Homeಮುಖಪುಟ`ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ': ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ...

`ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ’: ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ ಉಪಮುಖ್ಯಮಂತ್ರಿ

- Advertisement -
- Advertisement -

ತಾನು ಎಎಪಿ ಬಿಟ್ಟು ಬಿಜೆಪಿ ಸೇರುವುದಾದರೆ ತನ್ನ ವಿರುದ್ಧದ ಎಲ್ಲಾ ಸಿಬಿಐ ಮತ್ತು ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸುವುದಾಗಿ ಬಿಜೆಪಿಯು ತನಗೆ ಆಫರ್ ನೀಡಿದೆ ಎಂದು ಅಬಕಾರಿ ನೀತಿ ಆಪಾದಿತ ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು ಸೋಮವಾರ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮನೀಶ್‌ ಸಿಸೋಡಿಯಾ, “ಎಎಪಿಯನ್ನು ಬಿಟ್ಟು ಬಿಜೆಪಿಗೆ ಸೇರಿಕೊಳ್ಳಿ, ಎಲ್ಲಾ ಸಿಬಿಐ ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ರಜಪೂತ, ಮಹಾರಾಣಾ ಪ್ರತಾಪ್ ವಂಶಸ್ಥ. ನನ್ನ ತಲೆಯನ್ನು ಕತ್ತರಿಸುತ್ತೇನೆ ಆದರೆ ಭ್ರಷ್ಟ ಪಿತೂರಿಗಾರರ ಮುಂದೆ ತಲೆಬಾಗುವುದಿಲ್ಲ. ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು. ನೀವು ಏನು ಮಾಡಲು ಬಯಸುತ್ತೀರೋ ಅದನ್ನು ಮಾಡಿ ಎಂಬುವುದು ಬಿಜೆಪಿಗೆ ನನ್ನ ಉತ್ತರ” ಮನೀಶ್‌ ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ: ನಿರುದ್ಯೋಗದ ವಿರುದ್ಧ ಬೀದಿಗಿಳಿಯುತ್ತಿರುವ ರೈತರು: ದೆಹಲಿಯೆಲ್ಲೆಡೆ ಬಿಗಿ ಬಂದೋಬಸ್ತ್

ದೆಹಲಿ ಅಬಕಾರಿ ನೀತಿಯ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಜನರು ಮತ್ತು ಘಟಕಗಳಲ್ಲಿ ಸಿಸೋಡಿಯಾ ಕೂಡ ಒಬ್ಬರಾಗಿದ್ದಾರೆ.

ಈ ಮಧ್ಯೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮನೀಶ್ ಸಿಸೋಡಿಯಾ ಅವರನ್ನು ಬೆಂಬಲಿಸಿದ್ದಾರೆ. “ದೆಹಲಿಯ ಸರ್ಕಾರಿ ಶಾಲೆಗಳ ಸುಧಾರಣೆಗಾಗಿ ಮನೀಶ್ ಸಿಸೋಡಿಯಾ ಅವರಿಗೆ ‘ಭಾರತ ರತ್ನ’ ಸಿಗಬೇಕು. ಆದರೆ ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರವು ಅವರನ್ನು ಬೇಟೆಯಾಡುತ್ತಿದೆ” ಎಂದು ಹೇಳಿದ್ದಾರೆ.

ಸಿಸೋಡಿಯಾ ಹೇಳಿಕೆ ನಿರಾಕರಿಸಿದ ಬಿಜೆಪಿ

ಸಿಸೋಡಿಯಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ, “ಮನೀಷ್ ಸಿಸೋಡಿಯಾ ಅವರು ಪ್ರತಿದಿನ ಬೆಳಿಗ್ಗೆ ‘ಪ್ರಾಣಾಯಾಮ’ ಮಾಡಬೇಕು. ಅವರು ಗಾಂಜಾ ಸೇವಿಸಿದ್ದಾರೆಯೇ? ಅವರು ಬಿಜೆಪಿಗೆ ಸೇರಲು ಕೇಳಿದ ವ್ಯಕ್ತಿಯ ಹೆಸರನ್ನು ಹೇಳಬೇಕು. ಎಂತಹ ಪರಿಸ್ಥಿತಿಯಲ್ಲೂ ಬಿಜೆಪಿ ಅವರನ್ನು ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

ಸಿಸೋಡಿಯಾ ಅವರ ಹೇಳಿಕೆಯನ್ನು ನಿರಾಕರಿಸಿದ ಬಿಜೆಪಿ, “ಎಎಪಿ ಭ್ರಷ್ಟಾಚಾರದಲ್ಲಿ ದಾಖಲೆಗಳನ್ನು ಮುರಿದಿದೆ” ಎಂದು ಅಬಕಾರಿ ನೀತಿ ಪ್ರಕರಣವನ್ನು ಉಲ್ಲೇಖಿಸಿ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...