Homeಕರ್ನಾಟಕಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ನನ್ನ ವಿರುದ್ಧ ಒತ್ತಡ ಹಾಕುತ್ತಿರುವವರಿಗೆ ಒಳ್ಳೆಯದಾಗಲಿ

- Advertisement -
- Advertisement -

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಮಾಧ್ಯಮ ಸ್ನೇಹಿತರು ಬೆಳಗ್ಗೆಯಿಂದ ಅನೇಕ ವಿಚಾರ ತಿಳಿಸಿದ್ದೀರಿ. ಕೆಲವು ಸತ್ಯವನ್ನೂ ಹೇಳಿದ್ದೀರಿ, ಸುಳ್ಳನ್ನು ಹೇಳಿದ್ದೀರಿ. ಅದು ಏನೆಂಬುದನ್ನು ನೀವೇ ಯೋಚಿಸಿ. ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. 2017ರಲ್ಲಿ ಐಟಿ ದಾಳಿ ಆದಾಗ ಅವತ್ತೇ ಬಂಧನ ಆಗುತ್ತೆ ಅಂತಾ ಹೇಳಿದ್ದರು. 2018ರಲ್ಲಿ ಆರ್ಥಿಕ ಅಪರಾಧ ಪ್ರಕರಣ, 2019ರಲ್ಲಿ ಇಡಿ ಪ್ರಕರಣ ನ್ಯಾಯಾಲಯ ನನಗೆ ಜಾಮೀನು ನೀಡಿತು. ಆಗಲೂ ದೇಶದ ಉದ್ದಗಲಕ್ಕೂ, ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲ ಪಕ್ಷದ ಮುಖಂಡರು, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿ ಬೆಂಬಲ ನೀಡಿದರು. ನನಗೆ ಅನ್ಯಾಯ ಆಗಿದೆ ಎಂದು ಜನ ಅಭಿಮಾನದಿಂದ ಬಂದು ಪ್ರತಿಭಟನೆ ಮಾಡಿದರು” ಎಂದು ಹೇಳಿದರು.

“ಎಲ್ಲ ಧರ್ಮದ ಹಿರಿಯರು ನನಗೆ, ನನ್ನ ಕುಟುಂಬಕ್ಕೆ ಶಕ್ತಿ ನೀಡಿದ್ದಾರೆ. ನಾನು ಮರಳಿ ಬಂದಾಗ ಪಕ್ಷ, ಜಾತಿ ಎಲ್ಲ ಮರೆತು ಸ್ವಾಗತ ಕೊಟ್ಟರು. ಜೈಲಿನಿಂದ ಬಂದವನಿಗೆ ಈ ಮೆರವಣಿಗೆ ಬೇಕಾ ಅಂತಾ ಕೇಳಿದ್ದರು. ಅವರು ಒಮ್ಮೆ ಯೋಚಿಸಬೇಕು ಪರಪ್ಪನ ಅಗ್ರಹಾರ ಜೈಲಿನಿಂದ ಬಂದವರು ಹೇಗೆ ಬಂದರು? ನಾನು ಅವರಂತೆ ವಿಕ್ಟರಿ ತೋರಿಸಿ ಬರಲಿಲ್ಲ. ಕೈಮುಗಿದು ಬಂದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

ನಮ್ಮ ರಾಷ್ಟ್ರೀಯ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದ ಏಳು ತಿಂಗಳಲ್ಲಿ ಕೊರೋನಾ ಸಮಸ್ಯೆಯಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದಾಗ ನಾವು ಅವರಿಗೆ ನೆರವಾಗಿದ್ದೇವೆ. ಬಡವರು, ಕಾರ್ಮಿಕರು, ರೈತರು, ಜನ ಸಾಮಾನ್ಯರ ಜತೆ ಸರ್ಕಾರ ನಿಲ್ಲಲಿಲ್ಲ. ವಿರೋಧ ಪಕ್ಷವಾಗಿ ನಾವು ಅವರ ಪರ ನಿಂತೆವು. ಅವರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ.

ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ ಮಾಡಿದೆ. ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಬೆಳೆಯನ್ನು ಅವರ ಹೊಲಕ್ಕೆ ಹೋಗಿ ಖರೀದಿಸಿದೆವು. ಕೊರೋನಾ ವಿಚಾರದಲ್ಲಿ 300, 400 ಪಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಬಗ್ಗೆ ಹೋರಾಟ ಮಾಡಿದೆವು. ವಿಧಾನಸೌಧದಲ್ಲಿ ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ನಾವು ಜನರ ನೋವಿಗೆ ಸ್ಪಂದಿಸದಿದ್ದರೆ, ಅವರ ಭಾವನೆಗೆ ಬೆಲೆ ಕೊಡದಿದ್ದರೆ ನಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾದಂತೆ ಆಗುತ್ತದೆ.

ಇದನ್ನೂ ಓದಿ: ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ಇಂದು ದೇಶದಲ್ಲಿ ಅನೇಕ ಬೆಳವಣಿಗೆ ಆಗುತ್ತಿದೆ. ಹತ್ರಾಸ್ ನಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಯಿತು. ಆಕೆಗೆ ಸರ್ಕಾರ ನ್ಯಾಯ ಒದಗಿಸಿಕೊಡಲು ಮುಂದಾಗಿದೆಯೇ? ಚುನಾವಣೆ ಘೋಷಣೆಯಾದ ಮೇಲೆ, ನಾವು ಅನೇಕ ವಿಚಾರವಾಗಿ ಪ್ರತಿಭಟನೆಗೆ ಕರೆ ಕೊಟ್ಟ ಸಮಯದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಇಷ್ಟು ಆತುರ ಯಾಕೆ? ಈ ಎಫ್ಐಆರ್, ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಖ್ಯಮಂತ್ರಿಗಳೇ 35 ವರ್ಷಗಳಲ್ಲಿ ನನ್ನ ಮೇಲೆ ಯಾವುದಾದರೂ ತನಿಖೆ ಆಗಿದೆಯಾ? ಕ್ರಿಮಿನಲ್ ಕೇಸ್? ಎಫ್ಐಆರ್ ಆಗಿದೆಯಾ? ನಾನು ಮಂತ್ರಿಯಾದ ಎಲ್ಲ ಇಲಾಖೆಗಳ ಫೈಲ್ ಜಾಲಾಡಿದ್ದೀರಾ. ಏನಾದರೂ ತಪ್ಪು ಕಾಣಿಸಿದೆಯಾ?

ಬೇರೆಯವರ ಬಂಡವಾಳವೂ ನನ್ನ ಬಳಿ ಇದೆ. ಆರ್‌ಟಿಐ ಮೂಲಕ ಎಲ್ಲವನ್ನು ಸಂಗ್ರಹಿಸಿದ್ದೇನೆ. ಯಾವಾಗ ಅದನ್ನು ಬಹಿರಂಗ ಮಾಡಬೇಕೋ ಆಗ ಮಾಡುತ್ತೇನೆ. ಬರೀ ಡಿ.ಕೆ ಶಿವಕುಮಾರ್ ಮಾತ್ರನಾ ನಿಮ್ಮ ಕಣ್ಣಿಗೆ ಕಾಣುತ್ತಿರುವುದು? ನಾನು ನಂಬಿರುವ ಶಕ್ತಿ ದೇವರು ಅಜ್ಜಯ್ಯನವರು, ಈ ಜನ ನನ್ನ ಜತೆ ಇದ್ದಾರೆ.

“ನನ್ನ ಮನೆಯಲ್ಲಿ 1.87 ಲಕ್ಷ ಸಿಕ್ಕಿದೆ ಅಂತಾ ಪಂಚನಾಮ ಇದೆ. ಪಕ್ಕದ ಕಚೇರಿಯಲ್ಲಿ 2-3 ಲಕ್ಷ, ದೆಹಲಿಯಲ್ಲಿ 2-3 ಲಕ್ಷ ಸಿಕ್ಕಿದೆ. ಮಾಧ್ಯಮಗಳಲ್ಲಿ ಬಂದಂತೆ ಕೋಟಿಗಟ್ಟಲೆ ಹಣ ಸಿಕ್ಕಿಲ್ಲ. ನಮ್ಮ ಮನೆಯಲ್ಲಿ ಏನು ಸಿಕ್ಕಿದೆಯೋ ಅದನ್ನು ಹೇಳಿದ್ದೇನೆ. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ನಾನು ಉದ್ಯಮಿ, ಶಿಕ್ಷಣದಾರ, ರಾಜಕಾರಣಿ. ನಾನು ತಪ್ಪು ಮಾಡಿದ್ದರೆ, ನನ್ನನ್ನು ನೇಣಿಗೆ ಹಾಕಲಿ. ಅವರು ಯಾವಾಗ ವಿಚಾರಣೆಗೆ ಕರೆಯುತ್ತಾರೋ ಹೋಗುತ್ತೇನೆ” ಎಂದು ಹೇಳಿದರು.


ಇದನ್ನೂ ಓದಿ: ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...