Homeಕರ್ನಾಟಕಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ನನ್ನ ವಿರುದ್ಧ ಒತ್ತಡ ಹಾಕುತ್ತಿರುವವರಿಗೆ ಒಳ್ಳೆಯದಾಗಲಿ

- Advertisement -
- Advertisement -

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಮಾಧ್ಯಮ ಸ್ನೇಹಿತರು ಬೆಳಗ್ಗೆಯಿಂದ ಅನೇಕ ವಿಚಾರ ತಿಳಿಸಿದ್ದೀರಿ. ಕೆಲವು ಸತ್ಯವನ್ನೂ ಹೇಳಿದ್ದೀರಿ, ಸುಳ್ಳನ್ನು ಹೇಳಿದ್ದೀರಿ. ಅದು ಏನೆಂಬುದನ್ನು ನೀವೇ ಯೋಚಿಸಿ. ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. 2017ರಲ್ಲಿ ಐಟಿ ದಾಳಿ ಆದಾಗ ಅವತ್ತೇ ಬಂಧನ ಆಗುತ್ತೆ ಅಂತಾ ಹೇಳಿದ್ದರು. 2018ರಲ್ಲಿ ಆರ್ಥಿಕ ಅಪರಾಧ ಪ್ರಕರಣ, 2019ರಲ್ಲಿ ಇಡಿ ಪ್ರಕರಣ ನ್ಯಾಯಾಲಯ ನನಗೆ ಜಾಮೀನು ನೀಡಿತು. ಆಗಲೂ ದೇಶದ ಉದ್ದಗಲಕ್ಕೂ, ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲ ಪಕ್ಷದ ಮುಖಂಡರು, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿ ಬೆಂಬಲ ನೀಡಿದರು. ನನಗೆ ಅನ್ಯಾಯ ಆಗಿದೆ ಎಂದು ಜನ ಅಭಿಮಾನದಿಂದ ಬಂದು ಪ್ರತಿಭಟನೆ ಮಾಡಿದರು” ಎಂದು ಹೇಳಿದರು.

“ಎಲ್ಲ ಧರ್ಮದ ಹಿರಿಯರು ನನಗೆ, ನನ್ನ ಕುಟುಂಬಕ್ಕೆ ಶಕ್ತಿ ನೀಡಿದ್ದಾರೆ. ನಾನು ಮರಳಿ ಬಂದಾಗ ಪಕ್ಷ, ಜಾತಿ ಎಲ್ಲ ಮರೆತು ಸ್ವಾಗತ ಕೊಟ್ಟರು. ಜೈಲಿನಿಂದ ಬಂದವನಿಗೆ ಈ ಮೆರವಣಿಗೆ ಬೇಕಾ ಅಂತಾ ಕೇಳಿದ್ದರು. ಅವರು ಒಮ್ಮೆ ಯೋಚಿಸಬೇಕು ಪರಪ್ಪನ ಅಗ್ರಹಾರ ಜೈಲಿನಿಂದ ಬಂದವರು ಹೇಗೆ ಬಂದರು? ನಾನು ಅವರಂತೆ ವಿಕ್ಟರಿ ತೋರಿಸಿ ಬರಲಿಲ್ಲ. ಕೈಮುಗಿದು ಬಂದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

ನಮ್ಮ ರಾಷ್ಟ್ರೀಯ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದ ಏಳು ತಿಂಗಳಲ್ಲಿ ಕೊರೋನಾ ಸಮಸ್ಯೆಯಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದಾಗ ನಾವು ಅವರಿಗೆ ನೆರವಾಗಿದ್ದೇವೆ. ಬಡವರು, ಕಾರ್ಮಿಕರು, ರೈತರು, ಜನ ಸಾಮಾನ್ಯರ ಜತೆ ಸರ್ಕಾರ ನಿಲ್ಲಲಿಲ್ಲ. ವಿರೋಧ ಪಕ್ಷವಾಗಿ ನಾವು ಅವರ ಪರ ನಿಂತೆವು. ಅವರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ.

ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ ಮಾಡಿದೆ. ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಬೆಳೆಯನ್ನು ಅವರ ಹೊಲಕ್ಕೆ ಹೋಗಿ ಖರೀದಿಸಿದೆವು. ಕೊರೋನಾ ವಿಚಾರದಲ್ಲಿ 300, 400 ಪಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಬಗ್ಗೆ ಹೋರಾಟ ಮಾಡಿದೆವು. ವಿಧಾನಸೌಧದಲ್ಲಿ ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ನಾವು ಜನರ ನೋವಿಗೆ ಸ್ಪಂದಿಸದಿದ್ದರೆ, ಅವರ ಭಾವನೆಗೆ ಬೆಲೆ ಕೊಡದಿದ್ದರೆ ನಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾದಂತೆ ಆಗುತ್ತದೆ.

ಇದನ್ನೂ ಓದಿ: ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ಇಂದು ದೇಶದಲ್ಲಿ ಅನೇಕ ಬೆಳವಣಿಗೆ ಆಗುತ್ತಿದೆ. ಹತ್ರಾಸ್ ನಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಯಿತು. ಆಕೆಗೆ ಸರ್ಕಾರ ನ್ಯಾಯ ಒದಗಿಸಿಕೊಡಲು ಮುಂದಾಗಿದೆಯೇ? ಚುನಾವಣೆ ಘೋಷಣೆಯಾದ ಮೇಲೆ, ನಾವು ಅನೇಕ ವಿಚಾರವಾಗಿ ಪ್ರತಿಭಟನೆಗೆ ಕರೆ ಕೊಟ್ಟ ಸಮಯದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಇಷ್ಟು ಆತುರ ಯಾಕೆ? ಈ ಎಫ್ಐಆರ್, ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಖ್ಯಮಂತ್ರಿಗಳೇ 35 ವರ್ಷಗಳಲ್ಲಿ ನನ್ನ ಮೇಲೆ ಯಾವುದಾದರೂ ತನಿಖೆ ಆಗಿದೆಯಾ? ಕ್ರಿಮಿನಲ್ ಕೇಸ್? ಎಫ್ಐಆರ್ ಆಗಿದೆಯಾ? ನಾನು ಮಂತ್ರಿಯಾದ ಎಲ್ಲ ಇಲಾಖೆಗಳ ಫೈಲ್ ಜಾಲಾಡಿದ್ದೀರಾ. ಏನಾದರೂ ತಪ್ಪು ಕಾಣಿಸಿದೆಯಾ?

ಬೇರೆಯವರ ಬಂಡವಾಳವೂ ನನ್ನ ಬಳಿ ಇದೆ. ಆರ್‌ಟಿಐ ಮೂಲಕ ಎಲ್ಲವನ್ನು ಸಂಗ್ರಹಿಸಿದ್ದೇನೆ. ಯಾವಾಗ ಅದನ್ನು ಬಹಿರಂಗ ಮಾಡಬೇಕೋ ಆಗ ಮಾಡುತ್ತೇನೆ. ಬರೀ ಡಿ.ಕೆ ಶಿವಕುಮಾರ್ ಮಾತ್ರನಾ ನಿಮ್ಮ ಕಣ್ಣಿಗೆ ಕಾಣುತ್ತಿರುವುದು? ನಾನು ನಂಬಿರುವ ಶಕ್ತಿ ದೇವರು ಅಜ್ಜಯ್ಯನವರು, ಈ ಜನ ನನ್ನ ಜತೆ ಇದ್ದಾರೆ.

“ನನ್ನ ಮನೆಯಲ್ಲಿ 1.87 ಲಕ್ಷ ಸಿಕ್ಕಿದೆ ಅಂತಾ ಪಂಚನಾಮ ಇದೆ. ಪಕ್ಕದ ಕಚೇರಿಯಲ್ಲಿ 2-3 ಲಕ್ಷ, ದೆಹಲಿಯಲ್ಲಿ 2-3 ಲಕ್ಷ ಸಿಕ್ಕಿದೆ. ಮಾಧ್ಯಮಗಳಲ್ಲಿ ಬಂದಂತೆ ಕೋಟಿಗಟ್ಟಲೆ ಹಣ ಸಿಕ್ಕಿಲ್ಲ. ನಮ್ಮ ಮನೆಯಲ್ಲಿ ಏನು ಸಿಕ್ಕಿದೆಯೋ ಅದನ್ನು ಹೇಳಿದ್ದೇನೆ. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ನಾನು ಉದ್ಯಮಿ, ಶಿಕ್ಷಣದಾರ, ರಾಜಕಾರಣಿ. ನಾನು ತಪ್ಪು ಮಾಡಿದ್ದರೆ, ನನ್ನನ್ನು ನೇಣಿಗೆ ಹಾಕಲಿ. ಅವರು ಯಾವಾಗ ವಿಚಾರಣೆಗೆ ಕರೆಯುತ್ತಾರೋ ಹೋಗುತ್ತೇನೆ” ಎಂದು ಹೇಳಿದರು.


ಇದನ್ನೂ ಓದಿ: ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...