Homeಮುಖಪುಟಎನ್‌ಡಿಎ ಮೈತ್ರಿ ಪಕ್ಷದ ನಾಯಕನ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮುಕ್ತಾಯಗೊಳಿಸಿದ ಸಿಬಿಐ

ಎನ್‌ಡಿಎ ಮೈತ್ರಿ ಪಕ್ಷದ ನಾಯಕನ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮುಕ್ತಾಯಗೊಳಿಸಿದ ಸಿಬಿಐ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿ ಪಕ್ಷ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್ ಬಣ) ನಾಯಕ ಪ್ರಫುಲ್ ಪಟೇಲ್ ವಿರುದ್ಧ 2017ರಲ್ಲಿ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮುಕ್ತಾಯಗೊಳಿಸಿದೆ.

ಮೇ 2017ರಲ್ಲಿ, ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ, ಏರ್ ಇಂಡಿಯಾಕ್ಕೆ ವಿಮಾನವನ್ನು ಬಾಡಿಗೆಗೆ ನೀಡುವಲ್ಲಿನ ಅಕ್ರಮಗಳ ಆರೋಪಗಳ ತನಿಖೆಗಾಗಿ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಏರ್ ಇಂಡಿಯಾದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಸುಮಾರು ಏಳು ವರ್ಷಗಳ ಕಾಲ ಪ್ರಕರಣದ ತನಿಖೆ ನಡೆಸಿದ ನಂತರ, ಸಿಬಿಐ ತನಿಖೆಯನ್ನು ಮುಕ್ತಾಯಗೊಳಿಸಿದೆ. ಪ್ರಫುಲ್ ಪಟೇಲ್ ಮತ್ತು  ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಮತ್ತು ಏರ್ ಇಂಡಿಯಾದ ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣವನ್ನು ಮುಚ್ಚಿ ಹಾಕಿರುವ ಕುರಿತು ವರದಿಯನ್ನು ಮಾ.2024ರಲ್ಲಿ ಸಕ್ಷಮ ನ್ಯಾಯಾಲಯದ ಮುಂದೆ ಸಲ್ಲಿಸಲಾಗಿದೆ.

ಪ್ರಫುಲ್ ಪಟೇಲ್‌ ಈ ಹಿಂದೆ ಮಾತನಾಡುತ್ತಾ, ಜೂನ್ 23ರಂದು ನಾನು ಎನ್‌ಡಿಎ ಸಭೆಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಪಾಟ್ನಾಕ್ಕೆ ಹೋದಾಗ ನನಗೆ ನಗು ಬಂತು. ಪವಾರ್ ಸಾಹೇಬರ ಜೊತೆ ಪಾಟ್ನಾದಲ್ಲಿ ನಡೆದ ಜಂಟಿ ವಿರೋಧ ಪಕ್ಷದ ಸಭೆಗೆ ಹೋಗಿದ್ದ ನನಗೆ ಅಲ್ಲಿನ ದೃಶ್ಯ ನೋಡಿ ನಗು ಬಂತು. ಅಲ್ಲಿ 17 ವಿರೋಧ ಪಕ್ಷಗಳಿದ್ದವು, ಅವುಗಳಲ್ಲಿ ಏಳು ಪಕ್ಷಗಳು ಲೋಕಸಭೆಯಲ್ಲಿ ಕೇವಲ 1 ಸಂಸದರನ್ನು ಹೊಂದಿದ್ದವು ಮತ್ತು ಒಂದು ಪಕ್ಷಕ್ಕೆ ಸಂಸದರೇ ಇರಲಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿದ್ದ ಪಟೇಲ್ ಇಂಡಿಯಾ ಮೈತ್ರಿ ಕೂಟವನ್ನು ಲೇವಡಿ ಮಾಡಿಕೊಂಡು ಹೇಳಿದ್ದಾರೆ.

ಫೆಬ್ರವರಿ 15 ರಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ರಾಜ್ಯಸಭಾ ಚುನಾವಣೆಗೆ ಪಟೇಲ್ ಅವರನ್ನು ಕಣಕ್ಕಿಳಿಸುವುದಾಗಿ ಹೇಳಿತ್ತು.

ಆಗಿನ ನಾಗರಿಕ ವಿಮಾನಯಾನ ಸಚಿವರಾಗಿದ್ದ ಪ್ರಫುಲ್ ಪಟೇಲ್ ಅವರು ಅಧಿಕಾರಿಗಳ ಜೊತೆ ಸೇರಿಕೊಂಡು ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ಗುತ್ತಿಗೆ ನೀಡಲು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡರು ಎಂದು ಆರೋಪಿಸಲಾಗಿದೆ. ಏರ್ ಇಂಡಿಯಾ ಮತ್ತು ಇಂಡಿಯನ್ ಏರ್‌ಲೈನ್ಸ್ ವಿಲೀನದ ನಂತರ ಸಾರ್ವಜನಿಕ ವಲಯದ ಉದ್ಯಮವಾದ ನ್ಯಾಷನಲ್ ಏವಿಯೇಷನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NACIL)ನ್ನು ರಚಿಸಲಾಯಿತು.

ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಸಂಸದೀಯ ಸಮಿತಿಯು ಜನವರಿ 21, 2010ರ ತನ್ನ ವರದಿಯಲ್ಲಿ ಮತ್ತು  ಸಾರ್ವಜನಿಕ ಉದ್ಯಮಗಳ ಸಮಿತಿಯು ತನ್ನ ಮಾರ್ಚ್ 12, 2010ರ ವರದಿಯಲ್ಲಿ ಅವ್ಯವಹಾರದ ಬಗ್ಗೆ ಬೆಳಕು ಚೆಲ್ಲಿದೆ. ಏರ್ ಇಂಡಿಯಾಗೆ 15 ದುಬಾರಿ ವಿಮಾನಗಳನ್ನು ಬಾಡಿಗೆಗೆ ನೀಡಲಾಗಿದ್ದು, ಇದಕ್ಕಾಗಿ ಪೈಲಟ್‌ಗಳನ್ನು ಸಹ ಸಿದ್ಧಗೊಳಿಸಿಲ್ಲ, ಇದರಿಂದಾಗಿ ಕಂಪನಿಗೆ ಭಾರಿ ನಷ್ಟ ಉಂಟಾಗಿದೆ ಎಂದು ಹೇಳಿತ್ತು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಕಸ್ಟಡಿಯಲ್ಲಿ ಕಿರುಕುಳ ನೀಡಲಾಗುತ್ತಿದೆ: ಪತ್ನಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...