HomeಮುಖಪುಟFIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

FIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ಕಠಿಣ ವಿಚಾರಣೆಯನ್ನು ಎದುರಿಸಬೇಕಾಯಿತು.

“ಸಚಿವರ ವಿರುದ್ಧದ ಆರೋಪದ ಮೇಲೆ ಏಕೆ ಎಫ್ಐಆರ್ ದಾಖಲಿಸಲಿಲ್ಲ” ಎಂದು ಪರಮ್ ಬೀರ್ ಸಿಂಗ್ ಅವರನ್ನು ಪದೇ ಪದೇ ಪ್ರಶ್ನೆ ಕೇಳಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನೀವು ಪೊಲೀಸ್ ಆಯುಕ್ತರಾಗಿದ್ದೀರಿ, ಕಾನೂನಿಗಿಂತ ನೀವು ದೊಡ್ಡವರ? ಪೊಲೀಸ್ ಅಧಿಕಾರಿಗಳು, ಮಂತ್ರಿಗಳು ಮತ್ತು ರಾಜಕಾರಣಿಗಳು ಕಾನೂನಿಗಿಂತ ಮೇಲಿರುವವರಾ? ನೀವು ಅಷ್ಟು ಎತ್ತರ ಎಂದು ಭಾವಿಸಬೇಡಿ; ಕಾನೂನು ನಿಮಗಿಂತ ದೊಡ್ಡದು” ಎಂದು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ದತ್ತಾ ವಿಚಾರಣೆಯ ವೇಳೆ ಹೇಳಿದ್ದಾರೆ.

“ಇವು ನಗರದಲ್ಲಿ ಪೊಲೀಸ್ ಪಡೆಯಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ, 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ವ್ಯಕ್ತಿಯಿಂದ ಬರುವ ಕಠಿಣ ಆರೋಪಗಳು” ಎಂದು ಪರಮ್ ಬೀರ್ ಸಿಂಗ್ ಹೈಕೋರ್ಟ್‌ಗೆ ತಿಳಿಸಿದರು.

ಇದಕ್ಕೆ ನ್ಯಾಯಾಲಯ, “ತನಿಖೆ ನಡೆಸಲು ಎಫ್‌ಐಆರ್ ಇರಬೇಕು. ನೀವು ಎಫ್‌ಐಆರ್ ದಾಖಲಿಸುವುದನ್ನು ಯಾರು ತಡೆದಿದ್ದರು? ಎಫ್‌ಐಆರ್ ಇಲ್ಲದೆ ಯಾವುದೇ ತನಿಖೆ ನಡೆಸಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿತು.

“ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ನೀವು ನಿರ್ದೇಶನಗಳನ್ನು ಕೇಳುತ್ತಿದ್ದೀರಿ. ಅದನ್ನು ಸಿಬಿಐಗೆ ಹಸ್ತಾಂತರಿಸಲು ಎಫ್ಐಆರ್ ಮತ್ತು ತನಿಖೆ ಎಲ್ಲಿದೆ?” ಎಂದು ಕೋರ್ಟ್ ಪ್ರಶ್ನಿಸಿದೆ.

ಇದನ್ನೂ ಓದಿ:ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

“ನೀವು ಪೊಲೀಸ್ ಅಧಿಕಾರಿ. ಅಪರಾಧ ಎಸಗಲಾಗಿದೆ ಎಂಬುದು ನಿಮಗೆ ತಿಳಿದುಬಂದಿದ್ದರೆ ನೀವು ಎಫ್‌ಐಆರ್ ಹಾಕಬಹುದಿತ್ತು. ನೀವು ಅದನ್ನು ಏಕೆ ಮಾಡಲಿಲ್ಲ? ಅಪರಾಧ ಎಸಗಲಾಗಿದೆ ಎಂದು ನಿಮಗೆ ತಿಳಿದಾಗ ನೀವು ಎಫ್ಐಆರ್ ದಾಖಲಿಸದಿದ್ದರೆ ನಿಮ್ಮ ಕರ್ತವ್ಯದಲ್ಲಿ ನೀವು ವಿಫಲರಾಗಿದ್ದೀರಿ ಎಂದರ್ಥ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಮುಂಬಯಿ ನಗರದ ಪೊಲೀಸ್‌ ಆಯುಕ್ತರಾಗಿದ್ದ ಪರಮ್ ಬೀರ್‌ ಸಿಂಗ್‌ ಅವರನ್ನು ಮಹಾರಾಷ್ಟ್ರ ಹೋಮ್ ಗಾರ್ಡ್ ನ ಡಿಜಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಏಕಾಏಕಿ ಎತ್ತಂಗಡಿ ಮಾಡಿರುವುದರ ಹಿಂದೆ ಭಾರೀ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. ಸಚಿನ್‌ ವಾಜೆ ಪ್ರಕರಣದ ಬಗ್ಗೆ ತಿಳಿದಿರುವ ಹಿನ್ನೆಲೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ಸಿಂಗ್, ಕೋರ್ಟ್‌ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಭಾರೀ ಭ್ರಷ್ಟಚಾರ ಆರೋಪ ಮಾಡಿರುವ ಪರಮ್‌ ಬೀರ್‌ ಸಿಂಗ್‌ ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಫೆ.22 ರಂದು ನಡೆದ ಎಂಪಿ ಮೋಹನ್ ದೆಲ್ಕರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸ್ ದಾಖಲಿಸುವಂತೆ, ಗೃಹ ಸಚಿವ ಅನಿಲ್ ದೇಶ್ ಮುಖ್ ಆದೇಶಿಸಿದ್ದರು. ಈ ರೀತಿ ಎಫ್ಐಆರ್ ದಾಖಲಿಸುವುದಕ್ಕೆ ಕಾನೂನು ತಜ್ಞರು ವಿರೋಧ ವ್ಯಕ್ತಪಡಿಸಿದ್ದರೂ ಸಹ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಎಫ್ಐಆರ್ ದಾಖಲಿಸಲು ಗೃಹ ಸಚಿವರು ಸೂಚಿಸಿದ್ದರು ಎಂದು ಪರಮ್ ಬೀರ್ ಸಿಂಗ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಮುಂಬಯಿ ಆಯುಕ್ತನಾಗಿದ್ದ ವೇಳೆ, ಪ್ರತಿ ತಿಂಗಳೂ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಗೃಹ ಸಚಿವ ಅನಿಲ್ ದೇಶ್ ಮುಖ್ ತಮಗೆ ಟಾರ್ಗೆಟ್ ನೀಡುತ್ತಿದ್ದರು ಎಂದು ಪತ್ರದಲ್ಲಿ ಆರೋಪಿಸಿದ್ದಾರೆ, ಈ ಎರಡು ವಿಚಾರಗಳ ಸಂಬಂಧ ಕೋರ್ಟ್‌ನಲ್ಲಿ ಸಿಂಗ್‌ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಮತ್ತು ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಕೆ ಎಂದು ಬಾಂಬೆ ಹೈಕೋರ್ಟ್ ಹೇಳಿದ್ದು, ವಕೀಲರನ್ನು ತರಾಟೆಗೆ ತೆಗೆದುಕೊಂಡಿತ್ತು.


ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ: ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...