Homeಮುಖಪುಟಸಿಬಿಐ, ಜಾರಿ ನಿರ್ದೇಶನಾಲಯವನ್ನು ಮುಚ್ಚಬೇಕು: ಇಂಡಿಯಾ ಮೈತ್ರಿ ಕೂಟದ ಮುಂದೆ ಅಖಿಲೇಶ್ ಯಾದವ್ ಪ್ರಸ್ತಾಪ

ಸಿಬಿಐ, ಜಾರಿ ನಿರ್ದೇಶನಾಲಯವನ್ನು ಮುಚ್ಚಬೇಕು: ಇಂಡಿಯಾ ಮೈತ್ರಿ ಕೂಟದ ಮುಂದೆ ಅಖಿಲೇಶ್ ಯಾದವ್ ಪ್ರಸ್ತಾಪ

- Advertisement -
- Advertisement -

ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಇಲಾಖೆಗಳು ಅಗತ್ಯವಿಲ್ಲ, ಅವುಗಳನ್ನು ಮುಚ್ಚಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದು, ಈ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರ ಮುಂದೆ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.

ಸಿಬಿಐ ಮತ್ತು ಇಡಿಯನ್ನು ಮುಚ್ಚಬೇಕು, ನೀವು ಮೋಸ ಮಾಡಿದ್ದರೆ ಅದನ್ನು ಎದುರಿಸಲು ಆದಾಯ ತೆರಿಗೆ ಇಲಾಖೆ ಇದೆ. ನಿಮಗೆ ಸಿಬಿಐ ಏಕೆ ಬೇಕು? ಪ್ರತಿ ರಾಜ್ಯವು ಭ್ರಷ್ಟಾಚಾರ ನಿಗ್ರಹ ಇಲಾಖೆಯನ್ನು ಹೊಂದಿದೆ, ಅಗತ್ಯವಿದ್ದರೆ ಅದನ್ನು ಬಳಸಿಕೊಳ್ಳಿ ಸಿಬಿಐ ಮತ್ತು ಇಡಿಯನ್ನು ರಾಜಕೀಯ ವಿರೋಧಿಗಳ ವಿರುದ್ಧ ಬಳಸಿಕೊಳ್ಳಲಾಗುತ್ತಿದೆ ಎಂದು ಅಖಿಲೇಶ್ ಯಾದವ್‌ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸರ್ಕಾರಗಳನ್ನು ರಚಿಸಲು ಅಥವಾ ಸರ್ಕಾರಗಳನ್ನು ಅಸ್ಥಿರಗೊಳಿಸಲು ಅಸ್ತ್ರವಾಗಿ ಸಿಬಿಐ ಮತ್ತು ಇಡಿಯನ್ನು ಬಳಸಲಾಗುತ್ತದೆ. ಏಜೆನ್ಸಿಗಳು ನೋಟು ರದ್ದತಿ ಸಮಯದಲ್ಲಿ ಏನು ತಪ್ಪಾಗಿದೆ ಎಂದು ಯಾಕೆ ತನಿಖೆ ಮಾಡಲಿಲ್ಲ? ಜನರು ತಮ್ಮ ಕಪ್ಪು ಹಣವನ್ನು ಹೇಗೆ ಬಿಳಿಯಾಗಿ ಪರಿವರ್ತಿಸಿದರು? ಎಂಬ ಬಗ್ಗೆ ತನಿಖೆ ಮಾಡಿಲ್ಲ ಎಂದು ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ ಇಂತಹ ದೂರಗಾಮಿ ಕ್ರಮವನ್ನು ತೆಗೆದುಕೊಳ್ಳಲು ಸಿದ್ಧವಾಗಿದೆಯೇ? ಇದು ನನ್ನ ಪ್ರಸ್ತಾಪವಾಗಿದೆ ಮತ್ತು ನಾನು ಇದನ್ನು ಇಂಡಿಯಾ ಮೈತ್ರಿ ಕೂಟದ ಮುಂದಿಡುತ್ತೇನೆ ಎಂದು ಅಖಿಲೇಶ್ ಯಾದವ್‌ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಮುಗಿದ ನಂತರವೂ ಕಾಂಗ್ರೆಸ್‌ ಮತ್ತು ಎಸ್ಪಿ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ಯಾವುದೇ ಚುನಾವಣೆ ಬಂದರೂ ಮೈತ್ರಿ ಮುಂದುವರಿಯಲಿದೆ. ಸದ್ಯಕ್ಕೆ ನಮ್ಮ ಪ್ರಯತ್ನ ಸರ್ಕಾರವನ್ನು ರಚಿಸುವುದಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಅಖಿಲೇಶ್ ಯಾದವ್ ಲೋಕಸಭೆ ಚುನಾವಣೆಯ ಹಿನ್ನೆಲೆ ರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರವನ್ನು ಮಾಡಿದ್ದಾರೆ.

ಯುಪಿಯಲ್ಲಿ 2019ರಲ್ಲಿ 1 ಸ್ಥಾನ ಪಡೆದಂತೆ ಒಟ್ಟಾರೆಯಾಗಿ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದರೆ ಮೈತ್ರಿಯು ಉಳಿದುಕೊಳ್ಳುತ್ತದೆಯೇ ಎಂದು ಕೇಳಿದಾಗ, ಅಖಿಲೇಶ್ ದೃಢವಾಗಿ “ಹೌದು” ಎಂದು ಪ್ರತಿಕ್ರಿಯಿಸಿದ್ದಾರೆ. ಪ್ರತಿ ಚುನಾವಣೆಯು ಹೊಸ ಪರಿಸ್ಥಿತಿಯನ್ನು ಸೃಷ್ಟಿಸುತ್ತದೆ. ರಾಷ್ಟ್ರೀಯ ಮಟ್ಟದಲ್ಲಿ ಇಂಡಿಯಾ ಮೈತ್ರಿಯೂ ಮುಂದುವರಿಯುತ್ತದೆ ಎಂದು ಅಖಿಲೇಶ್‌ ಯಾದವ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...