Homeಮುಖಪುಟದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ಅಮೆರಿಕದ ಅತಿದೊಡ್ಡ ಪತ್ರಿಕೆ NYT ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಅವರ ಮನೆ ಬಾಗಿಲಿಗೆ ಬಂದಿಳಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ

- Advertisement -
- Advertisement -

ದೆಹಲಿ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳ ಮೇಲೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಆದರೆ ಈ ಆರೋಪಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ನಿರಾಕರಿಸಿದೆ. ದೆಹಲಿಯಲ್ಲಿರುವ ಮನೀಶ್ ಸಿಸೋಡಿಯಾ ಅವರ ಮನೆ ಅಲ್ಲದೆ, ಏಳು ರಾಜ್ಯಗಳ 20 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ದೆಹಲಿಯ ಮಾಜಿ ಅಬಕಾರಿ ಕಮಿಷನರ್ ಎ.ಗೋಪಿಕೃಷ್ಣ ಅವರ ದಮನ್ ಮತ್ತು ದಿಯುವಿನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ಎಎಪಿ ಸರ್ಕಾರವು ಪ್ರಾರಂಭಿಸಿದ ಹೊಸ ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಹೊಸ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿರುವ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಬಿಐ ದಾಳಿಯ ಬಗ್ಗೆ ಇಂದು ಬೆಳಿಗ್ಗೆ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದು, “ಸಿಬಿಐ ಇಲ್ಲಿ ನನ್ನ ನಿವಾಸದಲ್ಲಿದೆ. ನಾನು ತನಿಖಾ ಸಂಸ್ಥೆಗೆ ಸಹಕರಿಸುತ್ತೇನೆ, ನನ್ನ ವಿರುದ್ಧ ಅವರಿಗೆ ಏನೂ ಸಿಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ದೆಹಲಿ ಹೈಕೋರ್ಟ್ ತಾಕೀತು

“ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡಿದ ಅತ್ಯುತ್ತಮ ಕೆಲಸದಿಂದ ಒಕ್ಕೂಟ ಸರ್ಕಾರಕ್ಕೆ ತೊಂದರೆಯಾಗಿದೆ. ಅದಕ್ಕಾಗಿಯೇ ಎರಡೂ ಇಲಾಖೆಗಳ ಮಂತ್ರಿಗಳನ್ನು ಗುರಿಯಾಗಿಸಲಾಗಿದೆ” ಎಂದು ಸಿಸೋಡಿಯಾ ಹೇಳಿದ್ದಾರೆ. ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮೇ ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ದೆಹಲಿಯಲ್ಲಿ ನಡೆದ ಶಿಕ್ಷಣ ಕ್ರಾಂತಿಯ ಬಗ್ಗೆ ಅಮೆರಿಕದ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌‌ ಮುಖಪುಟದ ಸುದ್ದಿಯನ್ನು ಮಾಡಿದ್ದು ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ಚಿತ್ರವನ್ನು ಅದರಲ್ಲಿ ಪ್ರಕಟಿಸಿದೆ. ದೆಹಲಿ ಮುಖ್ಯಮಂತ್ರಿ ಅದಕ್ಕೆ ಶುಭಕೋರಿದ್ದು, ದೆಹಲಿ ಭಾರತವೇ ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದ್ದಾರೆ. ಅದೇ ದಿನ ಸಿಸೊಡಿಯಾ ಮನೆಯ ಮೇಲೆ ಸಿಬಿಐ ದಾಳಿ ಮಾಡಿದೆ.

ಇದನ್ನೂ ಓದಿ: ದೆಹಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

ಸಿಸೋಡಿಯಾ ಅವರನ್ನು ತನಿಖಾ ಸಂಸ್ಥೆಗಳು ಗುರಿಯಾಗಿಸುತ್ತವೆ ಎಂದು ಭವಿಷ್ಯ ನುಡಿದಿದ್ದ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, “ಸಿಬಿಐಗೆ ಸ್ವಾಗತ. ಸಂಪೂರ್ಣವಾಗಿ ಸಹಕರಿಸುತ್ತೇನೆ. ಈ ಹಿಂದೆಯೂ ಹಲವು ಪರೀಕ್ಷೆಗಳು ಹಾಗೂ ದಾಳಿಗಳು ನಡೆದಿವೆ. ಏನೂ ಹೊರಬರಲಿಲ್ಲ. ಇನ್ನೂ ಏನೂ ಹೊರಬರುವುದಿಲ್ಲ” ಎಂದು ಹೇಳಿದ್ದಾರೆ.

ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ತನ್ನ ರಾಜಕೀಯ ಯೋಜನೆಯ ಭಾಗವಾಗಿ ಬಿಜೆಪಿ ತನ್ನ ಸಚಿವರನ್ನು ಪಟ್ಟುಬಿಡದೆ ಗುರಿಯಾಗಿಸಿಕೊಂಡಿದೆ ಎಂದು ಎಎಪಿ ಆರೋಪಿಸಿದೆ. “ಅಮೆರಿಕದ ಅತಿದೊಡ್ಡ ಪತ್ರಿಕೆಯಾದ ನ್ಯೂಯಾರ್ಕ್‌‌ ಟೈಮ್ಸ್‌ ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ, ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಸಿಸೋಡಿಯಾ ಅವರ ಮನೆ ಬಾಗಿಲಿಗೆ ಬಂದಿಳಿದಿದೆ” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ಜುಲೈನಲ್ಲಿ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ನಿಯಮಗಳ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಸಂಪೂರ್ಣ ಕಾರ್ಯವಿಧಾನದ ಲೋಪ ಎಂದು ಆರೋಪಿಸಿ ವರದಿಯನ್ನು ಸಲ್ಲಿಸಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಎಎಪಿ ಸರ್ಕಾರದ ಅಬಕಾರಿ ನೀತಿಯನ್ನು ಮನೀಷ್ ಸಿಸೋಡಿಯಾ ಅವರಂತಹ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳಿಗೆ ಹಾಗೂ ಖಾಸಗಿ ಮದ್ಯದ ಉದ್ಯಮಿಗಳಿಗೆ ಆರ್ಥಿಕ ಲಾಭದ ಏಕೈಕ ಗುರಿಯೊಂದಿಗೆ ಜಾರಿಗೊಳಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಳೆದ ತಿಂಗಳು ಆರೋಪಿಸಿದ್ದರು.

“ಅಬಕಾರಿ ಇಲಾಖೆಯ ಉಸ್ತುವಾರಿ ಸಚಿವ ಮನೀಶ್ ಸಿಸೋಡಿಯಾ ಅವರು ಕಾನೂನುಬದ್ಧ ನಿಬಂಧನೆಗಳು ಮತ್ತು ಅಧಿಸೂಚಿತ ಅಬಕಾರಿ ನೀತಿಯನ್ನು ಉಲ್ಲಂಘಿಸುವ ಪ್ರಮುಖ ನಿರ್ಧಾರಗಳು ಹಾಗೂ ಕ್ರಮಗಳನ್ನು ತೆಗೆದುಕೊಂಡು ಕಾರ್ಯಗತಗೊಳಿಸಿದ್ದಾ. ಇದು ಭಾರಿ ಆರ್ಥಿಕ ಪರಿಣಾಮಗಳನ್ನು ಹೊಂದಿದೆ” ಎಂದು ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

ಖಾಸಗಿ ಉದ್ಯಮಿಗಳಿಗೆ ಮದ್ಯ ಮಾರಾಟದ ಪರವಾನಗಿಗಳನ್ನು ಹಸ್ತಾಂತರಿಸಿ, ಸರ್ಕಾರಿ ಮಳಿಗೆಗಳನ್ನು ಮುಚ್ಚುವ ನೀತಿಯನ್ನು ಜುಲೈ 30 ರಂದು ಸಿಸೋಡಿಯಾ ಅವರು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...