Homeಮುಖಪುಟನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ಬಿಹಾರ ಪೊಲೀಸರು "ಪೂರ್ಣ ಪ್ರಮಾಣದ ಎಫ್ಐಆರ್" ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯನ್ನು ಸಿಬಿಐ ವಹಿಸಲು ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ.

ಸುಶಾಂತ್ ಸಿಂಗ್ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಪಾಟ್ನಾದಲ್ಲಿ ನೋಂದಾಯಿಸಲಾದ ಎಫ್ಐಆರ್ ಸರಿಯಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಹಾರ ಸಮರ್ಥವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಪ್ರಕರಣದ ಪ್ರಮುಖ ಅಂಶಗಳು ಇಲ್ಲಿವೆ:

  • ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ, ನಟ ರಿಯಾ ಚಕ್ರವರ್ತಿ ಪಾಟ್ನಾದಲ್ಲಿ ಸುಶಾಂತ್ ಕುಟುಂಬ ನೋಂದಾಯಿಸಿರುವ ಎಫ್‌ಐಆರ್ ಅಥವಾ ಪ್ರಾಥಮಿಕ ಮಾಹಿತಿ ವರದಿಯನ್ನು ಮುಂಬೈಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೋರೆ ಹೊಗಿದ್ದರು.
  • ಮುಂಬೈ ಪೊಲೀಸರು ‘ಆಕಸ್ಮಿಕ ಸಾವು’ ಮಾತ್ರ ಎಂದು ವರದಿ ದಾಖಲಿಸಿದ್ದರಿಂದ, ಅದು ಸೀಮಿತ ತನಿಖಾ ವ್ಯಾಪ್ತಿಯನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಬಿಹಾರ ಪೊಲೀಸರು “ಪೂರ್ಣ ಪ್ರಮಾಣದ ಎಫ್ಐಆರ್” ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
  • ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ ಚಲನಚಿತ್ರ ಜಗತ್ತಿನಲ್ಲಿ ಪ್ರತಿಭಾನ್ವಿತ ನಟರಾಗಿದ್ದರು. ಆದರೆ ಈ ಉದಯೋನ್ಮುಖ ನಟನ ಪೂರ್ಣ ಸಾಮರ್ಥ್ಯ ಬೆಳಕಿಗೆ ಬರುವ ಮೊದಲೇ ಅವರು ನಿಧನರಾದರು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳು ತನಿಖೆಯ ಫಲಿತಾಂಶಕ್ಕಾಗಿ ತೀವ್ರವಾಗಿ ಕಾಯುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
  • ಸಿಬಿಐ ತನಿಖೆಗೆ ಸಹಕರಿಸಲು ಮತ್ತು ಎಲ್ಲಾ ಸಹಾಯವನ್ನು ನೀಡಲು ಮಹಾರಾಷ್ಟ್ರಕ್ಕೆ ಆದೇಶಿಸಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿದ್ದರೆ, ಅದನ್ನೂ ಸಹ ಸಿಬಿಐ ತನಿಖೆ ನಡೆಸಲಿದೆ ಎಂದು ಉನ್ನತ ನ್ಯಾಯಾಲಯ ಹೇಳಿದೆ.
  • ಸುಶಾಂತ್, ಮುಂಬೈನ ಅವರದೇ ಅಪಾರ್ಟ್ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇದು ಆತ್ಮಹತ್ಯೆ ಎಂದು ಮುಂಬೈ ಪೊಲೀಸರು ತಿಳಿಸಿದ್ದರು. ಜೊತೆಗೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಿತ್ತು.
  • ಒಂದು ತಿಂಗಳ ನಂತರ, ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಅವರು, ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬವು ತನ್ನ ಮಗನನ್ನು ಹಣಕಾಸಿನ ವಿಷಯದಲ್ಲಿ ಮೋಸ ಮಾಡಿದ್ದಾರೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಹಾರದಲ್ಲಿ ಪ್ರಕರಣ ದಾಖಲಿಸಿದರು.
  •  ನಟನ ಆರ್ಥಿಕ ಸ್ಥಿತಿ ಮತ್ತು ಅವರ ಖಾತೆಯಿಂದ ಕೋಟಿಗಟ್ಟಲೆ ಹಣ ತೆಗೆದುಕೊಳ್ಳಲಾಗಿದೆ ಎನ್ನುವ ದೂರಿನ ಮೇರೆಗೆ ಬಿಹಾರ ಪೊಲೀಸ್ ದೂರು ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ತನಿಖೆ ನಡೆಸಲು ಕಾರಣವಾಯಿತು.
  • ರಿಯಾ ಚಕ್ರವರ್ತಿ ಸುಶಾಂತ್ ಅವರ ತಂದೆಯ ಆರೋಪವನ್ನು “ಸಂಪೂರ್ಣ ಅಸಂಬದ್ಧ” ಎಂದು ನಿರಾಕರಿಸಿದ್ದಾರೆ. ತಾನು ನ್ಯಾಯಾಲಯದ ವಾದಗಳಲ್ಲಿ, ಮುಂಬೈ ಪೊಲೀಸ್ ತನಿಖೆಯನ್ನು ರದ್ದುಗೊಳಿಸುವ ಕ್ರಮವು ಬಿಹಾರ ಚುನಾವಣೆಗೆ ಮುನ್ನ ರಾಜಕೀಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.
  • ನ್ಯಾಯಾಲಯದ ಆದೇಶದ ನಂತರ, ಬಿಹಾರದಿಂದ ಮತ್ತು ಚಲನಚಿತ್ರೋದ್ಯಮದಿಂದಲೂ ಹಲವು ಪ್ರತಿಕ್ರಿಯೆಗಳು ಬಂದವು. “ಬಿಹಾರದಲ್ಲಿ ದಾಖಲಾದ ಎಫ್‌ಐಆರ್ ಆಧಾರದ ಮೇಲೆ ಸಿಬಿಐ, ಸುಶಾಂತ್ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ” ಎಂದು ಉಪಮುಖ್ಯಮಂತ್ರಿ ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.
  • ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದ ಸುಶಾಂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ, “ದೇವರಿಗೆ ಧನ್ಯವಾದಗಳು! ನೀವು ನಮ್ಮ ಪ್ರಾರ್ಥನೆಗೆ ಉತ್ತರಿಸಿದ್ದೀರಿ !! ಆದರೆ ಇದು ಕೇವಲ ಪ್ರಾರಂಭ. ಸತ್ಯದತ್ತ ಮೊದಲ ಹೆಜ್ಜೆ! ಸಂಪೂರ್ಣ ನಂಬಿಕೆಯಿದೆ. ಸಿಬಿಐ !!” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು ಮಾಡಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...