Homeಮುಖಪುಟಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

ಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

- Advertisement -
- Advertisement -

ಲಡಾಖ್ ಮೂಲದ ಶಿಕ್ಷಣ ತಜ್ಞ ಮತ್ತು ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿದ ಸಂಸ್ಥೆಯ ವಿರುದ್ಧ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ಆರಂಭಿಸಿದೆ ಎಂದು ಗುರುವಾರ ವರದಿಯಾಗಿದೆ.

ಕೆಲ ಸಮಯದಿಂದ ವಾಂಗ್‌ಚುಕ್ ಅವರ ಸಂಸ್ಥೆಗಳ ವಿರುದ್ದ ತನಿಖೆ ನಡೆಯುತ್ತಿದೆ. ಆದರೆ, ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 10 ದಿನಗಳ ಹಿಂದೆ ಸಿಬಿಐ ತಂಡವು ‘ಒಂದು ಆದೇಶ’ ಪ್ರತಿಯೊಂದಿಗೆ ಬಂದಿದ್ದು, ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ ಲಡಾಖ್ (ಹೆಚ್‌ಐಎಲ್‌) ನಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಗಳ ಕುರಿತು ಗೃಹ ಸಚಿವಾಲಯದ ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂಬುವುದಾಗಿ ಹೇಳಿದ್ದಾರೆ ವಾಂಗ್‌ಚುಕ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದೆ.

“ವಿದೇಶಿ ನಿಧಿಗಳನ್ನು ಸ್ವೀಕರಿಸಲು ನಾವು ಎಫ್‌ಸಿಆರ್‌ಎ ಅಡಿಯಲ್ಲಿ ಅನುಮತಿ ಪಡೆದಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ. ನಾವು ವಿದೇಶಿ ನಿಧಿಗಳ ಮೇಲೆ ಅವಲಂಬಿತರಾಗಲು ಬಯಸುವುದಿಲ್ಲ, ನಾವು ನಮ್ಮ ಜ್ಞಾನವನ್ನು ರಫ್ತು ಮಾಡುತ್ತೇವೆ ಮತ್ತು ಆದಾಯವನ್ನು ಸಂಗ್ರಹಿಸುತ್ತೇವೆ. ಅಂತಹ ಮೂರು ಸಂದರ್ಭಗಳಲ್ಲಿ, ಅವರು ಅದನ್ನು ವಿದೇಶಿ ಕೊಡುಗೆ ಎಂದು ಭಾವಿಸಿದ್ದಾರೆ” ಎಂದು ವಾಂಗ್‌ಚುಕ್ ಹೇಳಿದ್ದಾರೆ.

ಸಿಬಿಐ ತಂಡವು ಕಳೆದ ವಾರ ಹೆಚ್‌ಐಎಎಲ್‌ ಮತ್ತು ಲಡಾಖ್‌ನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಳವಳಿ (ಎಸ್‌ಇಸಿಎಂಒಎಲ್‌) ಗೆ ಭೇಟಿ ನೀಡಿ, 2022ಮತ್ತು 2024ರ ನಡುವೆ ಅವರು ಪಡೆದ ವಿದೇಶಿ ನಿಧಿಗಳ ವಿವರಗಳನ್ನು ಕೋರಿದೆ ಎಂದು ವಾಂಗ್‌ಚುಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಿಬಿಐ ತಂಡಗಳು ಇನ್ನೂ ಲಡಾಖ್‌ನಲ್ಲಿ ಮೊಕ್ಕಾಂ ಹೂಡಿ ಸಂಸ್ಥೆಗಳ ಖಾತೆಗಳು ಮತ್ತು ಹೇಳಿಕೆಗಳನ್ನು ಪರಿಶೀಲಿಸುತ್ತಿವೆ ಎಂದಿದ್ದಾರೆ.

ಕೇಂದ್ರದ ವಿರುದ್ದ ವಾಂಗ್‌ಚುಕ್ ಹೋರಾಟ ಮತ್ತು ಸಿಬಿಐ ತನಿಖೆ

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಈ ಪ್ರದೇಶಕ್ಕೆ ಸಂವಿಧಾನದ 6ನೇ ಪರಿಚ್ಛೇದದ ಅಡಿ ರಕ್ಷಣೆ ಒದಗಿಸಬೇಕು ಎಂದು ಸೋನಂ ವಾಂಗ್‌ಚುಕ್ ಹೋರಾಟ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಬುಧವಾರ (ಸೆ.23) ವಾಂಗ್‌ಚುಕ್‌ ಹೋರಾಟ ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಯುವಜನರು ಲೇಹ್‌ನಲ್ಲಿ ಬೀದಿಗಿಳಿದಿದ್ದರು. ಇದರಿಂದ ಪ್ರತಿಭಟನೆ ಹಿಂಸಾತ್ಮಕರೂಪ ಪಡೆದಿತ್ತು. ಪ್ರಸ್ತುತ ಸೋನಂ ವಾಂಗ್‌ಚುಕ್ ತನ್ನ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಕೇಂದ್ರದ ವಿರುದ್ದ ವಾಂಗ್‌ಚುಕ್ ಹೋರಾಟ ಕೈಗೊಂಡಿರುವ ನಡುವೆ, ಅವರ ಸಂಸ್ಥೆಗಳ ಮೇಲೆ ಸಿಬಿಐ ತನಿಖೆ ಆರಂಭಿಸಿರುವುದು ಗಮನಾರ್ಹ.

ಲಡಾಖ್ ರಾಜ್ಯ ಸ್ಥಾನಮಾನ ವಿವಾದ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...