ್ಗೆ ಹೋರಾಟ ಮಾಡಿದೆವು. ವಿಧಾನಸೌಧದಲ್ಲಿ ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ನಾವು ಜನರ ನೋವಿಗೆ ಸ್ಪಂದಿಸದಿದ್ದರೆ, ಅವರ ಭಾವನೆಗೆ ಬೆಲೆ ಕೊಡದಿದ್ದರೆ ನಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾದಂತೆ ಆಗುತ್ತದೆ.

ಇದನ್ನೂ ಓದಿ: ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ಇಂದು ದೇಶದಲ್ಲಿ ಅನೇಕ ಬೆಳವಣಿಗೆ ಆಗುತ್ತಿದೆ. ಹತ್ರಾಸ್ ನಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಯಿತು. ಆಕೆಗೆ ಸರ್ಕಾರ ನ್ಯಾಯ ಒದಗಿಸಿಕೊಡಲು ಮುಂದಾಗಿದೆಯೇ? ಚುನಾವಣೆ ಘೋಷಣೆಯಾದ ಮೇಲೆ, ನಾವು ಅನೇಕ ವಿಚಾರವಾಗಿ ಪ್ರತಿಭಟನೆಗೆ ಕರೆ ಕೊಟ್ಟ ಸಮಯದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಇಷ್ಟು ಆತುರ ಯಾಕೆ? ಈ ಎಫ್ಐಆರ್, ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಖ್ಯಮಂತ್ರಿಗಳೇ 35 ವರ್ಷಗಳಲ್ಲಿ ನನ್ನ ಮೇಲೆ ಯಾವುದಾದರೂ ತನಿಖೆ ಆಗಿದೆಯಾ? ಕ್ರಿಮಿನಲ್ ಕೇಸ್? ಎಫ್ಐಆರ್ ಆಗಿದೆಯಾ? ನಾನು ಮಂತ್ರಿಯಾದ ಎಲ್ಲ ಇಲಾಖೆಗಳ ಫೈಲ್ ಜಾಲಾಡಿದ್ದೀರಾ. ಏನಾದರೂ ತಪ್ಪು ಕಾಣಿಸಿದೆಯಾ?

ಬೇರೆಯವರ ಬಂಡವಾಳವೂ ನನ್ನ ಬಳಿ ಇದೆ. ಆರ್‌ಟಿಐ ಮೂಲಕ ಎಲ್ಲವನ್ನು ಸಂಗ್ರಹಿಸಿದ್ದೇನೆ. ಯಾವಾಗ ಅದನ್ನು ಬಹಿರಂಗ ಮಾಡಬೇಕೋ ಆಗ ಮಾಡುತ್ತೇನೆ. ಬರೀ ಡಿ.ಕೆ ಶಿವಕುಮಾರ್ ಮಾತ್ರನಾ ನಿಮ್ಮ ಕಣ್ಣಿಗೆ ಕಾಣುತ್ತಿರುವುದು? ನಾನು ನಂಬಿರುವ ಶಕ್ತಿ ದೇವರು ಅಜ್ಜಯ್ಯನವರು, ಈ ಜನ ನನ್ನ ಜತೆ ಇದ್ದಾರೆ.

“ನನ್ನ ಮನೆಯಲ್ಲಿ 1.87 ಲಕ್ಷ ಸಿಕ್ಕಿದೆ ಅಂತಾ ಪಂಚನಾಮ ಇದೆ. ಪಕ್ಕದ ಕಚೇರಿಯಲ್ಲಿ 2-3 ಲಕ್ಷ, ದೆಹಲಿಯಲ್ಲಿ 2-3 ಲಕ್ಷ ಸಿಕ್ಕಿದೆ. ಮಾಧ್ಯಮಗಳಲ್ಲಿ ಬಂದಂತೆ ಕೋಟಿಗಟ್ಟಲೆ ಹಣ ಸಿಕ್ಕಿಲ್ಲ. ನಮ್ಮ ಮನೆಯಲ್ಲಿ ಏನು ಸಿಕ್ಕಿದೆಯೋ ಅದನ್ನು ಹೇಳಿದ್ದೇನೆ. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ನಾನು ಉದ್ಯಮಿ, ಶಿಕ್ಷಣದಾರ, ರಾಜಕಾರಣಿ. ನಾನು ತಪ್ಪು ಮಾಡಿದ್ದರೆ, ನನ್ನನ್ನು ನೇಣಿಗೆ ಹಾಕಲಿ. ಅವರು ಯಾವಾಗ ವಿಚಾರಣೆಗೆ ಕರೆಯುತ್ತಾರೋ ಹೋಗುತ್ತೇನೆ” ಎಂದು ಹೇಳಿದರು.


ಇದನ್ನೂ ಓದಿ: ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...