Homeಕರ್ನಾಟಕಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ನನ್ನ ವಿರುದ್ಧ ಒತ್ತಡ ಹಾಕುತ್ತಿರುವವರಿಗೆ ಒಳ್ಳೆಯದಾಗಲಿ

- Advertisement -
- Advertisement -

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಮಾಧ್ಯಮ ಸ್ನೇಹಿತರು ಬೆಳಗ್ಗೆಯಿಂದ ಅನೇಕ ವಿಚಾರ ತಿಳಿಸಿದ್ದೀರಿ. ಕೆಲವು ಸತ್ಯವನ್ನೂ ಹೇಳಿದ್ದೀರಿ, ಸುಳ್ಳನ್ನು ಹೇಳಿದ್ದೀರಿ. ಅದು ಏನೆಂಬುದನ್ನು ನೀವೇ ಯೋಚಿಸಿ. ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. 2017ರಲ್ಲಿ ಐಟಿ ದಾಳಿ ಆದಾಗ ಅವತ್ತೇ ಬಂಧನ ಆಗುತ್ತೆ ಅಂತಾ ಹೇಳಿದ್ದರು. 2018ರಲ್ಲಿ ಆರ್ಥಿಕ ಅಪರಾಧ ಪ್ರಕರಣ, 2019ರಲ್ಲಿ ಇಡಿ ಪ್ರಕರಣ ನ್ಯಾಯಾಲಯ ನನಗೆ ಜಾಮೀನು ನೀಡಿತು. ಆಗಲೂ ದೇಶದ ಉದ್ದಗಲಕ್ಕೂ, ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲ ಪಕ್ಷದ ಮುಖಂಡರು, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿ ಬೆಂಬಲ ನೀಡಿದರು. ನನಗೆ ಅನ್ಯಾಯ ಆಗಿದೆ ಎಂದು ಜನ ಅಭಿಮಾನದಿಂದ ಬಂದು ಪ್ರತಿಭಟನೆ ಮಾಡಿದರು” ಎಂದು ಹೇಳಿದರು.

“ಎಲ್ಲ ಧರ್ಮದ ಹಿರಿಯರು ನನಗೆ, ನನ್ನ ಕುಟುಂಬಕ್ಕೆ ಶಕ್ತಿ ನೀಡಿದ್ದಾರೆ. ನಾನು ಮರಳಿ ಬಂದಾಗ ಪಕ್ಷ, ಜಾತಿ ಎಲ್ಲ ಮರೆತು ಸ್ವಾಗತ ಕೊಟ್ಟರು. ಜೈಲಿನಿಂದ ಬಂದವನಿಗೆ ಈ ಮೆರವಣಿಗೆ ಬೇಕಾ ಅಂತಾ ಕೇಳಿದ್ದರು. ಅವರು ಒಮ್ಮೆ ಯೋಚಿಸಬೇಕು ಪರಪ್ಪನ ಅಗ್ರಹಾರ ಜೈಲಿನಿಂದ ಬಂದವರು ಹೇಗೆ ಬಂದರು? ನಾನು ಅವರಂತೆ ವಿಕ್ಟರಿ ತೋರಿಸಿ ಬರಲಿಲ್ಲ. ಕೈಮುಗಿದು ಬಂದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

ನಮ್ಮ ರಾಷ್ಟ್ರೀಯ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದ ಏಳು ತಿಂಗಳಲ್ಲಿ ಕೊರೋನಾ ಸಮಸ್ಯೆಯಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದಾಗ ನಾವು ಅವರಿಗೆ ನೆರವಾಗಿದ್ದೇವೆ. ಬಡವರು, ಕಾರ್ಮಿಕರು, ರೈತರು, ಜನ ಸಾಮಾನ್ಯರ ಜತೆ ಸರ್ಕಾರ ನಿಲ್ಲಲಿಲ್ಲ. ವಿರೋಧ ಪಕ್ಷವಾಗಿ ನಾವು ಅವರ ಪರ ನಿಂತೆವು. ಅವರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ.

ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ ಮಾಡಿದೆ. ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಬೆಳೆಯನ್ನು ಅವರ ಹೊಲಕ್ಕೆ ಹೋಗಿ ಖರೀದಿಸಿದೆವು. ಕೊರೋನಾ ವಿಚಾರದಲ್ಲಿ 300, 400 ಪಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಬಗ್ಗೆ ಹೋರಾಟ ಮಾಡಿದೆವು. ವಿಧಾನಸೌಧದಲ್ಲಿ ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ನಾವು ಜನರ ನೋವಿಗೆ ಸ್ಪಂದಿಸದಿದ್ದರೆ, ಅವರ ಭಾವನೆಗೆ ಬೆಲೆ ಕೊಡದಿದ್ದರೆ ನಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾದಂತೆ ಆಗುತ್ತದೆ.

ಇದನ್ನೂ ಓದಿ: ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ಇಂದು ದೇಶದಲ್ಲಿ ಅನೇಕ ಬೆಳವಣಿಗೆ ಆಗುತ್ತಿದೆ. ಹತ್ರಾಸ್ ನಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಯಿತು. ಆಕೆಗೆ ಸರ್ಕಾರ ನ್ಯಾಯ ಒದಗಿಸಿಕೊಡಲು ಮುಂದಾಗಿದೆಯೇ? ಚುನಾವಣೆ ಘೋಷಣೆಯಾದ ಮೇಲೆ, ನಾವು ಅನೇಕ ವಿಚಾರವಾಗಿ ಪ್ರತಿಭಟನೆಗೆ ಕರೆ ಕೊಟ್ಟ ಸಮಯದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಇಷ್ಟು ಆತುರ ಯಾಕೆ? ಈ ಎಫ್ಐಆರ್, ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಖ್ಯಮಂತ್ರಿಗಳೇ 35 ವರ್ಷಗಳಲ್ಲಿ ನನ್ನ ಮೇಲೆ ಯಾವುದಾದರೂ ತನಿಖೆ ಆಗಿದೆಯಾ? ಕ್ರಿಮಿನಲ್ ಕೇಸ್? ಎಫ್ಐಆರ್ ಆಗಿದೆಯಾ? ನಾನು ಮಂತ್ರಿಯಾದ ಎಲ್ಲ ಇಲಾಖೆಗಳ ಫೈಲ್ ಜಾಲಾಡಿದ್ದೀರಾ. ಏನಾದರೂ ತಪ್ಪು ಕಾಣಿಸಿದೆಯಾ?

ಬೇರೆಯವರ ಬಂಡವಾಳವೂ ನನ್ನ ಬಳಿ ಇದೆ. ಆರ್‌ಟಿಐ ಮೂಲಕ ಎಲ್ಲವನ್ನು ಸಂಗ್ರಹಿಸಿದ್ದೇನೆ. ಯಾವಾಗ ಅದನ್ನು ಬಹಿರಂಗ ಮಾಡಬೇಕೋ ಆಗ ಮಾಡುತ್ತೇನೆ. ಬರೀ ಡಿ.ಕೆ ಶಿವಕುಮಾರ್ ಮಾತ್ರನಾ ನಿಮ್ಮ ಕಣ್ಣಿಗೆ ಕಾಣುತ್ತಿರುವುದು? ನಾನು ನಂಬಿರುವ ಶಕ್ತಿ ದೇವರು ಅಜ್ಜಯ್ಯನವರು, ಈ ಜನ ನನ್ನ ಜತೆ ಇದ್ದಾರೆ.

“ನನ್ನ ಮನೆಯಲ್ಲಿ 1.87 ಲಕ್ಷ ಸಿಕ್ಕಿದೆ ಅಂತಾ ಪಂಚನಾಮ ಇದೆ. ಪಕ್ಕದ ಕಚೇರಿಯಲ್ಲಿ 2-3 ಲಕ್ಷ, ದೆಹಲಿಯಲ್ಲಿ 2-3 ಲಕ್ಷ ಸಿಕ್ಕಿದೆ. ಮಾಧ್ಯಮಗಳಲ್ಲಿ ಬಂದಂತೆ ಕೋಟಿಗಟ್ಟಲೆ ಹಣ ಸಿಕ್ಕಿಲ್ಲ. ನಮ್ಮ ಮನೆಯಲ್ಲಿ ಏನು ಸಿಕ್ಕಿದೆಯೋ ಅದನ್ನು ಹೇಳಿದ್ದೇನೆ. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ನಾನು ಉದ್ಯಮಿ, ಶಿಕ್ಷಣದಾರ, ರಾಜಕಾರಣಿ. ನಾನು ತಪ್ಪು ಮಾಡಿದ್ದರೆ, ನನ್ನನ್ನು ನೇಣಿಗೆ ಹಾಕಲಿ. ಅವರು ಯಾವಾಗ ವಿಚಾರಣೆಗೆ ಕರೆಯುತ್ತಾರೋ ಹೋಗುತ್ತೇನೆ” ಎಂದು ಹೇಳಿದರು.


ಇದನ್ನೂ ಓದಿ: ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...