Homeಮುಖಪುಟದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ಅಮೆರಿಕದ ಅತಿದೊಡ್ಡ ಪತ್ರಿಕೆ NYT ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಅವರ ಮನೆ ಬಾಗಿಲಿಗೆ ಬಂದಿಳಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ

- Advertisement -
- Advertisement -

ದೆಹಲಿ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳ ಮೇಲೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಆದರೆ ಈ ಆರೋಪಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ನಿರಾಕರಿಸಿದೆ. ದೆಹಲಿಯಲ್ಲಿರುವ ಮನೀಶ್ ಸಿಸೋಡಿಯಾ ಅವರ ಮನೆ ಅಲ್ಲದೆ, ಏಳು ರಾಜ್ಯಗಳ 20 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ದೆಹಲಿಯ ಮಾಜಿ ಅಬಕಾರಿ ಕಮಿಷನರ್ ಎ.ಗೋಪಿಕೃಷ್ಣ ಅವರ ದಮನ್ ಮತ್ತು ದಿಯುವಿನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ಎಎಪಿ ಸರ್ಕಾರವು ಪ್ರಾರಂಭಿಸಿದ ಹೊಸ ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಹೊಸ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿರುವ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಬಿಐ ದಾಳಿಯ ಬಗ್ಗೆ ಇಂದು ಬೆಳಿಗ್ಗೆ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದು, “ಸಿಬಿಐ ಇಲ್ಲಿ ನನ್ನ ನಿವಾಸದಲ್ಲಿದೆ. ನಾನು ತನಿಖಾ ಸಂಸ್ಥೆಗೆ ಸಹಕರಿಸುತ್ತೇನೆ, ನನ್ನ ವಿರುದ್ಧ ಅವರಿಗೆ ಏನೂ ಸಿಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ದೆಹಲಿ ಹೈಕೋರ್ಟ್ ತಾಕೀತು

“ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡಿದ ಅತ್ಯುತ್ತಮ ಕೆಲಸದಿಂದ ಒಕ್ಕೂಟ ಸರ್ಕಾರಕ್ಕೆ ತೊಂದರೆಯಾಗಿದೆ. ಅದಕ್ಕಾಗಿಯೇ ಎರಡೂ ಇಲಾಖೆಗಳ ಮಂತ್ರಿಗಳನ್ನು ಗುರಿಯಾಗಿಸಲಾಗಿದೆ” ಎಂದು ಸಿಸೋಡಿಯಾ ಹೇಳಿದ್ದಾರೆ. ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮೇ ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ದೆಹಲಿಯಲ್ಲಿ ನಡೆದ ಶಿಕ್ಷಣ ಕ್ರಾಂತಿಯ ಬಗ್ಗೆ ಅಮೆರಿಕದ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌‌ ಮುಖಪುಟದ ಸುದ್ದಿಯನ್ನು ಮಾಡಿದ್ದು ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ಚಿತ್ರವನ್ನು ಅದರಲ್ಲಿ ಪ್ರಕಟಿಸಿದೆ. ದೆಹಲಿ ಮುಖ್ಯಮಂತ್ರಿ ಅದಕ್ಕೆ ಶುಭಕೋರಿದ್ದು, ದೆಹಲಿ ಭಾರತವೇ ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದ್ದಾರೆ. ಅದೇ ದಿನ ಸಿಸೊಡಿಯಾ ಮನೆಯ ಮೇಲೆ ಸಿಬಿಐ ದಾಳಿ ಮಾಡಿದೆ.

ಇದನ್ನೂ ಓದಿ: ದೆಹಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

ಸಿಸೋಡಿಯಾ ಅವರನ್ನು ತನಿಖಾ ಸಂಸ್ಥೆಗಳು ಗುರಿಯಾಗಿಸುತ್ತವೆ ಎಂದು ಭವಿಷ್ಯ ನುಡಿದಿದ್ದ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, “ಸಿಬಿಐಗೆ ಸ್ವಾಗತ. ಸಂಪೂರ್ಣವಾಗಿ ಸಹಕರಿಸುತ್ತೇನೆ. ಈ ಹಿಂದೆಯೂ ಹಲವು ಪರೀಕ್ಷೆಗಳು ಹಾಗೂ ದಾಳಿಗಳು ನಡೆದಿವೆ. ಏನೂ ಹೊರಬರಲಿಲ್ಲ. ಇನ್ನೂ ಏನೂ ಹೊರಬರುವುದಿಲ್ಲ” ಎಂದು ಹೇಳಿದ್ದಾರೆ.

ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ತನ್ನ ರಾಜಕೀಯ ಯೋಜನೆಯ ಭಾಗವಾಗಿ ಬಿಜೆಪಿ ತನ್ನ ಸಚಿವರನ್ನು ಪಟ್ಟುಬಿಡದೆ ಗುರಿಯಾಗಿಸಿಕೊಂಡಿದೆ ಎಂದು ಎಎಪಿ ಆರೋಪಿಸಿದೆ. “ಅಮೆರಿಕದ ಅತಿದೊಡ್ಡ ಪತ್ರಿಕೆಯಾದ ನ್ಯೂಯಾರ್ಕ್‌‌ ಟೈಮ್ಸ್‌ ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ, ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಸಿಸೋಡಿಯಾ ಅವರ ಮನೆ ಬಾಗಿಲಿಗೆ ಬಂದಿಳಿದಿದೆ” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ಜುಲೈನಲ್ಲಿ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ನಿಯಮಗಳ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಸಂಪೂರ್ಣ ಕಾರ್ಯವಿಧಾನದ ಲೋಪ ಎಂದು ಆರೋಪಿಸಿ ವರದಿಯನ್ನು ಸಲ್ಲಿಸಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಎಎಪಿ ಸರ್ಕಾರದ ಅಬಕಾರಿ ನೀತಿಯನ್ನು ಮನೀಷ್ ಸಿಸೋಡಿಯಾ ಅವರಂತಹ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳಿಗೆ ಹಾಗೂ ಖಾಸಗಿ ಮದ್ಯದ ಉದ್ಯಮಿಗಳಿಗೆ ಆರ್ಥಿಕ ಲಾಭದ ಏಕೈಕ ಗುರಿಯೊಂದಿಗೆ ಜಾರಿಗೊಳಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಳೆದ ತಿಂಗಳು ಆರೋಪಿಸಿದ್ದರು.

“ಅಬಕಾರಿ ಇಲಾಖೆಯ ಉಸ್ತುವಾರಿ ಸಚಿವ ಮನೀಶ್ ಸಿಸೋಡಿಯಾ ಅವರು ಕಾನೂನುಬದ್ಧ ನಿಬಂಧನೆಗಳು ಮತ್ತು ಅಧಿಸೂಚಿತ ಅಬಕಾರಿ ನೀತಿಯನ್ನು ಉಲ್ಲಂಘಿಸುವ ಪ್ರಮುಖ ನಿರ್ಧಾರಗಳು ಹಾಗೂ ಕ್ರಮಗಳನ್ನು ತೆಗೆದುಕೊಂಡು ಕಾರ್ಯಗತಗೊಳಿಸಿದ್ದಾ. ಇದು ಭಾರಿ ಆರ್ಥಿಕ ಪರಿಣಾಮಗಳನ್ನು ಹೊಂದಿದೆ” ಎಂದು ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

ಖಾಸಗಿ ಉದ್ಯಮಿಗಳಿಗೆ ಮದ್ಯ ಮಾರಾಟದ ಪರವಾನಗಿಗಳನ್ನು ಹಸ್ತಾಂತರಿಸಿ, ಸರ್ಕಾರಿ ಮಳಿಗೆಗಳನ್ನು ಮುಚ್ಚುವ ನೀತಿಯನ್ನು ಜುಲೈ 30 ರಂದು ಸಿಸೋಡಿಯಾ ಅವರು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...