Homeಮುಖಪುಟನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ಬಿಹಾರ ಪೊಲೀಸರು "ಪೂರ್ಣ ಪ್ರಮಾಣದ ಎಫ್ಐಆರ್" ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯನ್ನು ಸಿಬಿಐ ವಹಿಸಲು ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ.

ಸುಶಾಂತ್ ಸಿಂಗ್ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಪಾಟ್ನಾದಲ್ಲಿ ನೋಂದಾಯಿಸಲಾದ ಎಫ್ಐಆರ್ ಸರಿಯಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಹಾರ ಸಮರ್ಥವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಪ್ರಕರಣದ ಪ್ರಮುಖ ಅಂಶಗಳು ಇಲ್ಲಿವೆ:

  • ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ, ನಟ ರಿಯಾ ಚಕ್ರವರ್ತಿ ಪಾಟ್ನಾದಲ್ಲಿ ಸುಶಾಂತ್ ಕುಟುಂಬ ನೋಂದಾಯಿಸಿರುವ ಎಫ್‌ಐಆರ್ ಅಥವಾ ಪ್ರಾಥಮಿಕ ಮಾಹಿತಿ ವರದಿಯನ್ನು ಮುಂಬೈಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೋರೆ ಹೊಗಿದ್ದರು.
  • ಮುಂಬೈ ಪೊಲೀಸರು ‘ಆಕಸ್ಮಿಕ ಸಾವು’ ಮಾತ್ರ ಎಂದು ವರದಿ ದಾಖಲಿಸಿದ್ದರಿಂದ, ಅದು ಸೀಮಿತ ತನಿಖಾ ವ್ಯಾಪ್ತಿಯನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಬಿಹಾರ ಪೊಲೀಸರು “ಪೂರ್ಣ ಪ್ರಮಾಣದ ಎಫ್ಐಆರ್” ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
  • ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ ಚಲನಚಿತ್ರ ಜಗತ್ತಿನಲ್ಲಿ ಪ್ರತಿಭಾನ್ವಿತ ನಟರಾಗಿದ್ದರು. ಆದರೆ ಈ ಉದಯೋನ್ಮುಖ ನಟನ ಪೂರ್ಣ ಸಾಮರ್ಥ್ಯ ಬೆಳಕಿಗೆ ಬರುವ ಮೊದಲೇ ಅವರು ನಿಧನರಾದರು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳು ತನಿಖೆಯ ಫಲಿತಾಂಶಕ್ಕಾಗಿ ತೀವ್ರವಾಗಿ ಕಾಯುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
  • ಸಿಬಿಐ ತನಿಖೆಗೆ ಸಹಕರಿಸಲು ಮತ್ತು ಎಲ್ಲಾ ಸಹಾಯವನ್ನು ನೀಡಲು ಮಹಾರಾಷ್ಟ್ರಕ್ಕೆ ಆದೇಶಿಸಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿದ್ದರೆ, ಅದನ್ನೂ ಸಹ ಸಿಬಿಐ ತನಿಖೆ ನಡೆಸಲಿದೆ ಎಂದು ಉನ್ನತ ನ್ಯಾಯಾಲಯ ಹೇಳಿದೆ.
  • ಸುಶಾಂತ್, ಮುಂಬೈನ ಅವರದೇ ಅಪಾರ್ಟ್ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇದು ಆತ್ಮಹತ್ಯೆ ಎಂದು ಮುಂಬೈ ಪೊಲೀಸರು ತಿಳಿಸಿದ್ದರು. ಜೊತೆಗೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಿತ್ತು.
  • ಒಂದು ತಿಂಗಳ ನಂತರ, ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಅವರು, ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬವು ತನ್ನ ಮಗನನ್ನು ಹಣಕಾಸಿನ ವಿಷಯದಲ್ಲಿ ಮೋಸ ಮಾಡಿದ್ದಾರೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಹಾರದಲ್ಲಿ ಪ್ರಕರಣ ದಾಖಲಿಸಿದರು.
  •  ನಟನ ಆರ್ಥಿಕ ಸ್ಥಿತಿ ಮತ್ತು ಅವರ ಖಾತೆಯಿಂದ ಕೋಟಿಗಟ್ಟಲೆ ಹಣ ತೆಗೆದುಕೊಳ್ಳಲಾಗಿದೆ ಎನ್ನುವ ದೂರಿನ ಮೇರೆಗೆ ಬಿಹಾರ ಪೊಲೀಸ್ ದೂರು ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ತನಿಖೆ ನಡೆಸಲು ಕಾರಣವಾಯಿತು.
  • ರಿಯಾ ಚಕ್ರವರ್ತಿ ಸುಶಾಂತ್ ಅವರ ತಂದೆಯ ಆರೋಪವನ್ನು “ಸಂಪೂರ್ಣ ಅಸಂಬದ್ಧ” ಎಂದು ನಿರಾಕರಿಸಿದ್ದಾರೆ. ತಾನು ನ್ಯಾಯಾಲಯದ ವಾದಗಳಲ್ಲಿ, ಮುಂಬೈ ಪೊಲೀಸ್ ತನಿಖೆಯನ್ನು ರದ್ದುಗೊಳಿಸುವ ಕ್ರಮವು ಬಿಹಾರ ಚುನಾವಣೆಗೆ ಮುನ್ನ ರಾಜಕೀಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.
  • ನ್ಯಾಯಾಲಯದ ಆದೇಶದ ನಂತರ, ಬಿಹಾರದಿಂದ ಮತ್ತು ಚಲನಚಿತ್ರೋದ್ಯಮದಿಂದಲೂ ಹಲವು ಪ್ರತಿಕ್ರಿಯೆಗಳು ಬಂದವು. “ಬಿಹಾರದಲ್ಲಿ ದಾಖಲಾದ ಎಫ್‌ಐಆರ್ ಆಧಾರದ ಮೇಲೆ ಸಿಬಿಐ, ಸುಶಾಂತ್ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ” ಎಂದು ಉಪಮುಖ್ಯಮಂತ್ರಿ ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.
  • ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದ ಸುಶಾಂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ, “ದೇವರಿಗೆ ಧನ್ಯವಾದಗಳು! ನೀವು ನಮ್ಮ ಪ್ರಾರ್ಥನೆಗೆ ಉತ್ತರಿಸಿದ್ದೀರಿ !! ಆದರೆ ಇದು ಕೇವಲ ಪ್ರಾರಂಭ. ಸತ್ಯದತ್ತ ಮೊದಲ ಹೆಜ್ಜೆ! ಸಂಪೂರ್ಣ ನಂಬಿಕೆಯಿದೆ. ಸಿಬಿಐ !!” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು ಮಾಡಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...