Homeಮುಖಪುಟಎನ್‌ಡಿಎ ಮೈತ್ರಿ ಪಕ್ಷದ ನಾಯಕನ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮುಕ್ತಾಯಗೊಳಿಸಿದ ಸಿಬಿಐ

ಎನ್‌ಡಿಎ ಮೈತ್ರಿ ಪಕ್ಷದ ನಾಯಕನ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮುಕ್ತಾಯಗೊಳಿಸಿದ ಸಿಬಿಐ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿ ಪಕ್ಷ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್ ಬಣ) ನಾಯಕ ಪ್ರಫುಲ್ ಪಟೇಲ್ ವಿರುದ್ಧ 2017ರಲ್ಲಿ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮುಕ್ತಾಯಗೊಳಿಸಿದೆ.

ಮೇ 2017ರಲ್ಲಿ, ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ, ಏರ್ ಇಂಡಿಯಾಕ್ಕೆ ವಿಮಾನವನ್ನು ಬಾಡಿಗೆಗೆ ನೀಡುವಲ್ಲಿನ ಅಕ್ರಮಗಳ ಆರೋಪಗಳ ತನಿಖೆಗಾಗಿ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಏರ್ ಇಂಡಿಯಾದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಸುಮಾರು ಏಳು ವರ್ಷಗಳ ಕಾಲ ಪ್ರಕರಣದ ತನಿಖೆ ನಡೆಸಿದ ನಂತರ, ಸಿಬಿಐ ತನಿಖೆಯನ್ನು ಮುಕ್ತಾಯಗೊಳಿಸಿದೆ. ಪ್ರಫುಲ್ ಪಟೇಲ್ ಮತ್ತು  ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಮತ್ತು ಏರ್ ಇಂಡಿಯಾದ ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣವನ್ನು ಮುಚ್ಚಿ ಹಾಕಿರುವ ಕುರಿತು ವರದಿಯನ್ನು ಮಾ.2024ರಲ್ಲಿ ಸಕ್ಷಮ ನ್ಯಾಯಾಲಯದ ಮುಂದೆ ಸಲ್ಲಿಸಲಾಗಿದೆ.

ಪ್ರಫುಲ್ ಪಟೇಲ್‌ ಈ ಹಿಂದೆ ಮಾತನಾಡುತ್ತಾ, ಜೂನ್ 23ರಂದು ನಾನು ಎನ್‌ಡಿಎ ಸಭೆಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಪಾಟ್ನಾಕ್ಕೆ ಹೋದಾಗ ನನಗೆ ನಗು ಬಂತು. ಪವಾರ್ ಸಾಹೇಬರ ಜೊತೆ ಪಾಟ್ನಾದಲ್ಲಿ ನಡೆದ ಜಂಟಿ ವಿರೋಧ ಪಕ್ಷದ ಸಭೆಗೆ ಹೋಗಿದ್ದ ನನಗೆ ಅಲ್ಲಿನ ದೃಶ್ಯ ನೋಡಿ ನಗು ಬಂತು. ಅಲ್ಲಿ 17 ವಿರೋಧ ಪಕ್ಷಗಳಿದ್ದವು, ಅವುಗಳಲ್ಲಿ ಏಳು ಪಕ್ಷಗಳು ಲೋಕಸಭೆಯಲ್ಲಿ ಕೇವಲ 1 ಸಂಸದರನ್ನು ಹೊಂದಿದ್ದವು ಮತ್ತು ಒಂದು ಪಕ್ಷಕ್ಕೆ ಸಂಸದರೇ ಇರಲಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿದ್ದ ಪಟೇಲ್ ಇಂಡಿಯಾ ಮೈತ್ರಿ ಕೂಟವನ್ನು ಲೇವಡಿ ಮಾಡಿಕೊಂಡು ಹೇಳಿದ್ದಾರೆ.

ಫೆಬ್ರವರಿ 15 ರಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ರಾಜ್ಯಸಭಾ ಚುನಾವಣೆಗೆ ಪಟೇಲ್ ಅವರನ್ನು ಕಣಕ್ಕಿಳಿಸುವುದಾಗಿ ಹೇಳಿತ್ತು.

ಆಗಿನ ನಾಗರಿಕ ವಿಮಾನಯಾನ ಸಚಿವರಾಗಿದ್ದ ಪ್ರಫುಲ್ ಪಟೇಲ್ ಅವರು ಅಧಿಕಾರಿಗಳ ಜೊತೆ ಸೇರಿಕೊಂಡು ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ಗುತ್ತಿಗೆ ನೀಡಲು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡರು ಎಂದು ಆರೋಪಿಸಲಾಗಿದೆ. ಏರ್ ಇಂಡಿಯಾ ಮತ್ತು ಇಂಡಿಯನ್ ಏರ್‌ಲೈನ್ಸ್ ವಿಲೀನದ ನಂತರ ಸಾರ್ವಜನಿಕ ವಲಯದ ಉದ್ಯಮವಾದ ನ್ಯಾಷನಲ್ ಏವಿಯೇಷನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NACIL)ನ್ನು ರಚಿಸಲಾಯಿತು.

ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಸಂಸದೀಯ ಸಮಿತಿಯು ಜನವರಿ 21, 2010ರ ತನ್ನ ವರದಿಯಲ್ಲಿ ಮತ್ತು  ಸಾರ್ವಜನಿಕ ಉದ್ಯಮಗಳ ಸಮಿತಿಯು ತನ್ನ ಮಾರ್ಚ್ 12, 2010ರ ವರದಿಯಲ್ಲಿ ಅವ್ಯವಹಾರದ ಬಗ್ಗೆ ಬೆಳಕು ಚೆಲ್ಲಿದೆ. ಏರ್ ಇಂಡಿಯಾಗೆ 15 ದುಬಾರಿ ವಿಮಾನಗಳನ್ನು ಬಾಡಿಗೆಗೆ ನೀಡಲಾಗಿದ್ದು, ಇದಕ್ಕಾಗಿ ಪೈಲಟ್‌ಗಳನ್ನು ಸಹ ಸಿದ್ಧಗೊಳಿಸಿಲ್ಲ, ಇದರಿಂದಾಗಿ ಕಂಪನಿಗೆ ಭಾರಿ ನಷ್ಟ ಉಂಟಾಗಿದೆ ಎಂದು ಹೇಳಿತ್ತು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಕಸ್ಟಡಿಯಲ್ಲಿ ಕಿರುಕುಳ ನೀಡಲಾಗುತ್ತಿದೆ: ಪತ್ನಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...