Homeಮುಖಪುಟಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರರಾಗಿದ್ದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಲಂಚ ಪ್ರಕರಣದಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

966 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರನಾಗಿದ್ದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ವಿರುದ್ಧ ಜಗದಾಲ್ಪುರ ಅಂತರ್ಗತ ಉಕ್ಕು ತಯಾರಿಕಾ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ 174 ಕೋಟಿ ಬಿಲ್ ಮಂಜೂರು ಮಾಡಲು 78 ಲಕ್ಷ ಲಂಚ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಭಾಗಿಯಾದ ಎನ್‌ಐಎಸ್‌ಪಿ ಹಾಗೂ ಎನ್‌ಎಂಡಿಸಿ ಹಾಗೂ ಎಂಇಕಾನ್‌ ಅಧಿಕಾರಿಗಳ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ 21 ರಂದು ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಮೇಘಾ ಇಂಜಿನಿಯರಿಂಗ್ ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರರಾಗಿದ್ದಾರೆ  ಮತ್ತು ಬಿಜೆಪಿಗೆ 586 ಕೋಟಿ ರೂ. ದೇಣಿಗೆಯನ್ನು ಈ ಕಂಪೆನಿ ನೀಡಿತ್ತು. ಇದಲ್ಲದೆ ಕಂಪೆನಿಯು ಬಿಆರ್‌ಎಸ್‌ಗೆ ರೂ 195 ಕೋಟಿ, ಡಿಎಂಕೆಗೆ 85 ಕೋಟಿ ರೂ. ಮತ್ತು ವೈಎಸ್‌ಆರ್‌ಸಿಪಿಗೆ  37 ಕೋಟಿ ರೂ. ದೇಣಿಗೆ ನೀಡಿದೆ. ಟಿಡಿಪಿ ಕಂಪನಿಯಿಂದ ಸುಮಾರು 25 ಕೋಟಿ ರೂ., ಕಾಂಗ್ರೆಸ್ 17 ಕೋಟಿ ರೂ. ದೇಣಿಗೆಯನ್ನು ಪಡೆದಿದೆ.

ಶನಿವಾರ ದಾಖಲಾದ ಎಫ್‌ಐಆರ್‌ನ ಪ್ರಕಾರ, ಇಂಟೆಕ್‌ವೆಲ್ ಮತ್ತು ಪಂಪ್‌ಹೌಸ್ ಮತ್ತು ಕ್ರಾಸ್ ಕಂಟ್ರಿ ಪೈಪ್‌ಲೈನ್ ಕಾಮಗಾರಿಗೆ ಸಂಬಂಧಿಸಿದ 315 ಕೋಟಿ ರೂ.ಗಳ ಯೋಜನೆಯಲ್ಲಿ ಲಂಚದ ಆರೋಪದ ಬಗ್ಗೆ ಸಿಬಿಐ 2023 ಆಗಸ್ಟ್ 10ರಂದು ಪ್ರಾಥಮಿಕ ತನಿಖೆ ನಡೆಸಿತ್ತು. ಈ ಕುರಿತ ವರದಿ ಆಧರಿಸಿ ಮಾರ್ಚ್ 18ರಂದು ಪ್ರಕರಣ ದಾಖಲಿಸಲು ನಿರ್ಧರಿಸಲಾಯಿತು. ಅದರಂತೆ ಮಾರ್ಚ್ 31ರಂದು ಪ್ರಕರಣ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಸಿಬಿಐ ಎಫ್‌ಐಆರ್‌ ಎನ್‌ಐಎಸ್‌ಪಿ ಮತ್ತು ಎನ್‌ಎಂಡಿಸಿ ಲಿಮಿಟೆಡ್‌ನ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಪ್ರಶಾಂತ್ ದಾಶ್, ನಿರ್ದೇಶಕ (ಉತ್ಪಾದನೆ) ಡಿಕೆ ಮೊಹಾಂತಿ, ಡಿಜಿಎಂ ಪಿಕೆ ಭುಯಾನ್, ಡಿಎಂ ನರೇಶ್ ಬಾಬು, ಹಿರಿಯ ವ್ಯವಸ್ಥಾಪಕ ಸುಬ್ರೊ ಬ್ಯಾನರ್ಜಿ, ನಿವೃತ್ತ ಸಿಜಿಎಂ (ಹಣಕಾಸು) ಎಲ್ ಕೃಷ್ಣ ಮೋಹನ್, ಕೆ ರಾಜಶೇಖರ್, ಸೋಮನಾಥ್ ಘೋಷ್ ಸೇರಿದಂತೆ ಎಂಟು ಅಧಿಕಾರಿಗಳನ್ನು ಹೆಸರಿಸಿದೆ.

ಏಜೆನ್ಸಿಯು MECON ಲಿಮಿಟೆಡ್‌ನ ಇಬ್ಬರು ಅಧಿಕಾರಿಗಳನ್ನು ಹೆಸರಿಸಿದೆ. ಎಂಇಕಾನ್‌ ಕಂಪನಿಯ ಸಹಾಯಕ ಮುಖ್ಯ ವ್ಯವಸ್ಥಾಪಕ ಸಂಜೀವ್ ಸಹಾಯ್ ಹಾಗೂ ಡಿಜಿಎಂ ಇಲ್ಲವರಸು ಇವರು 73 ಇನ್‌ವಾಯ್ಸ್‌ಗಳಿರುವ 174.41 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲು ಮೇಘಾ ಎಂಜಿನಿಯರಿಂಗ್ ಕಂಪನಿಯ ಮುಖ್ಯ ವ್ಯವಸ್ಥಾಪಕ ಸುಭಾಶ್ ಚಂದ್ರ ಸಂಗ್ರಾಸ್ ಅವರಿಂದ 5.01 ಲಕ್ಷ ಲಂಚ ಸ್ವೀಕರಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಇದನ್ನು ಓದಿ: ಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...