HomeಮುಖಪುಟFIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

FIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ಕಠಿಣ ವಿಚಾರಣೆಯನ್ನು ಎದುರಿಸಬೇಕಾಯಿತು.

“ಸಚಿವರ ವಿರುದ್ಧದ ಆರೋಪದ ಮೇಲೆ ಏಕೆ ಎಫ್ಐಆರ್ ದಾಖಲಿಸಲಿಲ್ಲ” ಎಂದು ಪರಮ್ ಬೀರ್ ಸಿಂಗ್ ಅವರನ್ನು ಪದೇ ಪದೇ ಪ್ರಶ್ನೆ ಕೇಳಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನೀವು ಪೊಲೀಸ್ ಆಯುಕ್ತರಾಗಿದ್ದೀರಿ, ಕಾನೂನಿಗಿಂತ ನೀವು ದೊಡ್ಡವರ? ಪೊಲೀಸ್ ಅಧಿಕಾರಿಗಳು, ಮಂತ್ರಿಗಳು ಮತ್ತು ರಾಜಕಾರಣಿಗಳು ಕಾನೂನಿಗಿಂತ ಮೇಲಿರುವವರಾ? ನೀವು ಅಷ್ಟು ಎತ್ತರ ಎಂದು ಭಾವಿಸಬೇಡಿ; ಕಾನೂನು ನಿಮಗಿಂತ ದೊಡ್ಡದು” ಎಂದು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ದತ್ತಾ ವಿಚಾರಣೆಯ ವೇಳೆ ಹೇಳಿದ್ದಾರೆ.

“ಇವು ನಗರದಲ್ಲಿ ಪೊಲೀಸ್ ಪಡೆಯಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ, 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ವ್ಯಕ್ತಿಯಿಂದ ಬರುವ ಕಠಿಣ ಆರೋಪಗಳು” ಎಂದು ಪರಮ್ ಬೀರ್ ಸಿಂಗ್ ಹೈಕೋರ್ಟ್‌ಗೆ ತಿಳಿಸಿದರು.

ಇದಕ್ಕೆ ನ್ಯಾಯಾಲಯ, “ತನಿಖೆ ನಡೆಸಲು ಎಫ್‌ಐಆರ್ ಇರಬೇಕು. ನೀವು ಎಫ್‌ಐಆರ್ ದಾಖಲಿಸುವುದನ್ನು ಯಾರು ತಡೆದಿದ್ದರು? ಎಫ್‌ಐಆರ್ ಇಲ್ಲದೆ ಯಾವುದೇ ತನಿಖೆ ನಡೆಸಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿತು.

“ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ನೀವು ನಿರ್ದೇಶನಗಳನ್ನು ಕೇಳುತ್ತಿದ್ದೀರಿ. ಅದನ್ನು ಸಿಬಿಐಗೆ ಹಸ್ತಾಂತರಿಸಲು ಎಫ್ಐಆರ್ ಮತ್ತು ತನಿಖೆ ಎಲ್ಲಿದೆ?” ಎಂದು ಕೋರ್ಟ್ ಪ್ರಶ್ನಿಸಿದೆ.

ಇದನ್ನೂ ಓದಿ:ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

“ನೀವು ಪೊಲೀಸ್ ಅಧಿಕಾರಿ. ಅಪರಾಧ ಎಸಗಲಾಗಿದೆ ಎಂಬುದು ನಿಮಗೆ ತಿಳಿದುಬಂದಿದ್ದರೆ ನೀವು ಎಫ್‌ಐಆರ್ ಹಾಕಬಹುದಿತ್ತು. ನೀವು ಅದನ್ನು ಏಕೆ ಮಾಡಲಿಲ್ಲ? ಅಪರಾಧ ಎಸಗಲಾಗಿದೆ ಎಂದು ನಿಮಗೆ ತಿಳಿದಾಗ ನೀವು ಎಫ್ಐಆರ್ ದಾಖಲಿಸದಿದ್ದರೆ ನಿಮ್ಮ ಕರ್ತವ್ಯದಲ್ಲಿ ನೀವು ವಿಫಲರಾಗಿದ್ದೀರಿ ಎಂದರ್ಥ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಮುಂಬಯಿ ನಗರದ ಪೊಲೀಸ್‌ ಆಯುಕ್ತರಾಗಿದ್ದ ಪರಮ್ ಬೀರ್‌ ಸಿಂಗ್‌ ಅವರನ್ನು ಮಹಾರಾಷ್ಟ್ರ ಹೋಮ್ ಗಾರ್ಡ್ ನ ಡಿಜಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಏಕಾಏಕಿ ಎತ್ತಂಗಡಿ ಮಾಡಿರುವುದರ ಹಿಂದೆ ಭಾರೀ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. ಸಚಿನ್‌ ವಾಜೆ ಪ್ರಕರಣದ ಬಗ್ಗೆ ತಿಳಿದಿರುವ ಹಿನ್ನೆಲೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ಸಿಂಗ್, ಕೋರ್ಟ್‌ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಭಾರೀ ಭ್ರಷ್ಟಚಾರ ಆರೋಪ ಮಾಡಿರುವ ಪರಮ್‌ ಬೀರ್‌ ಸಿಂಗ್‌ ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಫೆ.22 ರಂದು ನಡೆದ ಎಂಪಿ ಮೋಹನ್ ದೆಲ್ಕರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸ್ ದಾಖಲಿಸುವಂತೆ, ಗೃಹ ಸಚಿವ ಅನಿಲ್ ದೇಶ್ ಮುಖ್ ಆದೇಶಿಸಿದ್ದರು. ಈ ರೀತಿ ಎಫ್ಐಆರ್ ದಾಖಲಿಸುವುದಕ್ಕೆ ಕಾನೂನು ತಜ್ಞರು ವಿರೋಧ ವ್ಯಕ್ತಪಡಿಸಿದ್ದರೂ ಸಹ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಎಫ್ಐಆರ್ ದಾಖಲಿಸಲು ಗೃಹ ಸಚಿವರು ಸೂಚಿಸಿದ್ದರು ಎಂದು ಪರಮ್ ಬೀರ್ ಸಿಂಗ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಮುಂಬಯಿ ಆಯುಕ್ತನಾಗಿದ್ದ ವೇಳೆ, ಪ್ರತಿ ತಿಂಗಳೂ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಗೃಹ ಸಚಿವ ಅನಿಲ್ ದೇಶ್ ಮುಖ್ ತಮಗೆ ಟಾರ್ಗೆಟ್ ನೀಡುತ್ತಿದ್ದರು ಎಂದು ಪತ್ರದಲ್ಲಿ ಆರೋಪಿಸಿದ್ದಾರೆ, ಈ ಎರಡು ವಿಚಾರಗಳ ಸಂಬಂಧ ಕೋರ್ಟ್‌ನಲ್ಲಿ ಸಿಂಗ್‌ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಮತ್ತು ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಕೆ ಎಂದು ಬಾಂಬೆ ಹೈಕೋರ್ಟ್ ಹೇಳಿದ್ದು, ವಕೀಲರನ್ನು ತರಾಟೆಗೆ ತೆಗೆದುಕೊಂಡಿತ್ತು.


ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ: ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...