Homeಮುಖಪುಟದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ಅಮೆರಿಕದ ಅತಿದೊಡ್ಡ ಪತ್ರಿಕೆ NYT ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಅವರ ಮನೆ ಬಾಗಿಲಿಗೆ ಬಂದಿಳಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ

- Advertisement -
- Advertisement -

ದೆಹಲಿ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳ ಮೇಲೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಆದರೆ ಈ ಆರೋಪಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ನಿರಾಕರಿಸಿದೆ. ದೆಹಲಿಯಲ್ಲಿರುವ ಮನೀಶ್ ಸಿಸೋಡಿಯಾ ಅವರ ಮನೆ ಅಲ್ಲದೆ, ಏಳು ರಾಜ್ಯಗಳ 20 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ದೆಹಲಿಯ ಮಾಜಿ ಅಬಕಾರಿ ಕಮಿಷನರ್ ಎ.ಗೋಪಿಕೃಷ್ಣ ಅವರ ದಮನ್ ಮತ್ತು ದಿಯುವಿನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ಎಎಪಿ ಸರ್ಕಾರವು ಪ್ರಾರಂಭಿಸಿದ ಹೊಸ ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಹೊಸ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿರುವ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಬಿಐ ದಾಳಿಯ ಬಗ್ಗೆ ಇಂದು ಬೆಳಿಗ್ಗೆ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದು, “ಸಿಬಿಐ ಇಲ್ಲಿ ನನ್ನ ನಿವಾಸದಲ್ಲಿದೆ. ನಾನು ತನಿಖಾ ಸಂಸ್ಥೆಗೆ ಸಹಕರಿಸುತ್ತೇನೆ, ನನ್ನ ವಿರುದ್ಧ ಅವರಿಗೆ ಏನೂ ಸಿಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ದೆಹಲಿ ಹೈಕೋರ್ಟ್ ತಾಕೀತು

“ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡಿದ ಅತ್ಯುತ್ತಮ ಕೆಲಸದಿಂದ ಒಕ್ಕೂಟ ಸರ್ಕಾರಕ್ಕೆ ತೊಂದರೆಯಾಗಿದೆ. ಅದಕ್ಕಾಗಿಯೇ ಎರಡೂ ಇಲಾಖೆಗಳ ಮಂತ್ರಿಗಳನ್ನು ಗುರಿಯಾಗಿಸಲಾಗಿದೆ” ಎಂದು ಸಿಸೋಡಿಯಾ ಹೇಳಿದ್ದಾರೆ. ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮೇ ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ದೆಹಲಿಯಲ್ಲಿ ನಡೆದ ಶಿಕ್ಷಣ ಕ್ರಾಂತಿಯ ಬಗ್ಗೆ ಅಮೆರಿಕದ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌‌ ಮುಖಪುಟದ ಸುದ್ದಿಯನ್ನು ಮಾಡಿದ್ದು ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ಚಿತ್ರವನ್ನು ಅದರಲ್ಲಿ ಪ್ರಕಟಿಸಿದೆ. ದೆಹಲಿ ಮುಖ್ಯಮಂತ್ರಿ ಅದಕ್ಕೆ ಶುಭಕೋರಿದ್ದು, ದೆಹಲಿ ಭಾರತವೇ ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದ್ದಾರೆ. ಅದೇ ದಿನ ಸಿಸೊಡಿಯಾ ಮನೆಯ ಮೇಲೆ ಸಿಬಿಐ ದಾಳಿ ಮಾಡಿದೆ.

ಇದನ್ನೂ ಓದಿ: ದೆಹಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

ಸಿಸೋಡಿಯಾ ಅವರನ್ನು ತನಿಖಾ ಸಂಸ್ಥೆಗಳು ಗುರಿಯಾಗಿಸುತ್ತವೆ ಎಂದು ಭವಿಷ್ಯ ನುಡಿದಿದ್ದ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, “ಸಿಬಿಐಗೆ ಸ್ವಾಗತ. ಸಂಪೂರ್ಣವಾಗಿ ಸಹಕರಿಸುತ್ತೇನೆ. ಈ ಹಿಂದೆಯೂ ಹಲವು ಪರೀಕ್ಷೆಗಳು ಹಾಗೂ ದಾಳಿಗಳು ನಡೆದಿವೆ. ಏನೂ ಹೊರಬರಲಿಲ್ಲ. ಇನ್ನೂ ಏನೂ ಹೊರಬರುವುದಿಲ್ಲ” ಎಂದು ಹೇಳಿದ್ದಾರೆ.

ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ತನ್ನ ರಾಜಕೀಯ ಯೋಜನೆಯ ಭಾಗವಾಗಿ ಬಿಜೆಪಿ ತನ್ನ ಸಚಿವರನ್ನು ಪಟ್ಟುಬಿಡದೆ ಗುರಿಯಾಗಿಸಿಕೊಂಡಿದೆ ಎಂದು ಎಎಪಿ ಆರೋಪಿಸಿದೆ. “ಅಮೆರಿಕದ ಅತಿದೊಡ್ಡ ಪತ್ರಿಕೆಯಾದ ನ್ಯೂಯಾರ್ಕ್‌‌ ಟೈಮ್ಸ್‌ ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ, ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಸಿಸೋಡಿಯಾ ಅವರ ಮನೆ ಬಾಗಿಲಿಗೆ ಬಂದಿಳಿದಿದೆ” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ಜುಲೈನಲ್ಲಿ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ನಿಯಮಗಳ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಸಂಪೂರ್ಣ ಕಾರ್ಯವಿಧಾನದ ಲೋಪ ಎಂದು ಆರೋಪಿಸಿ ವರದಿಯನ್ನು ಸಲ್ಲಿಸಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಎಎಪಿ ಸರ್ಕಾರದ ಅಬಕಾರಿ ನೀತಿಯನ್ನು ಮನೀಷ್ ಸಿಸೋಡಿಯಾ ಅವರಂತಹ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳಿಗೆ ಹಾಗೂ ಖಾಸಗಿ ಮದ್ಯದ ಉದ್ಯಮಿಗಳಿಗೆ ಆರ್ಥಿಕ ಲಾಭದ ಏಕೈಕ ಗುರಿಯೊಂದಿಗೆ ಜಾರಿಗೊಳಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಳೆದ ತಿಂಗಳು ಆರೋಪಿಸಿದ್ದರು.

“ಅಬಕಾರಿ ಇಲಾಖೆಯ ಉಸ್ತುವಾರಿ ಸಚಿವ ಮನೀಶ್ ಸಿಸೋಡಿಯಾ ಅವರು ಕಾನೂನುಬದ್ಧ ನಿಬಂಧನೆಗಳು ಮತ್ತು ಅಧಿಸೂಚಿತ ಅಬಕಾರಿ ನೀತಿಯನ್ನು ಉಲ್ಲಂಘಿಸುವ ಪ್ರಮುಖ ನಿರ್ಧಾರಗಳು ಹಾಗೂ ಕ್ರಮಗಳನ್ನು ತೆಗೆದುಕೊಂಡು ಕಾರ್ಯಗತಗೊಳಿಸಿದ್ದಾ. ಇದು ಭಾರಿ ಆರ್ಥಿಕ ಪರಿಣಾಮಗಳನ್ನು ಹೊಂದಿದೆ” ಎಂದು ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

ಖಾಸಗಿ ಉದ್ಯಮಿಗಳಿಗೆ ಮದ್ಯ ಮಾರಾಟದ ಪರವಾನಗಿಗಳನ್ನು ಹಸ್ತಾಂತರಿಸಿ, ಸರ್ಕಾರಿ ಮಳಿಗೆಗಳನ್ನು ಮುಚ್ಚುವ ನೀತಿಯನ್ನು ಜುಲೈ 30 ರಂದು ಸಿಸೋಡಿಯಾ ಅವರು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...