Homeಮುಖಪುಟಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

ಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

- Advertisement -
- Advertisement -

ಲಡಾಖ್ ಮೂಲದ ಶಿಕ್ಷಣ ತಜ್ಞ ಮತ್ತು ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿದ ಸಂಸ್ಥೆಯ ವಿರುದ್ಧ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ಆರಂಭಿಸಿದೆ ಎಂದು ಗುರುವಾರ ವರದಿಯಾಗಿದೆ.

ಕೆಲ ಸಮಯದಿಂದ ವಾಂಗ್‌ಚುಕ್ ಅವರ ಸಂಸ್ಥೆಗಳ ವಿರುದ್ದ ತನಿಖೆ ನಡೆಯುತ್ತಿದೆ. ಆದರೆ, ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 10 ದಿನಗಳ ಹಿಂದೆ ಸಿಬಿಐ ತಂಡವು ‘ಒಂದು ಆದೇಶ’ ಪ್ರತಿಯೊಂದಿಗೆ ಬಂದಿದ್ದು, ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ ಲಡಾಖ್ (ಹೆಚ್‌ಐಎಲ್‌) ನಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಗಳ ಕುರಿತು ಗೃಹ ಸಚಿವಾಲಯದ ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂಬುವುದಾಗಿ ಹೇಳಿದ್ದಾರೆ ವಾಂಗ್‌ಚುಕ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದೆ.

“ವಿದೇಶಿ ನಿಧಿಗಳನ್ನು ಸ್ವೀಕರಿಸಲು ನಾವು ಎಫ್‌ಸಿಆರ್‌ಎ ಅಡಿಯಲ್ಲಿ ಅನುಮತಿ ಪಡೆದಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ. ನಾವು ವಿದೇಶಿ ನಿಧಿಗಳ ಮೇಲೆ ಅವಲಂಬಿತರಾಗಲು ಬಯಸುವುದಿಲ್ಲ, ನಾವು ನಮ್ಮ ಜ್ಞಾನವನ್ನು ರಫ್ತು ಮಾಡುತ್ತೇವೆ ಮತ್ತು ಆದಾಯವನ್ನು ಸಂಗ್ರಹಿಸುತ್ತೇವೆ. ಅಂತಹ ಮೂರು ಸಂದರ್ಭಗಳಲ್ಲಿ, ಅವರು ಅದನ್ನು ವಿದೇಶಿ ಕೊಡುಗೆ ಎಂದು ಭಾವಿಸಿದ್ದಾರೆ” ಎಂದು ವಾಂಗ್‌ಚುಕ್ ಹೇಳಿದ್ದಾರೆ.

ಸಿಬಿಐ ತಂಡವು ಕಳೆದ ವಾರ ಹೆಚ್‌ಐಎಎಲ್‌ ಮತ್ತು ಲಡಾಖ್‌ನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಳವಳಿ (ಎಸ್‌ಇಸಿಎಂಒಎಲ್‌) ಗೆ ಭೇಟಿ ನೀಡಿ, 2022ಮತ್ತು 2024ರ ನಡುವೆ ಅವರು ಪಡೆದ ವಿದೇಶಿ ನಿಧಿಗಳ ವಿವರಗಳನ್ನು ಕೋರಿದೆ ಎಂದು ವಾಂಗ್‌ಚುಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಿಬಿಐ ತಂಡಗಳು ಇನ್ನೂ ಲಡಾಖ್‌ನಲ್ಲಿ ಮೊಕ್ಕಾಂ ಹೂಡಿ ಸಂಸ್ಥೆಗಳ ಖಾತೆಗಳು ಮತ್ತು ಹೇಳಿಕೆಗಳನ್ನು ಪರಿಶೀಲಿಸುತ್ತಿವೆ ಎಂದಿದ್ದಾರೆ.

ಕೇಂದ್ರದ ವಿರುದ್ದ ವಾಂಗ್‌ಚುಕ್ ಹೋರಾಟ ಮತ್ತು ಸಿಬಿಐ ತನಿಖೆ

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಈ ಪ್ರದೇಶಕ್ಕೆ ಸಂವಿಧಾನದ 6ನೇ ಪರಿಚ್ಛೇದದ ಅಡಿ ರಕ್ಷಣೆ ಒದಗಿಸಬೇಕು ಎಂದು ಸೋನಂ ವಾಂಗ್‌ಚುಕ್ ಹೋರಾಟ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಬುಧವಾರ (ಸೆ.23) ವಾಂಗ್‌ಚುಕ್‌ ಹೋರಾಟ ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಯುವಜನರು ಲೇಹ್‌ನಲ್ಲಿ ಬೀದಿಗಿಳಿದಿದ್ದರು. ಇದರಿಂದ ಪ್ರತಿಭಟನೆ ಹಿಂಸಾತ್ಮಕರೂಪ ಪಡೆದಿತ್ತು. ಪ್ರಸ್ತುತ ಸೋನಂ ವಾಂಗ್‌ಚುಕ್ ತನ್ನ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಕೇಂದ್ರದ ವಿರುದ್ದ ವಾಂಗ್‌ಚುಕ್ ಹೋರಾಟ ಕೈಗೊಂಡಿರುವ ನಡುವೆ, ಅವರ ಸಂಸ್ಥೆಗಳ ಮೇಲೆ ಸಿಬಿಐ ತನಿಖೆ ಆರಂಭಿಸಿರುವುದು ಗಮನಾರ್ಹ.

ಲಡಾಖ್ ರಾಜ್ಯ ಸ್ಥಾನಮಾನ ವಿವಾದ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...