Homeಮುಖಪುಟನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ಬಿಹಾರ ಪೊಲೀಸರು "ಪೂರ್ಣ ಪ್ರಮಾಣದ ಎಫ್ಐಆರ್" ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯನ್ನು ಸಿಬಿಐ ವಹಿಸಲು ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ.

ಸುಶಾಂತ್ ಸಿಂಗ್ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಪಾಟ್ನಾದಲ್ಲಿ ನೋಂದಾಯಿಸಲಾದ ಎಫ್ಐಆರ್ ಸರಿಯಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಹಾರ ಸಮರ್ಥವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಪ್ರಕರಣದ ಪ್ರಮುಖ ಅಂಶಗಳು ಇಲ್ಲಿವೆ:

  • ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ, ನಟ ರಿಯಾ ಚಕ್ರವರ್ತಿ ಪಾಟ್ನಾದಲ್ಲಿ ಸುಶಾಂತ್ ಕುಟುಂಬ ನೋಂದಾಯಿಸಿರುವ ಎಫ್‌ಐಆರ್ ಅಥವಾ ಪ್ರಾಥಮಿಕ ಮಾಹಿತಿ ವರದಿಯನ್ನು ಮುಂಬೈಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೋರೆ ಹೊಗಿದ್ದರು.
  • ಮುಂಬೈ ಪೊಲೀಸರು ‘ಆಕಸ್ಮಿಕ ಸಾವು’ ಮಾತ್ರ ಎಂದು ವರದಿ ದಾಖಲಿಸಿದ್ದರಿಂದ, ಅದು ಸೀಮಿತ ತನಿಖಾ ವ್ಯಾಪ್ತಿಯನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಬಿಹಾರ ಪೊಲೀಸರು “ಪೂರ್ಣ ಪ್ರಮಾಣದ ಎಫ್ಐಆರ್” ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
  • ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ ಚಲನಚಿತ್ರ ಜಗತ್ತಿನಲ್ಲಿ ಪ್ರತಿಭಾನ್ವಿತ ನಟರಾಗಿದ್ದರು. ಆದರೆ ಈ ಉದಯೋನ್ಮುಖ ನಟನ ಪೂರ್ಣ ಸಾಮರ್ಥ್ಯ ಬೆಳಕಿಗೆ ಬರುವ ಮೊದಲೇ ಅವರು ನಿಧನರಾದರು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳು ತನಿಖೆಯ ಫಲಿತಾಂಶಕ್ಕಾಗಿ ತೀವ್ರವಾಗಿ ಕಾಯುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
  • ಸಿಬಿಐ ತನಿಖೆಗೆ ಸಹಕರಿಸಲು ಮತ್ತು ಎಲ್ಲಾ ಸಹಾಯವನ್ನು ನೀಡಲು ಮಹಾರಾಷ್ಟ್ರಕ್ಕೆ ಆದೇಶಿಸಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿದ್ದರೆ, ಅದನ್ನೂ ಸಹ ಸಿಬಿಐ ತನಿಖೆ ನಡೆಸಲಿದೆ ಎಂದು ಉನ್ನತ ನ್ಯಾಯಾಲಯ ಹೇಳಿದೆ.
  • ಸುಶಾಂತ್, ಮುಂಬೈನ ಅವರದೇ ಅಪಾರ್ಟ್ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇದು ಆತ್ಮಹತ್ಯೆ ಎಂದು ಮುಂಬೈ ಪೊಲೀಸರು ತಿಳಿಸಿದ್ದರು. ಜೊತೆಗೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಿತ್ತು.
  • ಒಂದು ತಿಂಗಳ ನಂತರ, ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಅವರು, ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬವು ತನ್ನ ಮಗನನ್ನು ಹಣಕಾಸಿನ ವಿಷಯದಲ್ಲಿ ಮೋಸ ಮಾಡಿದ್ದಾರೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಹಾರದಲ್ಲಿ ಪ್ರಕರಣ ದಾಖಲಿಸಿದರು.
  •  ನಟನ ಆರ್ಥಿಕ ಸ್ಥಿತಿ ಮತ್ತು ಅವರ ಖಾತೆಯಿಂದ ಕೋಟಿಗಟ್ಟಲೆ ಹಣ ತೆಗೆದುಕೊಳ್ಳಲಾಗಿದೆ ಎನ್ನುವ ದೂರಿನ ಮೇರೆಗೆ ಬಿಹಾರ ಪೊಲೀಸ್ ದೂರು ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ತನಿಖೆ ನಡೆಸಲು ಕಾರಣವಾಯಿತು.
  • ರಿಯಾ ಚಕ್ರವರ್ತಿ ಸುಶಾಂತ್ ಅವರ ತಂದೆಯ ಆರೋಪವನ್ನು “ಸಂಪೂರ್ಣ ಅಸಂಬದ್ಧ” ಎಂದು ನಿರಾಕರಿಸಿದ್ದಾರೆ. ತಾನು ನ್ಯಾಯಾಲಯದ ವಾದಗಳಲ್ಲಿ, ಮುಂಬೈ ಪೊಲೀಸ್ ತನಿಖೆಯನ್ನು ರದ್ದುಗೊಳಿಸುವ ಕ್ರಮವು ಬಿಹಾರ ಚುನಾವಣೆಗೆ ಮುನ್ನ ರಾಜಕೀಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.
  • ನ್ಯಾಯಾಲಯದ ಆದೇಶದ ನಂತರ, ಬಿಹಾರದಿಂದ ಮತ್ತು ಚಲನಚಿತ್ರೋದ್ಯಮದಿಂದಲೂ ಹಲವು ಪ್ರತಿಕ್ರಿಯೆಗಳು ಬಂದವು. “ಬಿಹಾರದಲ್ಲಿ ದಾಖಲಾದ ಎಫ್‌ಐಆರ್ ಆಧಾರದ ಮೇಲೆ ಸಿಬಿಐ, ಸುಶಾಂತ್ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ” ಎಂದು ಉಪಮುಖ್ಯಮಂತ್ರಿ ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.
  • ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದ ಸುಶಾಂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ, “ದೇವರಿಗೆ ಧನ್ಯವಾದಗಳು! ನೀವು ನಮ್ಮ ಪ್ರಾರ್ಥನೆಗೆ ಉತ್ತರಿಸಿದ್ದೀರಿ !! ಆದರೆ ಇದು ಕೇವಲ ಪ್ರಾರಂಭ. ಸತ್ಯದತ್ತ ಮೊದಲ ಹೆಜ್ಜೆ! ಸಂಪೂರ್ಣ ನಂಬಿಕೆಯಿದೆ. ಸಿಬಿಐ !!” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು ಮಾಡಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...