Homeಮುಖಪುಟಅಕ್ರಮ ಕಲ್ಲಿದ್ದಲು ಸಾಗಾಣಿಕೆ: ಮಮತಾ ಸಂಬಂಧಿ ಅಭಿಷೇಕ್‌ರನ್ನು ವಿಚಾರಣೆಗೆ ಕರೆದ ಸಿಬಿಐ

ಅಕ್ರಮ ಕಲ್ಲಿದ್ದಲು ಸಾಗಾಣಿಕೆ: ಮಮತಾ ಸಂಬಂಧಿ ಅಭಿಷೇಕ್‌ರನ್ನು ವಿಚಾರಣೆಗೆ ಕರೆದ ಸಿಬಿಐ

- Advertisement -
- Advertisement -

ಕಲ್ಲಿದ್ದಲು ಕಳ್ಳಸಾಗಣೆ ಆರೋಪದ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿಯನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ತನಿಖೆಗೆ) ಹಾಜರಾಗಲು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಪ್ರಕರಣದಲ್ಲಿ ಅವರಿಗೆ ಸಮನ್ಸ್ ಜಾರಿಗೊಳಿಸಲು ಸಿಬಿಐ ತಂಡ ಇಂದು ಕೋಲ್ಕತ್ತಾದ ಅಭಿಷೇಕ್ ಬ್ಯಾನರ್ಜಿ ಅವರ ಮನೆಗೆ ಹೋಗಿತ್ತು ಎನ್ನಲಾಗಿದೆ.

ಕಲ್ಲಿದ್ದಲು ಮಾಫಿಯಾವು ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುಖಂಡರಿಗೆ ನಿಯಮಿತವಾಗಿ ಕಿಕ್‌ಬ್ಯಾಕ್ ನೀಡಿದೆ ಎಂಬುದು ಆರೋಪ. ಪ್ರಕರಣದ ಪ್ರಮುಖ ಆರೋಪಿ ಎನಿಸಿರುವ ಮತ್ತು ಪ್ರಸ್ತುತ ಪರಾರಿಯಾಗಿರುವ ಪಕ್ಷದ ಯುವ ಮುಖಂಡ ವಿನಯ್ ಮಿಶ್ರಾ ಮೂಲಕ ಹಣವನ್ನು ಚಾನೆಲ್ ಮಾಡಲಾಗಿದೆ. ಏಜೆನ್ಸಿ ಆತನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನ ಕುನುಸ್ಟೋರಿಯಾ ಮತ್ತು ಕಜೋರಿಯಾ ಕಲ್ಲಿದ್ದಲು ಕ್ಷೇತ್ರಗಳಿಂದ ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಕಳ್ಳತನವಾಗಿದೆ ಎಂದು ತನಿಖೆ ನಡೆಸಲು ಕೇಂದ್ರ ಸಂಸ್ಥೆ ಕಳೆದ ನವೆಂಬರ್‌ನಲ್ಲಿ ಈ ಪ್ರಕರಣವನ್ನು ದಾಖಲಿಸಿತ್ತು.

3 ದಿನದ ಹಿಂದೆ, ಅಭಿಷೇಕ್ ಬ್ಯಾನರ್ಜಿಯವರು ಅಮಿತ್ ಶಾ ವಿರುದ್ಧ ಹೂಡಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಅಮಿತ್ ಶಾ ಅಥವಾ ಅವರ ವಕೀಲರು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ಹೊರಡಿಸಿದ್ದನ್ನು ಇಲ್ಲಿ ಗಮನಿಸಬಹುದು.

ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ಇಂತಹ ಇನ್ನಷ್ಟು ವಿದ್ಯಮಾನಗಳು ಜರುಗುವ ಲಕ್ಷಣಗಳಿವೆ.


ಇದನ್ನೂ ಓದಿ: ವಿದೇಶ ಸುತ್ತುವ ಮೋದಿಗೆ ರೈತರನ್ನು ಭೇಟಿ ಮಾಡಲು ಸಮಯವಿಲ್ಲ – ಪ್ರಿಯಾಂಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೇಗಾದರೂ ಮಾಡಿ ಮಮತಾ ಬ್ಯಾನರ್ಜಿಯವನ್ನು ತಿಳಿಯಬೇಕು ಎಂಬುದು ಮನುವಾದಿಗಳ ಶಡ್ಯಂತ್ರ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...