Homeಮುಖಪುಟಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

ಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

- Advertisement -
- Advertisement -

ಮದ್ಯ ನೀತಿಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬಳಿಕ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ರೈಡ್‌ ಮಾಡಲಾಗಿದ್ದು, ಇದರ ಬೆನ್ನಲ್ಲೇ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಶುಕ್ರವಾರ ಸಂಜೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಅಬಕಾರಿ ಇಲಾಖೆಯ ಉಸ್ತುವಾರಿಯನ್ನು ಮನೀಶ್ ಸಿಸೋಡಿಯಾ ಅವರೇ ನೋಡಿಕೊಳ್ಳುತ್ತಿದ್ದು ಸಿಬಿಐ ದಾಳಿ ನಡೆಸಿದೆ. ಮದ್ಯದ ನೀತಿ ಉಲ್ಲಂಘನೆಗಳ ಕುರಿತು ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಳ ಹೆಸರುಗಳು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ವರ್ಗಾವಣೆ ಆದೇಶ ಹೊರಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳ ಪಟ್ಟಿಯಲ್ಲಿ ಸಿಸೋಡಿಯಾ ಅವರ ಹೆಸರು ಮೊದಲ ಸ್ಥಾನದಲ್ಲಿದೆ. ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಮತ್ತು ನಕಲಿ ಖಾತೆ ಆರೋಪಗಳನ್ನು ಹೊರಿಸಲಾಗಿದೆ.

ದೆಹಲಿಯಲ್ಲಿರುವ ಸಿಸೋಡಿಯಾ ಅವರ ಮನೆಯ ಜೊತೆಗೆ, ಏಳು ರಾಜ್ಯಗಳಾದ್ಯಂತ 31 ಇತರ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯ ನಡೆಸಿದೆ. 14 ಗಂಟೆಗಳ ದಾಳಿಯ ನಂತರ ಮನೀಶ್ ಸಿಸೋಡಿಯಾ ಅವರ ಕಂಪ್ಯೂಟರ್ ಮತ್ತು ಫೋನ್ ಅನ್ನು ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.

ನವೆಂಬರ್‌ನಲ್ಲಿ ಜಾರಿಗೆ ತಂದ ನೀತಿಯಡಿ ಮದ್ಯದಂಗಡಿ ಪರವಾನಗಿಯನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ. ದೆಹಲಿ ಪೊಲೀಸ್‌ನ ಆರ್ಥಿಕ ಅಪರಾಧಗಳ ವಿಭಾಗದಿಂದ ತನಿಖೆಯನ್ನು ಪ್ರಾರಂಭಿಸಿದ ನಂತರ ಜುಲೈ 30 ರಂದು ಸಿಸೋಡಿಯಾ ಅವರು ಪರವಾನಗಿಯನ್ನು ಹಿಂದಕ್ಕೆ ಪಡೆದರು.

ದೆಹಲಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುವ ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿಯಿಲ್ಲದೆ ದೆಹಲಿಯಲ್ಲಿ ಮದ್ಯ ಮಾರಾಟ ಮಾಡಲು ಯಾರಿಗೆ ಅವಕಾಶ ನೀಡಬಹುದು ಎಂಬ ಹೊಸ ನೀತಿಯನ್ನು ಸಿಸೋಡಿಯಾ ಪರಿಚಯಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಸಿಸೋಡಿಯಾ ಅವರ ಸಹವರ್ತಿ ನಿರ್ವಹಿಸುತ್ತಿರುವ ಕಂಪನಿಗೆ ಮದ್ಯದ ವ್ಯಾಪಾರಿಯೊಬ್ಬರು ₹ 1 ಕೋಟಿ ಪಾವತಿಸಿದ್ದಾರೆ ಎಂದು ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಪ್ರಸ್ತಾಪಿಸಿದೆ. ಅಬಕಾರಿ ನೀತಿಯ ರಚನೆ, ಅನುಷ್ಠಾನದಲ್ಲಿನ ಅಕ್ರಮಗಳಲ್ಲಿ ಮದ್ಯದ ಕಂಪನಿಗಳು ಮತ್ತು ಮಧ್ಯವರ್ತಿಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಇದನ್ನೂ ಓದಿರಿ: ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

ಹೊಸ ಮದ್ಯ ನೀತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮುಖ್ಯ ಕಾರ್ಯದರ್ಶಿಯವರು ವರದಿ ನೀಡಿದ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಕಳೆದ ತಿಂಗಳು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಎಎಪಿಯು ಅಬಕಾರಿ ನೀತಿಯನ್ನು ಏಕೈಕ ಗುರಿ ಸಾಧನೆಗೆ ತಂದಿದೆ. ಖಾಸಗಿ ಮದ್ಯದ ಬ್ಯಾರನ್‌ಗಳಿಗೆ ಆರ್ಥಿಕ ಲಾಭ ತಂದುಕೊಡುವುದಕ್ಕಾಗಿ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮನೀಶ್‌ ಸಿಸೋಡಿಯಾ ಆರೋಪಗಳನ್ನು ಅಲ್ಲಗಳೆದಿದ್ದಾರೆ. “ನಾನು ಯಾವುದೇ ತಪ್ಪನ್ನು ಮಾಡಿಲ್ಲ. ಬಿಜೆಪಿಯು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ” ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಿಸೋಡಿಯಾ ಅವರನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಂದ್ರೀಯ ಸಂಸ್ಥೆಗಳು ಸಂವಿಧಾನಕ್ಕೆ ಬದ್ದವೋ ಇಲ್ಲವೇ ಯಾವುದೋ ರಾಜಕೀಯ ಪಕ್ಷಗಳ ಗುಲಾಮರೇ,ಯಾವುದು ಶಾಶ್ವತವಲ್ಲ, ಇಲ್ಲಿ ಕಾರ್ಯವಹಿಸುವ ಎಲ್ಲರೂ ಆನ್ನಾ ತಿನ್ನೋದು ಸಾರ್ವಜನಿಕರ ತೆರಿಗೆ ಹಣದ ಬಿಕ್ಷೆಯಿಂದ ಅನ್ನೋದು ಈ ಸಂಸ್ಥೆಗಳು ,ಗವರ್ನರ್ ಜನರಲ್ ಅನ್ನಿಸಿಕೊಳ್ಳೋ ಕೇಂದ್ರ ಸರ್ಕಾರದ ಗುಲಾಮ,ಕೇಂದ್ರ ಸರ್ಕಾರದ ಪ್ರಧಾನಿಯಿಂದ ಹಿಡಿದು ಎಲ್ಲಾ ಮಂತ್ರಿಗಳಿಗೂ ಅನ್ವಹಿಸತ್ತೆ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...