Homeಮುಖಪುಟನಾಗಾ ಮಹಿಳೆಯ ಹತ್ಯೆ: 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ನಾಗಾ ಮಹಿಳೆಯ ಹತ್ಯೆ: 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರದ ವೇಳೆ ನಾಗಾ ಜನಾಂಗದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ 9 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಅಸ್ಸಾಂನ ಗುವಾಹಟಿಯಲ್ಲಿರುವ ವಿಶೇಷ ಸಿಬಿಐ ನ್ಯಾಯಾಧೀಶರ ಮುಂದೆ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದ ಬಗ್ಗೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ.

ಆಗಸ್ಟ್‌ನಲ್ಲಿ ನಾಗಾ ಸಮುದಾಯದ ಮಹಿಳೆಯ ಹತ್ಯೆಯ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿತ್ತು. ಹತ್ಯೆಗೀಡಾದ ಮಹಿಳೆಯ ಕುಟುಂಬವು ಜುಲೈ 23 ರಂದು ವೀಡಿಯೊವನ್ನು ನೋಡಿದೆ ಎಂದು ಹೇಳಿದೆ. ಆದರೆ ಆ.4ರಂದು ಈ ಕುರಿತ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿತ್ತು. ವಿಡಿಯೋದಲ್ಲಿ ಲೂಸಿ ಮರಿಂಗ್(55) ಎಂಬ ಮಹಿಳೆಯ ತೆಲೆಗೆ 20 ಬಾರಿ ಶೂಟ್‌ ಮಾಡಲಾಗಿದೆ. ವಿಡಿಯೋದಲ್ಲಿ ಮಹಿಳೆಯ ತಲೆ ಛಿದ್ರವಾಗಿರುವುದು ಕಂಡು ಬಂದಿತ್ತು.

2023ರ ಜುಲೈ 15ರಂದು ಮಧ್ಯಾಹ್ನ 12:10ರ ಸುಮಾರಿಗೆ ಸಶಸ್ತ್ರದಾರಿ ದುಷ್ಕರ್ಮಿಗಳು ಸೇರಿದಂತೆ ಸುಮಾರು 100 ಜನರ ಗುಂಪೊಂದು ಸಾವೊಂಬಂಗ್ ಗೇಟ್‌ನಲ್ಲಿ ಒಬ್ಬ ಮಹಿಳೆಯನ್ನು ಅಪಹರಿಸಿದ್ದರು. ಅದೇ ದಿನ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆಯಲ್ಲಿ 9 ಆರೋಪಿಗಳು ಭಾಗಿಯಾಗಿರುವುದು ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಇತರ ಆರೋಪಿಗಳನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂಫಾಲ್ ಪೂರ್ವ ಜಿಲ್ಲೆಯ ಲಾಮಲೈ ಪೊಲೀಸ್ ಠಾಣೆಯು ಮೊದಲು ಈ ಕುರಿತು ಪ್ರಕರಣ ದಾಖಲಿಸಿತ್ತು. ಬಳಿಕ ಮಣಿಪುರ ಸರ್ಕಾರ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಪ್ರಕರಣದಲ್ಲಿ ಐವರು ಮಹಿಳೆಯರು ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿತ್ತು.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಮಾರಿಂಗ್ ಬುಡಕಟ್ಟಿಗೆ ಸೇರಿದ ಲೂಸಿಯನ್ನು ಒಂದು ಗುಂಪು ಅಪಹರಿಸಿ ಇಂಫಾಲ್ ಪೂರ್ವದ ಸಾವೊಂಬಂಗ್‌ಗೆ ಕರೆಯದ್ದು ಹತ್ಯೆ ನಡೆಸಿದೆ. ಇಂಫಾಲ್ ಪಶ್ಚಿಮದಲ್ಲಿರುವ ತನ್ನ ಮನೆಯಿಂದ ಸುಮಾರು 10 ಕಿಮೀ ದೂರದಲ್ಲಿ ಘಟನೆ ನಡೆದಿದೆ.

ಮಣಿಪುರದಲ್ಲಿ ಮೈತೈ-ಕುಕಿ ಸಮುದಾಯದ ನಡುವಿನ ಸಂಘರ್ಷದ ನಡುವೆ ಮಹಿಳೆಯ ಹತ್ಯೆಯು ನಾಗಾ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಯುನೈಟೆಡ್ ನಾಗಾ ಕೌನ್ಸಿಲ್ ಕೃತ್ಯವನ್ನು ಖಂಡಿಸಿ ಪ್ರತಿಭಟಿಸಿತ್ತು. ಬಂದ್‌ಗೆ ಕರೆ ನೀಡಿತ್ತು.

ಮಣಿಪುರದಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದ ಹಿಂಸಾಚಾರದಲ್ಲಿ 194 ಜನರು ಮೃತಪಟ್ಟು 67,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟಿರುವ ಮೈತೈ ಸಮುದಾಯದವರು ಇಂಫಾಲ್‌ ಕಣಿವೆಯಲ್ಲಿ ವಾಸಿಸುತ್ತಿದ್ದು, ಇವರ ಮೀಸಲಾತಿ ಬೇಡಿಕೆಯನ್ನು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ, ರಾಜ್ಯದ ಜನಸಂಖ್ಯೆಯಲ್ಲಿ ಶೇ 40ರಷ್ಟಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ವಿರೋಧಿಸಿ ಪ್ರತಿಭಟನೆ ನಡೆಸಿದವು. ಈ ವೇಳೆ ಹಿಂಸಾಚಾರ ನಡೆದಿತ್ತು.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...