Homeಮುಖಪುಟಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರರಾಗಿದ್ದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಲಂಚ ಪ್ರಕರಣದಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

966 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರನಾಗಿದ್ದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ವಿರುದ್ಧ ಜಗದಾಲ್ಪುರ ಅಂತರ್ಗತ ಉಕ್ಕು ತಯಾರಿಕಾ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ 174 ಕೋಟಿ ಬಿಲ್ ಮಂಜೂರು ಮಾಡಲು 78 ಲಕ್ಷ ಲಂಚ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಭಾಗಿಯಾದ ಎನ್‌ಐಎಸ್‌ಪಿ ಹಾಗೂ ಎನ್‌ಎಂಡಿಸಿ ಹಾಗೂ ಎಂಇಕಾನ್‌ ಅಧಿಕಾರಿಗಳ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ 21 ರಂದು ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಮೇಘಾ ಇಂಜಿನಿಯರಿಂಗ್ ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರರಾಗಿದ್ದಾರೆ  ಮತ್ತು ಬಿಜೆಪಿಗೆ 586 ಕೋಟಿ ರೂ. ದೇಣಿಗೆಯನ್ನು ಈ ಕಂಪೆನಿ ನೀಡಿತ್ತು. ಇದಲ್ಲದೆ ಕಂಪೆನಿಯು ಬಿಆರ್‌ಎಸ್‌ಗೆ ರೂ 195 ಕೋಟಿ, ಡಿಎಂಕೆಗೆ 85 ಕೋಟಿ ರೂ. ಮತ್ತು ವೈಎಸ್‌ಆರ್‌ಸಿಪಿಗೆ  37 ಕೋಟಿ ರೂ. ದೇಣಿಗೆ ನೀಡಿದೆ. ಟಿಡಿಪಿ ಕಂಪನಿಯಿಂದ ಸುಮಾರು 25 ಕೋಟಿ ರೂ., ಕಾಂಗ್ರೆಸ್ 17 ಕೋಟಿ ರೂ. ದೇಣಿಗೆಯನ್ನು ಪಡೆದಿದೆ.

ಶನಿವಾರ ದಾಖಲಾದ ಎಫ್‌ಐಆರ್‌ನ ಪ್ರಕಾರ, ಇಂಟೆಕ್‌ವೆಲ್ ಮತ್ತು ಪಂಪ್‌ಹೌಸ್ ಮತ್ತು ಕ್ರಾಸ್ ಕಂಟ್ರಿ ಪೈಪ್‌ಲೈನ್ ಕಾಮಗಾರಿಗೆ ಸಂಬಂಧಿಸಿದ 315 ಕೋಟಿ ರೂ.ಗಳ ಯೋಜನೆಯಲ್ಲಿ ಲಂಚದ ಆರೋಪದ ಬಗ್ಗೆ ಸಿಬಿಐ 2023 ಆಗಸ್ಟ್ 10ರಂದು ಪ್ರಾಥಮಿಕ ತನಿಖೆ ನಡೆಸಿತ್ತು. ಈ ಕುರಿತ ವರದಿ ಆಧರಿಸಿ ಮಾರ್ಚ್ 18ರಂದು ಪ್ರಕರಣ ದಾಖಲಿಸಲು ನಿರ್ಧರಿಸಲಾಯಿತು. ಅದರಂತೆ ಮಾರ್ಚ್ 31ರಂದು ಪ್ರಕರಣ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಸಿಬಿಐ ಎಫ್‌ಐಆರ್‌ ಎನ್‌ಐಎಸ್‌ಪಿ ಮತ್ತು ಎನ್‌ಎಂಡಿಸಿ ಲಿಮಿಟೆಡ್‌ನ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಪ್ರಶಾಂತ್ ದಾಶ್, ನಿರ್ದೇಶಕ (ಉತ್ಪಾದನೆ) ಡಿಕೆ ಮೊಹಾಂತಿ, ಡಿಜಿಎಂ ಪಿಕೆ ಭುಯಾನ್, ಡಿಎಂ ನರೇಶ್ ಬಾಬು, ಹಿರಿಯ ವ್ಯವಸ್ಥಾಪಕ ಸುಬ್ರೊ ಬ್ಯಾನರ್ಜಿ, ನಿವೃತ್ತ ಸಿಜಿಎಂ (ಹಣಕಾಸು) ಎಲ್ ಕೃಷ್ಣ ಮೋಹನ್, ಕೆ ರಾಜಶೇಖರ್, ಸೋಮನಾಥ್ ಘೋಷ್ ಸೇರಿದಂತೆ ಎಂಟು ಅಧಿಕಾರಿಗಳನ್ನು ಹೆಸರಿಸಿದೆ.

ಏಜೆನ್ಸಿಯು MECON ಲಿಮಿಟೆಡ್‌ನ ಇಬ್ಬರು ಅಧಿಕಾರಿಗಳನ್ನು ಹೆಸರಿಸಿದೆ. ಎಂಇಕಾನ್‌ ಕಂಪನಿಯ ಸಹಾಯಕ ಮುಖ್ಯ ವ್ಯವಸ್ಥಾಪಕ ಸಂಜೀವ್ ಸಹಾಯ್ ಹಾಗೂ ಡಿಜಿಎಂ ಇಲ್ಲವರಸು ಇವರು 73 ಇನ್‌ವಾಯ್ಸ್‌ಗಳಿರುವ 174.41 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲು ಮೇಘಾ ಎಂಜಿನಿಯರಿಂಗ್ ಕಂಪನಿಯ ಮುಖ್ಯ ವ್ಯವಸ್ಥಾಪಕ ಸುಭಾಶ್ ಚಂದ್ರ ಸಂಗ್ರಾಸ್ ಅವರಿಂದ 5.01 ಲಕ್ಷ ಲಂಚ ಸ್ವೀಕರಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಇದನ್ನು ಓದಿ: ಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...